AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ

ಬಾಲಿವುಡ್ ಸ್ಟಾರ್‌ಗಳು ತಮ್ಮ ಲೈಂಗಿಕತೆ ಬಹಿರಂಗಪಡಿಸಲು ಹಿಂಜರಿಯುತ್ತಾರೆ. ಹಿರಿಯ ಪತ್ರಕರ್ತೆ ಸಿಮಿ ಚಂದೋಕ್, ಪ್ರಸಿದ್ಧ ನಿರ್ದೇಶಕರೊಬ್ಬರು ಸಲಿಂಗಿ ಎಂದು ಆರೋಪಿಸಿದ್ದಾರೆ. ಹೀರೋಗು ಲೈಂಗಿಕತೆ ಬಗ್ಗೆ ಹೇಳಿಕೊಳ್ಳದಿರಲು ಸಿನಿಮಾ ಕೂಡ ಕಾರಣ ಎಂದಿದ್ದಾರೆ. ರಣವೀರ್, ಆಯುಷ್ಮಾನ್ ಖುರಾನಾ ಉದಾಹರಣೆಗಳನ್ನು ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ
ಸಿನಿಮಾ ನ್ಯೂಸ್
ರಾಜೇಶ್ ದುಗ್ಗುಮನೆ
|

Updated on:Jan 07, 2026 | 3:05 PM

Share

ಸ್ಟಾರ್ ಹಿರೋಗಳು, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರು ತಮ್ಮ ಲೈಂಗಿಕತೆ ಬಗ್ಗೆ ಮಾತನಾಡೋಕೆ ಹೆಚ್ಚು ಇಷ್ಟಪಡೋದಿಲ್ಲ. ಕರಣ್ ಜೋಹರ್ ಅವರು ಪರುಷಪ್ರಿಯ ಎಂಬ ಆರೋಪ ಇದೆ. ಆದರೆ, ಇದನ್ನು ಅವರು ಒಪ್ಪಿಕೊಳ್ಳೋದಿಲ್ಲ. ಹೀಗಿರುವಾಗಲೇ ಹಿರಿಯ ಪತ್ರಕರ್ತೆ ಸಿಮಿ ಚಂದೋಕ್ ಅವರು ಒಂದು ಬಾಂಬ್ ಸಿಡಿಸಿದ್ದಾರೆ. ಹಲವು ಸ್ಟಾರ್​​ಗಳ ಜೊತೆ ಕೆಲಸ ಮಾಡಿದ ನಿರ್ದೇಶಕ ಸಲಿಂಗಿ ಎಂದು ಆರೋಪ ಮಾಡಿದ್ದಾರೆ.

ಬಾಲಿವುಡ್ ಹೀರೋಗಳು ಈ ವಿಷಯವನ್ನು ಯಾಕೆ ಓಪನ್ ಆಗಿ ಒಪ್ಪಿಕೊಳ್ಳೋದಿಲ್ಲ ಎಂಬುದಕ್ಕೆ ಸಿಮಿ ಉತ್ತಮ ಉದಾಹರಣೆ ನೀಡಿದ್ದಾರೆ. ‘ಬಾಲಿವುಡ್ ನಟನೋರ್ವ ತಾನು ಗೇ ಎಂದು ಒಪ್ಪಿಕೊಂಡ ಎಂದಿಟ್ಟುಕೊಳ್ಳಿ. ಆ ಬಳಿಕ ಆತ ಸಿನಿಮಾದಲ್ಲಿ ಹೀರೋಯಿನ್ ಜೊತೆ ರೊಮ್ಯಾಂಟಿಕ್ ಆಗಿ ಕಾಣಿಸಿಕೊಳ್ಳುತ್ತಾನೆ. ಇದನ್ನು ಪ್ರೇಕ್ಷಕ ಒಪ್ಪಿಕೊಳ್ಳುತ್ತಾನಾ’ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘ಬಾಲಿವುಡ್​ನ ಓರ್ವ ಖ್ಯಾತ ನಿರ್ದೇಶಕ ಸಲಿಂಗಿ. ಅವರ ಹೆಸರನ್ನು ನಾನು ಇಲ್ಲಿ ಹೇಳುವುದಿಲ್ಲ. ಅವರು ಸಲ್ಮಾನ್ ಖಾನ್, ರಣವೀರ್ ಸಿಂಗ್, ಹೃತಿಕ್ ರೋಷನ್, ಶಾಹಿದ್ ಕಪೂರ್ ಹಾಗೂ ಇತರರ ಜೊತೆ ಕೆಲಸ ಮಾಡಿದ್ದಾರೆ. ಅವರು ಗೇ ಎಂದು ಆ ನಟರೆಲ್ಲರಿಗೂ ಗೊತ್ತು. ಮಹಿಳೆಯರ ಜೊತೆ ಆತ ಹೆಚ್ಚು ಸಮಯ ಇರೋದಿಲ್ಲ’ ಎಂದಿದ್ದಾರೆ ಅವರು. ‘ಓರ್ವ ನಿರ್ದೇಶಕ ತನ್ನ ಲೈಂಗಿಕತೆಯ ಬಗ್ಗೆ ಬಹಿರಂಗವಾಗಿ ಹೇಳಿದರೆ, ಅನೇಕ ಪ್ರಮುಖ ನಟರು ಅವರೊಂದಿಗೆ ಕೆಲಸ ಮಾಡಲು ಹಿಂಜರಿಯುತ್ತಾರೆ. ಹೀರೋಗಳು ಕಾಸ್ಟಿಂಗ್ ಕೌಚ್‌ಗೆ ಹೆದರುತ್ತಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ

‘ಅನೇಕ ನಟರಿಗೆ ಆರಂಭಿಕ ದಿನಗಳಲ್ಲಿ ಕಾಂಪ್ರಮೈಸ್ ಆಗುವಂತೆ ಕೇಳಲಾಯಿತು. ಆಯುಷ್ಮಾನ್ ಖುರಾನಾ, ರಣವೀರ್ ಸಿಂಗ್ ಇದನ್ನು ಓಪನ್ ಆಗಿ ಹೇಳಿದ್ದಾರೆ. ಶಾರುಖ್ ಖಾನ್ ಹಾಗೂ ಕರಣ್ ಜೋಹರ್ ಸಂಬಂಧದ ಬಗ್ಗೆ ಚರ್ಚೆ ಆಗಿತ್ತು. ಶಾರುಖ್ ಖಾನ್ ಇದನ್ನು ತಳ್ಳಿ ಹಾಕಿದ್ದರು’ ಎಂದು ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ. ಈಗ ಆ ನಿರ್ದೇಶಕ ಯಾರು ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:04 pm, Wed, 7 January 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?