ರಣಬೀರ್ ಸಹೋದರಿಗೆ ಅಂಕಲ್​ ಮೇಲೆಯೇ ಮೂಡಿತು ಕ್ರಶ್; ಕೊನೆಗೂ ರಿವೀಲ್ ಮಾಡಿದ ರಿದ್ಧಿಮಾ

‘ಫ್ಯಾಬುಲಸ್ ಲೈವ್ಸ್ ಆಫ್ ಬಾಲಿವುಡ್ ವೈವ್ಸ್'ನ ಮೂರನೇ ಸೀಸನ್‌ನಲ್ಲಿ, ರಣಬೀರ್ ಕಪೂರ್ ಅವರ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ತಮ್ಮ ಅಂಕಲ್ ಎಂದು ಕರೆಯುತ್ತಿದ್ದ ಸಂಜಯ್ ಕಪೂರ್ ಅವರ ಮೇಲೆ ತಮ್ಮ ಕ್ರಶ್ ಅನ್ನು ಬಹಿರಂಗಪಡಿಸಿದ್ದಾರೆ. ಈ ಆಘಾತಕಾರಿ ಬಹಿರಂಗವು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಕಾರಣವಾಗಿದೆ.

ರಣಬೀರ್ ಸಹೋದರಿಗೆ ಅಂಕಲ್​ ಮೇಲೆಯೇ ಮೂಡಿತು ಕ್ರಶ್; ಕೊನೆಗೂ ರಿವೀಲ್ ಮಾಡಿದ ರಿದ್ಧಿಮಾ
ರಿದ್ಧಿಮಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 25, 2024 | 8:16 AM

‘ಫ್ಯಾಬುಲಸ್ ಲೈವ್ಸ್ ಆಫ್ ಬಾಲಿವುಡ್ ವೈವ್ಸ್’ನ ಮೂರನೇ ಸೀಸನ್ ಇತ್ತೀಚೆಗೆ ನೆಟ್‌ಫ್ಲಿಕ್ಸ್‌ನಲ್ಲಿ  ರಿಲೀಸ್ ಆಗಿದೆ. ಬಾಲಿವುಡ್‌ನ ಸೆಲೆಬ್ರಿಟಿಗಳ ಪತ್ನಿಯರ ಐಷಾರಾಮಿ ಜೀವನವನ್ನು ತೋರಿಸುವ ಈ ಸರಣಿಯಲ್ಲಿ ಮೂವರು ಹೊಸ ಸೆಲೆಬ್ರಿಟಿಗಳು ಭಾಗವಹಿಸಿದ್ದಾರೆ. ಅವರಲ್ಲಿ ನಟಿ ನೀತು ಕಪೂರ್ ಅವರ ಮಗಳು ಮತ್ತು ರಣಬೀರ್ ಕಪೂರ್ ಅವರ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ಕೂಡ ಇದ್ದಾರೆ. ರಿದ್ಧಿಮಾ ಜೊತೆಗೆ, ನಟ ಸಂಜಯ್ ಕಪೂರ್ ಅವರ ಪತ್ನಿ ಮಹೀಪ್ ಕಪೂರ್, ಸಮೀರ್ ಸೋನಿ ಅವರ ಪತ್ನಿ ನೀಲಂ ಕೊಠಾರಿ, ಚಂಕಿ ಪಾಂಡೆ ಅವರ ಪತ್ನಿ ಭಾವನಾ ಪಾಂಡೆ ಮತ್ತು ಸೋಹೈಲ್ ಖಾನ್ ಅವರ ಮಾಜಿ ಪತ್ನಿ ಸೀಮಾ ಸಜ್ದೆ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ತಮಗಿಂತ 15 ವರ್ಷ ಹಿರಿಯ ನಟನ ಮೇಲೆ ತನಗೆ ಕ್ರಶ್ ಇದೆ ಎಂದು ರಿದ್ಧಿಮಾ ಕಾರ್ಯಕ್ರಮದಲ್ಲಿ ಬಹಿರಂಗಪಡಿಸಿದ್ದಾರೆ.

ಮಹೀಪ್ ಕಪೂರ್ ಅವರ ಪತಿ ಸಂಜಯ್ ಕಪೂರ್ ಮೇಲೆ ರಿದ್ಧಿಮಾಗೆ ಕ್ರಶ್ ಇದೆಯಂತೆ. ಒಂದು ಕಾಲದಲ್ಲಿ ಅಂಕಲ್ ಎಂದು ಸಂಜಯ್ ಅವರನ್ನು ರಿದ್ಧಿಮಾ ಕರೆಯುತ್ತಿದ್ದರು. ಈಗ ಅವರ ಮೇಲೆ ಕ್ರಶ್ ಆಗಿದೆ ಎಂದರೆ ಹೇಗನ್ನಿಸಬೇಡ ಹೇಳಿ.

‘ಮಹೀಪ್, ನಿಮಗೆ ಗೊತ್ತಾ? ನಾನು ಬೆಳೆಯುತ್ತಿರುವಾಗ ಸಂಜಯ್‌ನನ್ನು ತುಂಬಾ ಇಷ್ಟಪಡುತ್ತಿದ್ದೆ’ ಎಂದಿದ್ದಾರೆ ರಿದ್ಧಿಮಾ. ಇದನ್ನು ಕೇಳಿದ ನೀಲಂ ಕೊಠಾರಿ ಆಶ್ಚರ್ಯಚಕಿತರಾದರು. ‘ನೀವು ಏನು ಹೇಳುತ್ತಿದ್ದೀರಿ’ ಎಂದು ಅಚ್ಚರಿ ಹೊರಹಾಕಿದರು. ‘ನಾನು ಸತ್ಯವನ್ನು ಹೇಳುತ್ತಿದ್ದೇನೆ, ನನಗೆ ಸಂಜಯ್ ಕಪೂರ್ ಮೇಲೆ ಅಪಾರ ಕ್ರಶ್ ಇದೆ. ಆ ಸಮಯದಲ್ಲಿ ನಾನು ಅವರನ್ನು ಅಂಕಲ್ (ಚಿಕ್ಕಪ್ಪ) ಎಂದು ಕರೆಯುತ್ತಿದ್ದೆ. ಆದರೆ ನಾನು ಈಗ ಅವರನ್ನು ಏನೆಂದು ಕರೆಯಲಿ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ

‘ನನ್ನನ್ನು ಆಂಟಿ ಎಂದು ಕರೆಯಬೇಡಿ. ಅದೇನೇ ಇರಲಿ, ನಿಮಗೆ ಒಳ್ಳೆಯ ಟೇಸ್ಟ್ ಇದೆ’ ಎಂದು ಮಹೀಪ್ ಅವರು ರಿದ್ಧಿಮಾಗೆ ಹೇಳಿದರು. ಈ ಮೂಲಕ ತಮ್ಮ ಪತಿಯನ್ನು ಪರೋಕ್ಷವಾಗಿ ಹೊಗಳಿದರು ಮಹೀಪ್ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ
ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್