‘ಹಮಾರೆ ಬಾರಾಹ್​’ ಸಿನಿಮಾ ಬಿಡುಗಡೆಗೆ ಕೋರ್ಟ್ ಅನುಮತಿ; ಕೆಲವು ದೃಶ್ಯ ಡಿಲೀಟ್

ಕೆಲವು ಆಕ್ಷೇಪಾರ್ಹ ದೃಶ್ಯಗಳ ಕಾರಣಕ್ಕೆ ‘ಹಮಾರೆ ಬಾರಾಹ್​’ ಸಿನಿಮಾದ ಬಿಡುಗಡೆಗೆ ತಡೆ ನೀಡಲಾಗಿತ್ತು. ಆದರೆ ಈಗ ಅಂಥ ದೃಶ್ಯಗಳನ್ನು ಡಿಲೀಟ್​ ಮಾಡಲಾಗಿದೆ. ಹಾಗಾಗಿ ಈ ಸಿನಿಮಾದ ಬಿಡುಗಡೆಗೆ ಈಗ ಬಾಂಬೆ ಹೈಕೋರ್ಟ್​ ಅನುಮತಿ ನೀಡಿ ಆದೇಶಿಸಿದೆ. ಈ ಚಿತ್ರದಲ್ಲಿ ಮುಸ್ಲಿಂ ಧರ್ಮದವರ ಭಾವನೆಗೆ ಧಕ್ಕೆ ಆಗುವಂತಹ ಅಂಶಗಳು ಇಲ್ಲ ಎಂದು ಕೋರ್ಟ್​ ಹೇಳಿದೆ.

‘ಹಮಾರೆ ಬಾರಾಹ್​’ ಸಿನಿಮಾ ಬಿಡುಗಡೆಗೆ ಕೋರ್ಟ್ ಅನುಮತಿ; ಕೆಲವು ದೃಶ್ಯ ಡಿಲೀಟ್
‘ಹಮಾರೆ ಬಾರಾಹ್​’ ಸಿನಿಮಾ ಪೋಸ್ಟರ್​
Follow us
|

Updated on: Jun 19, 2024 | 10:05 PM

ವಿವಾದಕ್ಕೆ ಕಾರಣ ಆಗಿರುವ ‘ಹಮಾರೆ ಬಾರಾಹ್​’ (Hamare Baarah) ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಆದರೆ ಈಗ ಈ ಸಿನಿಮಾದ ನಿರ್ಮಾಪಕರ ಪರವಾಗಿ ಕೋರ್ಟ್​ ತೀರ್ಪು ನೀಡಿದೆ. ಸಿನಿಮಾದಲ್ಲಿ ಕೆಲವು ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ನಿರ್ಮಾಪಕರು ಒಪ್ಪಿದ್ದಾರೆ. ಹಾಗಾಗಿ ಈ ಸಿನಿಮಾದ ಬಿಡುಗಡೆಗೆ ಬಾಂಬೆ ಹೈಕೋರ್ಟ್​ (Bombay High Court) ಅನುಮತಿ ನೀಡಿದೆ. ಆರಂಭದಲ್ಲಿ ಈ ಸಿನಿಮಾದ ಶೀರ್ಷಿಕೆಗೆ ವಿರೋಧ ವ್ಯಕ್ತವಾಗಿತ್ತು. ಬಳಿಕ ಟೈಟಲ್​ ಬದಲಾಯಿಸಲಾಯಿತು.

ಮುಸ್ಲಿಂ ಧರ್ಮದವರ ಭಾವನೆಗಳಿಗೆ ‘ಹಮಾರೆ ಬಾರಾಹ್​’ ಸಿನಿಮಾ ಧಕ್ಕೆ ಉಂಟು ಮಾಡಲಿದೆ ಎಂದು ಕೆಲವರು ತಕರಾರು ತೆಗೆದಿದ್ದರು. ಅಲ್ಲದೇ, ಖುರಾನ್​ನ ಭೋದನೆಗಳನ್ನು ತಪ್ಪಾಗಿ ಅರ್ಥೈಸಿದೆ ಎಂದು ಕಿರಿಕ್​ ಮಾಡಲಾಗಿತ್ತು. ಆದರೆ ಈ ಸಿನಿಮಾದಲ್ಲಿ ಆ ರೀತಿಯ ಯಾವುದೇ ಅಂಶಗಳು ಇಲ್ಲ ಎಂಬುದನ್ನು ಮನಗಂಡ ಬಳಿಕ ಬಾಂಬೆ ಹೈಕೋರ್ಟ್​ ಈ ಆದೇಶ ನೀಡಿದೆ.

ಅನ್ನು ಕಪೂರ್ ಅವರು ‘ಹಮಾರೆ ಬಾರಾಹ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆದ ನಂತರ ವಿವಾದ ಸೃಷ್ಟಿಯಾಗಿತ್ತು. ಸಿನಿಮಾದಲ್ಲಿನ ಕೆಲವು ದೃಶ್ಯಗಳನ್ನು ಡಿಲೀಟ್​ ಮಾಡಬೇಕು ಎಂಬ ಒತ್ತಾಯ ಕೇಳಿಬಂತು. ನ್ಯಾಯಾಲಯದ ಸೂಚನೆ ಮೇರೆಗೆ ನಿರ್ಮಾಪಕರು ಆ ದೃಶ್ಯಗಳನ್ನು ಸಿನಿಮಾದಿಂದ ತೆಗೆದು ಹಾಕಲು ಒಪ್ಪಿದ್ದಾರೆ. ಆದ್ದರಿಂದ ಸಿನಿಮಾದ ಬಿಡುಗಡೆಗೆ ಅನುಮತಿ ಸಿಕ್ಕಿದೆ.

ಇದನ್ನೂ ಓದಿ: ‘ಹಮಾರೆ ಬಾರಾ’ ವಿವಾದ; ಸೆನ್ಸಾರ್ ಮಂಡಳಿ ಓಕೆ ಹೇಳಿದ ಡೈಲಾಗ್​ಗೆ ಹೈಕೋರ್ಟ್ ತಕರಾರು

‘ಈ ಸಿನಿಮಾ ಮಹಿಳೆಯರ ಏಳಿಗೆಗಾಗಿ ಇರುವಂಥದ್ದು. ಖುರಾನ್​ ಅನ್ನು ತಪ್ಪಾಗಿ ಅರ್ಥೈಸುವ ಓರ್ವ ಮೌಲಾನಾನ ಪಾತ್ರ ಈ ಸಿನಿಮಾದಲ್ಲಿದೆ. ಆದರೆ ಬೇರೆ ಮುಸ್ಲಿಂ ವ್ಯಕ್ತಿ ಅದನ್ನು ವಿರೋಧಿಸುತ್ತಾನೆ. ಆ ರೀತಿಯ ಮೌಲಾನಾರನ್ನು ಜನರು ಕಣ್ಣು ಮುಚ್ಚಿಕೊಂಡು ಅನುಸರಿಸಬಾರದು. ತಮ್ಮ ಬುದ್ಧಿ ಉಪಯೋಗಿಸಬೇಕು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ’ ಎಂದು ಕೋರ್ಟ್​ ಹೇಳಿದೆ.

ಪ್ರಮಾಣಪತ್ರ ಪಡೆಯದ ದೃಶ್ಯಗಳನ್ನು ಒಳಗೊಂಡ ಟ್ರೇಲರ್​ ಬಿಡುಗಡೆ ಮಾಡಿದ್ದಕ್ಕೆ ‘ಹಮಾರೆ ಬಾರಾಹ್​’ ಸಿನಿಮಾದ ನಿರ್ಮಾಪಕರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಆರಂಭದಲ್ಲಿ ಜೂನ್​ 7ರಂದು ಈ ಸಿನಿಮಾವನ್ನು ರಿಲೀಸ್​ ಮಾಡಲು ತೀರ್ಮಾನಿಸಲಾಗಿತ್ತು. ನಂತರ ಜೂನ್​ 14ಕ್ಕೆ ಮುಂದೂಡಿಕೆ ಆಗಿತ್ತು. ಬಳಿಕ ಬಿಡುಗಡೆಗೆ ತಡೆ ನೀಡಲಾಯಿತು. ಈಗ ಹೊಸ ರಿಲೀಸ್​ ದಿನಾಂಕವನ್ನು ನಿರ್ಮಾಪಕರು ಇನ್ನಷ್ಟೇ ಘೋಷಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ