AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೇಕ್ ಹೆಸರಲ್ಲಿ ದಕ್ಷಿಣದ ಮತ್ತೊಂದು ಚಿತ್ರವನ್ನು ಹಾಳು ಮಾಡಿದ ಬಾಲಿವುಡ್​; ಇಲ್ಲಿದೆ ಟ್ರೇಲರ್

‘ಬೆಂಗಳೂರು ಡೇಸ್​’ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್, ನಿವೀನ್ ಪೌಳಿ, ನಜ್ರಿಯಾ ನಜೀಮ್, ಫಹಾದ್ ಫಾಸಿಲ್ ನಟಿಸಿದ್ದರು. ಈ ಸಿನಿಮಾ ಸಿಂಪಲ್ ಆಗಿದ್ದ ಕಾರಣದಿಂದಲೇ ಚಿತ್ರವನ್ನು ಜನರು ಇಷ್ಟಪಟ್ಟರು. ಈಗ ಸಿನಿಮಾ ಹಿಂದಿಗೆ ರಿಮೇಕ್ ಆಗಿದೆ. ‘ಯಾರಿಯಾ 2’ ಹೆಸರಿನಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಟ್ರೇಲರ್ ರಿಲೀಸ್ ಆಗಿದೆ.

ರಿಮೇಕ್ ಹೆಸರಲ್ಲಿ ದಕ್ಷಿಣದ ಮತ್ತೊಂದು ಚಿತ್ರವನ್ನು ಹಾಳು ಮಾಡಿದ ಬಾಲಿವುಡ್​; ಇಲ್ಲಿದೆ ಟ್ರೇಲರ್
ಯಾರಿಯಾನ್ 2
Follow us
ರಾಜೇಶ್ ದುಗ್ಗುಮನೆ
|

Updated on:Sep 28, 2023 | 7:40 AM

2014ರಲ್ಲಿ ರಿಲೀಸ್ ಆದ ‘ಬೆಂಗಳೂರು ಡೇಸ್’ ಸಿನಿಮಾ (Bangalore Days) ಸೂಪರ್ ಹಿಟ್ ಆಯಿತು. ಮಲಯಾಳಂನ ಈ ಸಿನಿಮಾ ಸಿಂಪಲ್ ಆಗಿತ್ತು. ಈ ಕಾರಣದಿಂದಲೇ ಜನರಿಗೆ ಇಷ್ಟವಾಯಿತು. ಇನ್ನು ಸಿನಿಮಾದ ಬಹುತೇಕ ಶೂಟಿಂಗ್ ಬೆಂಗಳೂರಿನಲ್ಲೇ ನಡೆದಿದ್ದರಿಂದ ಕರ್ನಾಟಕದವರಿಗೂ ಇಷ್ಟವಾಗಿತ್ತು. ಈಗ ಸಿನಿಮಾನ ಬಾಲಿವುಡ್​ನವರು ರಿಮೇಕ್ ಮಾಡಿದ್ದಾರೆ. ಚಿತ್ರದ ಟ್ರೇಲರ್ ನೋಡಿದ ಅನೇಕರು ಬಾಯಿಗೆ ಬಂದಂತೆ ಬೈದಿದ್ದಾರೆ. ಮೂಲ ಚಿತ್ರವನ್ನು ಹಾಳು ಮಾಡಲಾಗಿದೆ ಎಂದು ಅನೇಕರು ಆರೋಪಿಸಿದ್ದಾರೆ.

‘ಬೆಂಗಳೂರು ಡೇಸ್​’ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್, ನಿವೀನ್ ಪೌಳಿ, ನಜ್ರಿಯಾ ನಜೀಮ್, ಫಹಾದ್ ಫಾಸಿಲ್ ನಟಿಸಿದ್ದರು. ಈ ಸಿನಿಮಾ ಸಿಂಪಲ್ ಆಗಿದ್ದ ಕಾರಣದಿಂದಲೇ ಚಿತ್ರವನ್ನು ಜನರು ಇಷ್ಟಪಟ್ಟರು. ಈಗ ಸಿನಿಮಾ ಹಿಂದಿಗೆ ರಿಮೇಕ್ ಆಗಿದೆ. ‘ಯಾರಿಯಾ 2’ ಹೆಸರಿನಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಟ್ರೇಲರ್ ರಿಲೀಸ್ ಆಗಿದೆ. ಮೂಲ ಸಿನಿಮಾ ನೋಡಿರುವ ಅನೇಕರು ಈ ಚಿತ್ರದ ಟ್ರೇಲರ್ ತೆಗಳಿದ್ದಾರೆ.

ರಾಧಿಕಾ ರಾವ್ ಹಾಗೂ ವಿನಯ್ ಸಪ್ರು ಅವರು ‘ಬೆಂಗಳೂರು ಡೇಸ್’ ಚಿತ್ರವನ್ನು ‘ಯಾರಿಯಾ 2’ ಹೆಸರಲ್ಲಿ ರಿಮೇಕ್ ಮಾಡಿದ್ದಾರೆ. ಟಿ-ಸೀರೀಸ್ ಬ್ಯಾನರ್ ಅಡಿಯಲ್ಲಿ ಭೂಷಣ್ ಕುಮಾರ್ ಮೊದಲಾದವರು ಸಿನಿಮಾನ ನಿರ್ಮಾಣ ಮಾಡಿದ್ದಾರೆ.  ದಿವ್ಯಾ ಖೊಸ್ಲಾ ಕುಮಾರ್, ಯಶ್ ದಾಸ್​ಗುಪ್ತಾ, ಅನಸ್ವರ ರಾಜನ್, ಮೀಜಾನ್ ಜಫ್ರಿ, ವಾಸಿಮ್ ಹುಸೇನ್, ಪ್ರಿಯಾ ಪ್ರಕಾಶ್ ವಾರಿಯರ್ ಮೊದಲಾದವರು ನಟಿಸಿದ್ದಾರೆ. ‘ಯಾರಿಯಾ 2’ ಚಿತ್ರ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ.

ಇದನ್ನೂ ಓದಿ: 80ರ ದಶಕದ ಈ ಸಿನಿಮಾದ ರಿಮೇಕ್ ‘ಜವಾನ್’? ಆ ಚಿತ್ರದ ಕಥೆಯೂ ಹೀಗೆಯೇ ಇದೆ

ತಮಿಳಿನ ‘ಕೈದಿ’ ಚಿತ್ರವನ್ನು ‘ಭೋಲಾ’ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಲಾಯಿತು. ಬಾಲಿವುಡ್​ ಫ್ಲೇವರ್ ಬೆರೆಸಲಾಯಿತು. ದಕ್ಷಿಣದ ಹಿಟ್ ಆದ ಈ ಚಿತ್ರ ಹಿಂದಿಯಲ್ಲಿ ಫ್ಲಾಪ್ ಆಯಿತು. ಅಜಯ್ ದೇವಗನ್ ಚಿತ್ರದಲ್ಲಿ ನಟಿಸಿದ್ದರು. ‘ಯಾರಿಯಾ 2’ ಚಿತ್ರದ ಕಥೆಯೂ ಹಾಗೆಯೇ ಆಗಲಿದೆ ಎಂದು ಅನೇಕರು ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:37 am, Thu, 28 September 23

ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ