‘ಹಮಾರೆ ಬಾರಾಹ್​’ ಸಿನಿಮಾ ಬಿಡುಗಡೆಗೆ ಕೋರ್ಟ್ ಅನುಮತಿ; ಕೆಲವು ದೃಶ್ಯ ಡಿಲೀಟ್

ಕೆಲವು ಆಕ್ಷೇಪಾರ್ಹ ದೃಶ್ಯಗಳ ಕಾರಣಕ್ಕೆ ‘ಹಮಾರೆ ಬಾರಾಹ್​’ ಸಿನಿಮಾದ ಬಿಡುಗಡೆಗೆ ತಡೆ ನೀಡಲಾಗಿತ್ತು. ಆದರೆ ಈಗ ಅಂಥ ದೃಶ್ಯಗಳನ್ನು ಡಿಲೀಟ್​ ಮಾಡಲಾಗಿದೆ. ಹಾಗಾಗಿ ಈ ಸಿನಿಮಾದ ಬಿಡುಗಡೆಗೆ ಈಗ ಬಾಂಬೆ ಹೈಕೋರ್ಟ್​ ಅನುಮತಿ ನೀಡಿ ಆದೇಶಿಸಿದೆ. ಈ ಚಿತ್ರದಲ್ಲಿ ಮುಸ್ಲಿಂ ಧರ್ಮದವರ ಭಾವನೆಗೆ ಧಕ್ಕೆ ಆಗುವಂತಹ ಅಂಶಗಳು ಇಲ್ಲ ಎಂದು ಕೋರ್ಟ್​ ಹೇಳಿದೆ.

‘ಹಮಾರೆ ಬಾರಾಹ್​’ ಸಿನಿಮಾ ಬಿಡುಗಡೆಗೆ ಕೋರ್ಟ್ ಅನುಮತಿ; ಕೆಲವು ದೃಶ್ಯ ಡಿಲೀಟ್
‘ಹಮಾರೆ ಬಾರಾಹ್​’ ಸಿನಿಮಾ ಪೋಸ್ಟರ್​

Updated on: Jun 19, 2024 | 10:05 PM

ವಿವಾದಕ್ಕೆ ಕಾರಣ ಆಗಿರುವ ‘ಹಮಾರೆ ಬಾರಾಹ್​’ (Hamare Baarah) ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಆದರೆ ಈಗ ಈ ಸಿನಿಮಾದ ನಿರ್ಮಾಪಕರ ಪರವಾಗಿ ಕೋರ್ಟ್​ ತೀರ್ಪು ನೀಡಿದೆ. ಸಿನಿಮಾದಲ್ಲಿ ಕೆಲವು ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ನಿರ್ಮಾಪಕರು ಒಪ್ಪಿದ್ದಾರೆ. ಹಾಗಾಗಿ ಈ ಸಿನಿಮಾದ ಬಿಡುಗಡೆಗೆ ಬಾಂಬೆ ಹೈಕೋರ್ಟ್​ (Bombay High Court) ಅನುಮತಿ ನೀಡಿದೆ. ಆರಂಭದಲ್ಲಿ ಈ ಸಿನಿಮಾದ ಶೀರ್ಷಿಕೆಗೆ ವಿರೋಧ ವ್ಯಕ್ತವಾಗಿತ್ತು. ಬಳಿಕ ಟೈಟಲ್​ ಬದಲಾಯಿಸಲಾಯಿತು.

ಮುಸ್ಲಿಂ ಧರ್ಮದವರ ಭಾವನೆಗಳಿಗೆ ‘ಹಮಾರೆ ಬಾರಾಹ್​’ ಸಿನಿಮಾ ಧಕ್ಕೆ ಉಂಟು ಮಾಡಲಿದೆ ಎಂದು ಕೆಲವರು ತಕರಾರು ತೆಗೆದಿದ್ದರು. ಅಲ್ಲದೇ, ಖುರಾನ್​ನ ಭೋದನೆಗಳನ್ನು ತಪ್ಪಾಗಿ ಅರ್ಥೈಸಿದೆ ಎಂದು ಕಿರಿಕ್​ ಮಾಡಲಾಗಿತ್ತು. ಆದರೆ ಈ ಸಿನಿಮಾದಲ್ಲಿ ಆ ರೀತಿಯ ಯಾವುದೇ ಅಂಶಗಳು ಇಲ್ಲ ಎಂಬುದನ್ನು ಮನಗಂಡ ಬಳಿಕ ಬಾಂಬೆ ಹೈಕೋರ್ಟ್​ ಈ ಆದೇಶ ನೀಡಿದೆ.

ಅನ್ನು ಕಪೂರ್ ಅವರು ‘ಹಮಾರೆ ಬಾರಾಹ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆದ ನಂತರ ವಿವಾದ ಸೃಷ್ಟಿಯಾಗಿತ್ತು. ಸಿನಿಮಾದಲ್ಲಿನ ಕೆಲವು ದೃಶ್ಯಗಳನ್ನು ಡಿಲೀಟ್​ ಮಾಡಬೇಕು ಎಂಬ ಒತ್ತಾಯ ಕೇಳಿಬಂತು. ನ್ಯಾಯಾಲಯದ ಸೂಚನೆ ಮೇರೆಗೆ ನಿರ್ಮಾಪಕರು ಆ ದೃಶ್ಯಗಳನ್ನು ಸಿನಿಮಾದಿಂದ ತೆಗೆದು ಹಾಕಲು ಒಪ್ಪಿದ್ದಾರೆ. ಆದ್ದರಿಂದ ಸಿನಿಮಾದ ಬಿಡುಗಡೆಗೆ ಅನುಮತಿ ಸಿಕ್ಕಿದೆ.

ಇದನ್ನೂ ಓದಿ: ‘ಹಮಾರೆ ಬಾರಾ’ ವಿವಾದ; ಸೆನ್ಸಾರ್ ಮಂಡಳಿ ಓಕೆ ಹೇಳಿದ ಡೈಲಾಗ್​ಗೆ ಹೈಕೋರ್ಟ್ ತಕರಾರು

‘ಈ ಸಿನಿಮಾ ಮಹಿಳೆಯರ ಏಳಿಗೆಗಾಗಿ ಇರುವಂಥದ್ದು. ಖುರಾನ್​ ಅನ್ನು ತಪ್ಪಾಗಿ ಅರ್ಥೈಸುವ ಓರ್ವ ಮೌಲಾನಾನ ಪಾತ್ರ ಈ ಸಿನಿಮಾದಲ್ಲಿದೆ. ಆದರೆ ಬೇರೆ ಮುಸ್ಲಿಂ ವ್ಯಕ್ತಿ ಅದನ್ನು ವಿರೋಧಿಸುತ್ತಾನೆ. ಆ ರೀತಿಯ ಮೌಲಾನಾರನ್ನು ಜನರು ಕಣ್ಣು ಮುಚ್ಚಿಕೊಂಡು ಅನುಸರಿಸಬಾರದು. ತಮ್ಮ ಬುದ್ಧಿ ಉಪಯೋಗಿಸಬೇಕು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ’ ಎಂದು ಕೋರ್ಟ್​ ಹೇಳಿದೆ.

ಪ್ರಮಾಣಪತ್ರ ಪಡೆಯದ ದೃಶ್ಯಗಳನ್ನು ಒಳಗೊಂಡ ಟ್ರೇಲರ್​ ಬಿಡುಗಡೆ ಮಾಡಿದ್ದಕ್ಕೆ ‘ಹಮಾರೆ ಬಾರಾಹ್​’ ಸಿನಿಮಾದ ನಿರ್ಮಾಪಕರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಆರಂಭದಲ್ಲಿ ಜೂನ್​ 7ರಂದು ಈ ಸಿನಿಮಾವನ್ನು ರಿಲೀಸ್​ ಮಾಡಲು ತೀರ್ಮಾನಿಸಲಾಗಿತ್ತು. ನಂತರ ಜೂನ್​ 14ಕ್ಕೆ ಮುಂದೂಡಿಕೆ ಆಗಿತ್ತು. ಬಳಿಕ ಬಿಡುಗಡೆಗೆ ತಡೆ ನೀಡಲಾಯಿತು. ಈಗ ಹೊಸ ರಿಲೀಸ್​ ದಿನಾಂಕವನ್ನು ನಿರ್ಮಾಪಕರು ಇನ್ನಷ್ಟೇ ಘೋಷಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us