AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಸಹೋದರಿಗೆ ಅಂಕಲ್​ ಮೇಲೆಯೇ ಮೂಡಿತು ಕ್ರಶ್; ಕೊನೆಗೂ ರಿವೀಲ್ ಮಾಡಿದ ರಿದ್ಧಿಮಾ

‘ಫ್ಯಾಬುಲಸ್ ಲೈವ್ಸ್ ಆಫ್ ಬಾಲಿವುಡ್ ವೈವ್ಸ್'ನ ಮೂರನೇ ಸೀಸನ್‌ನಲ್ಲಿ, ರಣಬೀರ್ ಕಪೂರ್ ಅವರ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ತಮ್ಮ ಅಂಕಲ್ ಎಂದು ಕರೆಯುತ್ತಿದ್ದ ಸಂಜಯ್ ಕಪೂರ್ ಅವರ ಮೇಲೆ ತಮ್ಮ ಕ್ರಶ್ ಅನ್ನು ಬಹಿರಂಗಪಡಿಸಿದ್ದಾರೆ. ಈ ಆಘಾತಕಾರಿ ಬಹಿರಂಗವು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಕಾರಣವಾಗಿದೆ.

ರಣಬೀರ್ ಸಹೋದರಿಗೆ ಅಂಕಲ್​ ಮೇಲೆಯೇ ಮೂಡಿತು ಕ್ರಶ್; ಕೊನೆಗೂ ರಿವೀಲ್ ಮಾಡಿದ ರಿದ್ಧಿಮಾ
ರಿದ್ಧಿಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 25, 2024 | 8:16 AM

Share

‘ಫ್ಯಾಬುಲಸ್ ಲೈವ್ಸ್ ಆಫ್ ಬಾಲಿವುಡ್ ವೈವ್ಸ್’ನ ಮೂರನೇ ಸೀಸನ್ ಇತ್ತೀಚೆಗೆ ನೆಟ್‌ಫ್ಲಿಕ್ಸ್‌ನಲ್ಲಿ  ರಿಲೀಸ್ ಆಗಿದೆ. ಬಾಲಿವುಡ್‌ನ ಸೆಲೆಬ್ರಿಟಿಗಳ ಪತ್ನಿಯರ ಐಷಾರಾಮಿ ಜೀವನವನ್ನು ತೋರಿಸುವ ಈ ಸರಣಿಯಲ್ಲಿ ಮೂವರು ಹೊಸ ಸೆಲೆಬ್ರಿಟಿಗಳು ಭಾಗವಹಿಸಿದ್ದಾರೆ. ಅವರಲ್ಲಿ ನಟಿ ನೀತು ಕಪೂರ್ ಅವರ ಮಗಳು ಮತ್ತು ರಣಬೀರ್ ಕಪೂರ್ ಅವರ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ಕೂಡ ಇದ್ದಾರೆ. ರಿದ್ಧಿಮಾ ಜೊತೆಗೆ, ನಟ ಸಂಜಯ್ ಕಪೂರ್ ಅವರ ಪತ್ನಿ ಮಹೀಪ್ ಕಪೂರ್, ಸಮೀರ್ ಸೋನಿ ಅವರ ಪತ್ನಿ ನೀಲಂ ಕೊಠಾರಿ, ಚಂಕಿ ಪಾಂಡೆ ಅವರ ಪತ್ನಿ ಭಾವನಾ ಪಾಂಡೆ ಮತ್ತು ಸೋಹೈಲ್ ಖಾನ್ ಅವರ ಮಾಜಿ ಪತ್ನಿ ಸೀಮಾ ಸಜ್ದೆ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ತಮಗಿಂತ 15 ವರ್ಷ ಹಿರಿಯ ನಟನ ಮೇಲೆ ತನಗೆ ಕ್ರಶ್ ಇದೆ ಎಂದು ರಿದ್ಧಿಮಾ ಕಾರ್ಯಕ್ರಮದಲ್ಲಿ ಬಹಿರಂಗಪಡಿಸಿದ್ದಾರೆ.

ಮಹೀಪ್ ಕಪೂರ್ ಅವರ ಪತಿ ಸಂಜಯ್ ಕಪೂರ್ ಮೇಲೆ ರಿದ್ಧಿಮಾಗೆ ಕ್ರಶ್ ಇದೆಯಂತೆ. ಒಂದು ಕಾಲದಲ್ಲಿ ಅಂಕಲ್ ಎಂದು ಸಂಜಯ್ ಅವರನ್ನು ರಿದ್ಧಿಮಾ ಕರೆಯುತ್ತಿದ್ದರು. ಈಗ ಅವರ ಮೇಲೆ ಕ್ರಶ್ ಆಗಿದೆ ಎಂದರೆ ಹೇಗನ್ನಿಸಬೇಡ ಹೇಳಿ.

‘ಮಹೀಪ್, ನಿಮಗೆ ಗೊತ್ತಾ? ನಾನು ಬೆಳೆಯುತ್ತಿರುವಾಗ ಸಂಜಯ್‌ನನ್ನು ತುಂಬಾ ಇಷ್ಟಪಡುತ್ತಿದ್ದೆ’ ಎಂದಿದ್ದಾರೆ ರಿದ್ಧಿಮಾ. ಇದನ್ನು ಕೇಳಿದ ನೀಲಂ ಕೊಠಾರಿ ಆಶ್ಚರ್ಯಚಕಿತರಾದರು. ‘ನೀವು ಏನು ಹೇಳುತ್ತಿದ್ದೀರಿ’ ಎಂದು ಅಚ್ಚರಿ ಹೊರಹಾಕಿದರು. ‘ನಾನು ಸತ್ಯವನ್ನು ಹೇಳುತ್ತಿದ್ದೇನೆ, ನನಗೆ ಸಂಜಯ್ ಕಪೂರ್ ಮೇಲೆ ಅಪಾರ ಕ್ರಶ್ ಇದೆ. ಆ ಸಮಯದಲ್ಲಿ ನಾನು ಅವರನ್ನು ಅಂಕಲ್ (ಚಿಕ್ಕಪ್ಪ) ಎಂದು ಕರೆಯುತ್ತಿದ್ದೆ. ಆದರೆ ನಾನು ಈಗ ಅವರನ್ನು ಏನೆಂದು ಕರೆಯಲಿ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ

‘ನನ್ನನ್ನು ಆಂಟಿ ಎಂದು ಕರೆಯಬೇಡಿ. ಅದೇನೇ ಇರಲಿ, ನಿಮಗೆ ಒಳ್ಳೆಯ ಟೇಸ್ಟ್ ಇದೆ’ ಎಂದು ಮಹೀಪ್ ಅವರು ರಿದ್ಧಿಮಾಗೆ ಹೇಳಿದರು. ಈ ಮೂಲಕ ತಮ್ಮ ಪತಿಯನ್ನು ಪರೋಕ್ಷವಾಗಿ ಹೊಗಳಿದರು ಮಹೀಪ್ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ