AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

120 ಕೋಟಿ ರೂ. ತೆರಿಗೆ ಪಾವತಿಸಿದ ಅಮಿತಾಭ್ ಬಚ್ಚನ್; ಹಾಗಾದ್ರೆ ಆದಾಯ ಎಷ್ಟು?

82 ವರ್ಷ ವಯಸ್ಸಿನ ಅಮಿತಾಭ್ ಬಚ್ಚನ್ ಅವರು 2024-25ನೇ ಸಾಲಿನಲ್ಲಿ 120 ಕೋಟಿ ರೂಪಾಯಿ ತೆರಿಗೆ ಪಾವತಿಸಿ ದೇಶದ ಅತಿ ಹೆಚ್ಚು ತೆರಿಗೆ ಪಾವತಿಸಿದ ನಟ ಎನಿಸಿಕೊಂಡಿದ್ದಾರೆ. ಕೌನ್ ಬನೇಗಾ ಕರೋಡ್ಪತಿ ಸೇರಿದಂತೆ ವಿವಿಧ ಚಿತ್ರಗಳು ಮತ್ತು ಬ್ರ್ಯಾಂಡ್ ಅಂಬಾಸಿಡರ್‌ಶಿಪ್‌ನಿಂದ ಅವರು ಈ ವರ್ಷ ನೂರಾರು ಕೋಟಿ ರೂಪಾಯಿ ಗಳಿಸಿದ್ದಾರೆ. ಕಳೆದ ವರ್ಷಕ್ಕಿಂತ ಅವರ ಗಳಿಕೆ ಮತ್ತು ತೆರಿಗೆ ಪಾವತಿಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.

120 ಕೋಟಿ ರೂ. ತೆರಿಗೆ ಪಾವತಿಸಿದ ಅಮಿತಾಭ್ ಬಚ್ಚನ್; ಹಾಗಾದ್ರೆ ಆದಾಯ ಎಷ್ಟು?
ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on:Mar 18, 2025 | 1:00 PM

Share

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರಿಗೆ ಈಗ 82 ವರ್ಷ. ಈ ವಯಸ್ಸಿನಲ್ಲೂ ಅವರು ನಿರಂತರವಾಗಿ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ರಿಯಾಲಿಟಿ ಶೋಗಳನ್ನು ನಡೆಸುತ್ತಾ, ಸಿನಿಮಾಗಳನ್ನು ಮಾಡುತ್ತಾ, ಉದ್ಯಮಗಳನ್ನು ನಿರ್ವಹಿಸುತ್ತಾ, ರಿಯಲ್​ ಎಸ್ಟೇಟ್​ಗಳ ಮೇಲೆ ಹೂಡಿಕೆ ಮಾಡುತ್ತಾ ಇದ್ದಾರೆ. ಈಗ ಅಮಿತಾಭ್ ಬಚ್ಚನ್ ಅವರು 2024-25ನೇ ಸಾಲಿನಲ್ಲಿ ಎಷ್ಟು ತೆರಿಗೆ ಪಾವತಿ ಮಾಡಿದ್ದಾರೆ ಎಂಬ ವಿಚಾರ ರಿವೀಲ್ ಆಗಿದೆ. ಅವರು ಬರೋಬ್ಬರಿ 120 ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೀರೋ ಎನಿಸಿಕೊಂಡಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಹಂತ ಹಂತವಾಗಿ ತೆರಿಗೆ ಪಾವತಿ ಮಾಡಿದ್ದಾರೆ. ಕೊನೆಯ ಕಂತಿನಲ್ಲಿ ಅವರು 52.50 ಕೋಟಿ ರೂಪಾಯಿ ಪಾವತಿ ಮಾಡಿದ್ದಾರೆ. ಮಾರ್ಚ್ 15ರಂದು ಅಮಿತಾಭ್ ಅವರು ಇದನ್ನು ಕಟ್ಟಿದ್ದಾರೆ. ಅಮಿತಾಭ್ ಬಚ್ಚನ್ ಅವರು ‘ಕೌನ್ ಬನೇಗಾ ಕರೋಡ್ಪತಿ’ ಸೀಸನ್ 16 ಅನ್ನು ನಡೆಸಿಕೊಟ್ಟಿದ್ದಾರೆ. ಇದು ಅವರ ಆದಾಯದ ದೊಡ್ಡ ಮೂಲವಾಗಿದೆ.

ಆದಾಯ ಎಷ್ಟು?

82ನೇ ವಯಸ್ಸಿನಲ್ಲೂ ಅಮಿತಾಭ್ ಬಚ್ಚನ್ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ‘ಕೌನ್ ಬನೇಗಾ ಕರೋಡ್ಪತಿ’ಯನ್ನು ಅವರು ನಡೆಸಿಕೊಟ್ಟರೆ ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ಬರುತ್ತದೆ. ಈ ಆರ್ಥಿಕ ವರ್ಷದಲ್ಲಿ (2024-25) ಅಮಿತಾಭ್ ಬಚ್ಚನ್ ಅವರು 350 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಇದರಲ್ಲಿ ಬ್ರ್ಯಾಂಡ್​ಗಳ ಪ್ರಚಾರ, ಸಿನಿಮಾ ಸಂಭಾವನೆ ಕೂಡ ಸೇರಿದೆ.

ಇದನ್ನೂ ಓದಿ
Image
ಸಾಲು ಸಾಲು ಸೋಲು; ಕೊನೆಗೂ ‘ಅಪ್ಪು’ ನಿರ್ದೇಶಕನಿಗೆ ಅವಕಾಶ ಕೊಟ್ಟ ಸ್ಟಾರ್ ನಟ
Image
‘ಒಮ್ಮೆ ಬಂದು ನೊಡ್ಕೊಂಡು ಹೋಗೋ ಕಂದಾ’; ಸೋದರತ್ತೆ ನಾಗಮ್ಮ ಮಾತು
Image
ಹುಡುಗಿಯರ ಖಾಸಗಿ ಭಾಗಕ್ಕೆ ಮಾರುಹೋದ ಆರ್​ಜಿವಿ; ನಿರ್ದೇಶಕನ ಹೇಳಿಕೆಗೆ ಟೀಕೆ
Image
ಸೆಲೆಬ್ರಿಟಿಗಳು ಪ್ರಿತಿ ವಿಚಾರವನ್ನು ಖಾಸಗಿಯಾಗಿ ಏಕೆ ಇಡ್ತಾರೆ? ಪ್ರಿಯಾಂಕಾ

ಕಳೆದ ವರ್ಷ ಅಮಿತಾಭ್ ಬಚ್ಚನ್ ಅವರು 72 ಕೋಟಿ ರೂಪಾಯಿ ತೆರಿಗೆ ಪಾವತಿ ಮಾಡಿದ್ದರು. ಈ ಬಾರಿ ಅವರ ಗಳಿಕೆಯಲ್ಲಿ ತೀವ್ರ ಗತಿಯಲ್ಲಿ ಏರಿಕೆ ಕಂಡಿದೆ. ಭಾರತದ ಶ್ರೀಮಂತ ನಟ ಶಾರುಖ್ ಖಾನ್ ಅವರು ಬರೋಬ್ಬರಿ 92 ಕೋಟಿ ರೂಪಾಯಿ ತೆರಿಗೆ ಪಾವತಿಸಿ ಈ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಶೂಟ್​ಗೆ ರೆಡಿ ಆದ ಬಾಲಿವುಡ್ ನಟ ಅಮಿತಾಭ್ ಬಚ್ಚನ್

ಸಿನಿಮಾ ವಿಚಾರ

ಅಮಿತಾಭ್ ಬಚ್ಚನ್ ಅವರು ಶೀಘ್ರವೇ ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್​ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟ್ ಶೀಘ್ರವೇ ಆರಂಭ ಆಗಬೇಕಿದೆ. ‘ಸೆಕ್ಷನ್ 84’ ಚಿತ್ರದಲ್ಲೂ ಅವರು ನಟಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:59 pm, Tue, 18 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು