AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಹಿರಿಯ ನಟ ದೇಬ್ ಮುಖರ್ಜಿ ನಿಧನ, ಜೂ ಎನ್​ಟಿಆರ್ ಸಿನಿಮಾ ಮೇಲೆ ಪ್ರಭಾವ?

Deb Mukharjee: ಬಾಲಿವುಡ್ ಚಿತ್ರರಂಗದ ಹಿರಿಯ ನಟ ದೇಬ್ ಮುಖರ್ಜಿ ನಿಧನ ಹೊಂದಿದ್ದಾರೆ. ದೇಬ್ ಮುಖರ್ಜಿ ಅವರ ಕುಟುಂಬಕ್ಕೆ 1930 ರಿಂದಲೂ ಹಿಂದಿ ಚಿತ್ರರಂಗದ ಜೊತೆಗೆ ನಂಟಿದೆ. ದೇಬ್ ಮುಖರ್ಜಿ ಅವರ ಪುತ್ರ ಈಗ ಬಾಲಿವುಡ್​ನ ಬಹು ಯಶಸ್ವಿ ಸಿನಿಮಾ ನಿರ್ದೇಶಕರಲ್ಲಿ ಒಬ್ಬರು.

ಬಾಲಿವುಡ್​ ಹಿರಿಯ ನಟ ದೇಬ್ ಮುಖರ್ಜಿ ನಿಧನ, ಜೂ ಎನ್​ಟಿಆರ್ ಸಿನಿಮಾ ಮೇಲೆ ಪ್ರಭಾವ?
Deb Mukharjee
ಮಂಜುನಾಥ ಸಿ.
|

Updated on:Mar 14, 2025 | 4:22 PM

Share

ಬಾಲಿವುಡ್​ನ (Bollywood) ಹಿರಿಯ ನಟ ದೇಬ್ ಮುಖರ್ಜಿ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. 1965 ರಿಂದಲೂ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ದೇಬ್ ಮುಖರ್ಜಿ ನಟನೆಯ ಜೊತೆಗೆ ನಿರ್ಮಾಣದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ನೂರಾರು ಸಿನಿಮಾಗಳಲ್ಲಿ ನಟಿಸದಿದ್ದರೂ ಸಹ ನಟಿಸಿದ ಕಡಿಮೆ ಸಿನಿಮಾಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ ದೇಬ್ ಮುಖರ್ಜಿ. ಅಂದಹಾಗೆ ದೇಬ್ ಮುಖರ್ಜಿ, ಬಾಲಿವುಡ್​ನ ಖ್ಯಾತ ಯುವ ನಿರ್ದೇಶಕ ಅಯಾನ್ ಮುಖರ್ಜಿಯ ತಂದೆ.

ದೇಬ್ ಮುಖರ್ಜಿ, ಬಾಲಿವುಡ್​ನ ಕಲ್ಟ್ ಕ್ಲಾಸಿಕ್ ಸಿನಿಮಾಗಳಾದ ‘ಅಭಿನೇತ್ರಿ’, ‘ಏಕ್ ಬಾರ್ ಮುಸ್ಕುರಾದೊ’, ‘ಆಸೂ ಬನ್​ ಗಯೇ ಪೂಲ್’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. 2009 ರಲ್ಲಿ ಬಿಡುಗಡೆ ಆದ ಶಾಹಿದ್ ಕಪೂರ್ ನಟನೆಯ ‘ಕಮೀನೆ’ ಅವರ ಕೊನೆಯ ಸಿನಿಮಾ. ಅದಾದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದಿದ್ದರು.

ದೇಬ್ ಮುಖರ್ಜಿ ಅವರದ್ದು ಬಹುದೊಡ್ಡ ಸಿನಿಮಾ ಕುಟುಂಬ. ದೇಬ್ ಮುಖರ್ಜಿ ಅವರ ಕುಟುಂಬ ಭಾರತದಲ್ಲಿ ಸಿನಿಮಾ ಪ್ರಾರಂಭ ಆದಾಗಿನಿಂದ ಈಗಿನ ವರೆಗೆ ಚಿತ್ರರಂಗದೊಡನೆ ಗುರುತಿಸಿಕೊಂಡಿದೆ. ದೇಬ್ ಮುಖರ್ಜಿ ಅವರ ತಂದೆ ಸಾಶ್​ಧಾರ್ ಮುಖರ್ಜಿ ಭಾರತದಲ್ಲಿ ಮೊದಲಿಗೆ ನಿರ್ಮಾಣವಾದ ಸ್ಟುಡಿಯೋಗಳಲ್ಲಿ ಒಂದಾದ ಫಿಲ್ಮಾಯನ ಸ್ಟುಡಿಯೋದ ಮಾಲೀಕರು. ಜೊತೆಗೆ 1930 ರಿಂದಲೂ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದರು.

ದೇಬ್ ಮುಖರ್ಜಿ ಅವರ ತಾಯಿ, ಭಾರತದ ಬ್ಲಾಕ್ ಆಂಡ್ ವೈಟ್ ಕಾಲದ ಸೂಪರ್ ಸ್ಟಾರ್ ಅಶೋಕ್ ಕುಮಾರ್ ಅವರ ಸಹೋದರಿ ಸತಿದೇವಿ ಮುಖರ್ಜಿ. ಲೆಜೆಂಡರಿ ಗಾಯಕ ಕಿಶೋರ್ ಕುಮಾರ್ ಅವರಿಗೂ ಇವರು ಸಹೋದರಿ. ದೇಬ್ ಮುಖರ್ಜಿ ಅವರು ಎರಡು ಮದುವೆ ಆಗಿದ್ದರು. ಮೊದಲ ಪತ್ನಿಯ ಮಗಳು ‘ಲಗಾನ್’ ಸಿನಿಮಾದ ನಿರ್ದೇಶಕ ಅಶುತೋಶ್ ಗೋವರಿಕರ್ ಅವರ ಪತ್ನಿಯಾಗಿದ್ದಾರೆ. ಎರಡನೇ ಪತ್ನಿಯ ಮಗ ಅಯಾನ್ ಮುಖರ್ಜಿ ಬಾಲಿವುಡ್​ನ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ದೇಬ್ ಮುಖರ್ಜಿ, ಬಾಲಿವುಡ್ ಸ್ಟಾರ್ ನಟಿಯರಾದ ಕಾಜೊಲ್, ರಾಣಿ ಮುಖರ್ಜಿ ಅವರಿಗೆ ಚಿಕ್ಕಪ್ಪ ಸಹ.

ಇದನ್ನೂ ಓದಿ:ಬಾಲಿವುಡ್ ನಾಯಕನ ಜೊತೆ ಶ್ರೀಲೀಲಾ ಲವ್ವಿ-ಡವ್ವಿ, ಮದುವೆ ಫಿಕ್ಸ್?

ಅಯಾನ್ ಮುಖರ್ಜಿ, ಇದೀಗ ಜೂ ಎನ್​ಟಿಆರ್ ನಟನೆಯ ‘ವಾರ್ 2’ ಸಿನಿಮಾದ ನಿರ್ದೇಶನ ಮಾಡುತ್ತಿದ್ದು, ಅವರ ತಂದೆ ದೇಬ್ ಮುಖರ್ಜಿ ಅವರ ನಿಧನದಿಂದಾಗಿ ಸಿನಿಮಾ ಚಿತ್ರೀಕರಣಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ನಟರಾದ ರಣ್​ಬೀರ್ ಕಪೂರ್, ಆಲಿಯಾ ಅವರುಗಳು ಈಗಾಗಲೇ ಮುಂಬೈಗೆ ವಾಪಸ್ಸಾಗಿದ್ದು, ಅಯಾನ್ ಮುಖರ್ಜಿ ನಿವಾಸಕ್ಕೆ ತೆರಳಿದ್ದಾರೆ. ಹಲವು ಚಿತ್ರತಾರೆಯವರು ದೇಬ್ ಮುಖರ್ಜಿಯ ಅಂತಿಮ ದರ್ಶನ ಪಡೆಯುತ್ತಿದ್ದು, ಇಂದು ಸಂಜೆಯೇ ಮುಂಬೈನಲ್ಲಿ ಅವರ ಅಂತಿಮ ಸಂಸ್ಕಾರ ಮಾಡಲಾಗುತ್ತದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Fri, 14 March 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​