Anupam Shyam Death: ಬಹು ಅಂಗಾಂಗ ವೈಫಲ್ಯದಿಂದ ಹಿರಿಯ ನಟ ಅನುಪಮ್​ ಶ್ಯಾಮ್​ ನಿಧನ

Anupam Shyam: ‘ಮನ್​ ಕಿ ಅವಾಜ್:​ ಪ್ರತಿಗ್ಯಾ’ ಸೀರಿಯಲ್​ ಮೂಲಕ ಅನುಪಮ್​ ಶ್ಯಾಮ್ ಫೇಮಸ್​ ಆಗಿದ್ದರು. ‘ಸ್ಲಂ ಡಾಗ್​ ಮಿಲಿಯನೇರ್​’, ‘ಬ್ಯಾಂಡಿಟ್​ ಕ್ವೀನ್​’ ಮುಂತಾದ ಸಿನಿಮಾಗಳಲ್ಲೂ ಅವರು ನಟಿಸಿದ್ದರು.

Anupam Shyam Death: ಬಹು ಅಂಗಾಂಗ ವೈಫಲ್ಯದಿಂದ ಹಿರಿಯ ನಟ ಅನುಪಮ್​ ಶ್ಯಾಮ್​ ನಿಧನ
ಅನುಪಮ್​ ಶ್ಯಾಮ್​
Follow us
| Updated By: ಮದನ್​ ಕುಮಾರ್​

Updated on:Aug 09, 2021 | 10:16 AM

ಹಿರಿಯ ನಟ ಅನುಪಮ್​ ಶ್ಯಾಮ್​ (Anupam Shyam) ಅವರು ಸೋಮವಾರ (ಆ.9) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲವೇ ದಿನಗಳ ಹಿಂದೆ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಗ ವೈಫಲ್ಯದಿಂದ ಅವರು ಕೊನೆಯುಸಿರು ಎಳೆದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡದ ಸೋಂಕಿನ (Kidney Infection) ಕಾರಣ ಅನುಪಮ್​ ಶ್ಯಾಮ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ನಿಧನದ ಸುದ್ದಿಯನ್ನು ಸ್ನೇಹಿತ, ನಟ ಯಶ್​ಪಾಲ್​ ಶರ್ಮಾ ಖಚಿತಪಡಿಸಿದ್ದಾರೆ.

‘ಮನ್​ ಕಿ ಅವಾಜ್:​ ಪ್ರತಿಗ್ಯಾ’ ಸೀರಿಯಲ್​ ಮೂಲಕ ಅನುಪಮ್​ ಶ್ಯಾಮ್ ಫೇಮಸ್​ ಆಗಿದ್ದರು. ‘ಸ್ಲಂ ಡಾಗ್​ ಮಿಲಿಯನೇರ್​’, ‘ಬ್ಯಾಂಡಿಟ್​ ಕ್ವೀನ್​’ ಮುಂತಾದ ಸಿನಿಮಾಗಳಲ್ಲೂ ಅವರು ನಟಿಸಿದ್ದರು. ಅನುಪಮ್​ ಶ್ಯಾಮ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ‘ಅವರು ಕೊನೆಯುಸಿರು ಎಳೆಯುವಾಗ ಸಹೋದರರಾದ ಅನುರಾಗ್​ ಮತ್ತು ಕಾಂಚನ್​ ಜೊತೆಯಲ್ಲಿ ಇದ್ದರು. ಅನುಪಮ್​ಗೆ ಮಧುಮೇಹ ಅಧಿಕವಾಗಿತ್ತು. ತಮ್ಮ ಕೊನೇ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಇನ್ಸುಲಿನ್​ ತೆಗೆದುಕೊಳ್ಳುತ್ತಿದ್ದರು’ ಎಂದು ಯಶ್​ಪಾಲ್  ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ:

ಜಯಂತಿ ನಿಧನಕ್ಕೆ ಕಂಬನಿ ಮಿಡಿದ ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್

ದಿಲೀಪ್​ ಕುಮಾರ್​ ನಿಧನಕ್ಕೆ ಪಾಕ್​ ಕ್ರಿಕೆಟರ್ ಶಾಹಿದ್​ ಅಫ್ರಿದಿ ಸಂತಾಪ; ಯೂಸುಫ್ ಖಾನ್ ಸಾಹೀಬ್​ ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಟ್ವೀಟ್​

Published On - 10:14 am, Mon, 9 August 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು