AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಮಾಡಲು ಬಾಲಿವುಡ್ ಖಾನ್​ಗಳ ಹೊಸ ತಂತ್ರ; ನಿರ್ಮಾಪಕರಿಗೂ ಇದೆ ಲಾಭ

Bollywood salaries: ಬಾಲಿವುಡ್‌ನಲ್ಲಿ ಖಾನ್‌ಗಳು ಹಾಗೂ ಪ್ರಮುಖ ನಟರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬುದನ್ನು ಹಿರಿಯ ನಿರ್ಮಾಪಕ ಸಿದ್ದಾರ್ಥ್ ರಾಯ್ ಕಪೂರ್ ಬಹಿರಂಗಪಡಿಸಿದ್ದಾರೆ. ಚಿತ್ರದ ಬಜೆಟ್‌ನ 30-40% ವರೆಗೆ ನಟರ ಸಂಭಾವನೆಗೆ ಮೀಸಲಿಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಆದರೆ, ಈಗ ಹೊಸ ಮಾದರಿಯಲ್ಲಿ ನಟರು ಕಡಿಮೆ ಸಂಭಾವನೆಗೆ ಒಪ್ಪಿ ಲಾಭದಲ್ಲಿ ಷೇರು ಪಡೆಯುವ ವ್ಯವಸ್ಥೆ ಜಾರಿಯಲ್ಲಿದೆ.

ಹಣ ಮಾಡಲು ಬಾಲಿವುಡ್ ಖಾನ್​ಗಳ ಹೊಸ ತಂತ್ರ; ನಿರ್ಮಾಪಕರಿಗೂ ಇದೆ ಲಾಭ
Khan
 ಶ್ರೀಲಕ್ಷ್ಮೀ ಎಚ್
| Edited By: |

Updated on: May 17, 2025 | 9:22 PM

Share

ಬಾಲಿವುಡ್​ನಲ್ಲಿ (Bollywood) ಖಾನ್​ಗಳು ಭರ್ಜರಿ ಸಂಭಾವನೆ ಪಡೆಯುತ್ತಾರೆ ಎನ್ನುವ ವಿಷಯ ಬಹುತೇಕರಿಗೆ ಗೊತ್ತಿದೆ. ಅನೇಕ ನಿರ್ಮಾಪಕರು ಇದನ್ನು ಒಪ್ಪಿಕೊಳ್ಳುತ್ತಾರೆ. ಆದರೆ, ಅವರು ಎಷ್ಟು ಸಂಭಾವನೆ ಪಡೆದುಕೊಳ್ಳುತ್ತಾರೆ ಎಂಬುದು ಗೊತ್ತೇ? ಈ ವಿಚಾರವನ್ನು ಹಿರಿಯ ನಿರ್ಮಾಪಕ ಸಿದ್ದಾರ್ಥ್ ರಾಯ್ ಕಪೂರ್ ರಿವೀಲ್ ಮಾಡಿದ್ದಾರೆ. ಈ ಮೊದಲು ‘ಬರ್ಫಿ’, ‘ದಂಗಲ್’ ರೀತಿಯ ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದರು. ಅವರು ಬಾಲಿವುಡ್ ಖಾನ್​ಗಳ ಸಂಭಾವನೆ ರಿವೀಲ್ ಮಾಡಿದ್ದಾರೆ. ಇದರ ಜೊತೆ ಹೊಸ ಮಾಡ್ಯೂಲ್ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಹೀರೋಗಳು ಹೆಚ್ಚು ಸಂಭಾವನೆ ನಿರೀಕ್ಷೆ ಮಾಡುತ್ತಾರೆ. ಹೆಚ್ಚು ಸಂಭಾವನೆ ಕೊಟ್ಟರೆ ಉಳಿದವರಿಗೆ ಕಡಿಮೆ ಕೊಡಲೇಬೇಕಾಗುತ್ತದೆ. ಅಲ್ಲದೆ ನಿರ್ಮಾಪಕರು ಹಲವು ವಿಚಾರಗಳಲ್ಲಿ ರಾಜಿ ಆಗಬೇಕಾಗುವ ಪರಿಸ್ಥಿತಿ ಬರುತ್ತದೆ. ಸದ್ಯ ಸಿದ್ದಾರ್ಥ್ ರಾಯ್ ಕಪೂರ್ ಹೇಳಿರುವ ಮಾಹಿತಿ ಪ್ರಕಾರ, ಸಿನಿಮಾದ ಬಜೆಟ್​ನ ಶೇ.30-40  ಸಂಭಾವನೆ ಹೀರೋಗಳ ಕೈ ಸೇರುತ್ತಿದೆ. ಆದರೆ, ಇತ್ತೀಚೆಗೆ ಬಳಕೆ ಆಗುತ್ತಿರುವ ತಂತ್ರ ನಿರ್ಮಾಪಕರಿಗೆ ಸಹಾಯ ಮಾಡಿದೆ.

‘ಶಾರುಖ್ ಖಾನ್, ಸಲ್ಮಾನ್ ಖಾನ್, ಆಮಿರ್ ಖಾನ್ ಹಾಗೂ ಹೃತಿಕ್ ರೋಷನ್ ಅವರಂಥ ಹೀರೋಗಳು ದೊಡ್ಡ ಸಂಭಾವನೆಗೆ ಬೇಡಿಕೆ ಇಡುತ್ತಾರೆ. ಅವರು ಅಷ್ಟೇ ಜನರನ್ನು ಥಿಯೇಟರ್​ಗೆ ಕರೆತರುವ ಶಕ್ತಿ ಹೊಂದಿದ್ದಾರೆ. ಆದರೆ, ಈಗ ಕಡಿಮೆ ಸಂಭಾವನೆ ಪಡೆದು ಆ ಬಳಿಕ ಬಂದ ಲಾಭದಲ್ಲಿ ಷೇರು ಪಡೆಯುತ್ತಾ ಇದ್ದಾರೆ. ಸಿನಿಮಾ ಒಳ್ಳೆಯ ಗಳಿಕೆ ಮಾಡಿದರೆ ಅವರಿಗೆ ಲಾಭ ಜಾಸ್ತಿ’ ಎಂದಿದ್ದಾರೆ ಅವರು.

ಇದನ್ನೂ ಓದಿ:ಬಾಲಿವುಡ್​ ಬಳಿಕ ತಮಿಳು ಸಿನಿಮಾರಂಗದ ಬಗ್ಗೆ ಅನುರಾಗ್ ಟೀಕೆ

ಮುಂದಿನ ದಿನಗಳಲ್ಲಿ ಈ ರೀತಿಯ ಆಯ್ಕೆಗೆ ಹೀರೋಗಳು ಹೆಚ್ಚು ಆಸಕ್ತಿ ತೋರಿಸುವ ಸಾಧ್ಯತೆ ಇದೆ ಎಂದು ಅವರು ಹೇಳುತ್ತಾರೆ. ಹೀಗಾದಲ್ಲಿ ನಿರ್ಮಾಪಕರಿಗೆ ಕೊಂಚ ಹೊರೆ ಕಡಿಮೆ ಆಗಬಹುದು ಎಂಬುದು ಅವರ ಅಭಿಪ್ರಾಯ. ಏಕೆಂದರೆ ಓರ್ವ ಹೀರೋ ಕಡಿಮೆ ಸಂಭಾವನೆ ಪಡೆದರೆ ನಿರ್ಮಾಪಕರಿಗೆ ಲಾಭ. ಒಂದೊಮ್ಮೆ ಸಿನಿಮಾ ಹಿಟ್ ಆದರೆ ಅದರಲ್ಲಿ ಷೇರು ಕೊಡಲು ಯಾವುದೇ ತೊಂದರೆ ಇಲ್ಲ. ಆದರೆ, ಸಿನಿಮಾ ಹಿಟ್ ಆಗದೇ ಇದ್ದರೆ ಷೇರು ಕೊಡುವ ವಿವಚಾರವೇ ಬರೋದಿಲ್ಲ.

ಅಕ್ಷಯ್ ಕುಮಾರ್ ಅವರು ಸದ್ಯ ಇದೇ ತಂತ್ರವನ್ನು ಉಪಯೋಗಿಸುತ್ತಿದ್ದಾರೆ. ಅವರ ಸಿನಿಮಾಗಳು ಸಾಲು ಸಾಲು ಸೋಲುತ್ತಿವೆ. ಈ ಸಂದರ್ಭದಲ್ಲಿ ಅವರು ಸಿನಿಮಾ ಗೆದ್ದರೆ ಮಾತ್ರ ಹಣ ನೀಡಿ ಎನ್ನುವ ಬೇಡಿಕೆ ಇಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ