AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈತೊಳೆದುಕೊಂಡ ಕೋರ್ಟ್, ಕಂಗನಾಗೆ ಹೆಚ್ಚಾಯ್ತು ಕಷ್ಟ

Emergency Movie: ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಹಿಂದಿ ಸಿನಿಮಾ ಬಿಡುಗಡೆ ಇನ್ನಷ್ಟು ತಡವಾಗುವುದು ಖಾತ್ರಿಯಾಗಿದೆ. ಬಾಂಬೆ ಹೈಕೋರ್ಟ್ ಸಹ ಈ ವಿಚಾರದಲ್ಲಿ ಯಾವುದೇ ಸೂಚನೆಯನ್ನು ಸಿಬಿಎಫ್​ಸಿಗೆ ನೀಡಲಾಗದು ಎಂದಿದೆ.

ಕೈತೊಳೆದುಕೊಂಡ ಕೋರ್ಟ್, ಕಂಗನಾಗೆ ಹೆಚ್ಚಾಯ್ತು ಕಷ್ಟ
ಮಂಜುನಾಥ ಸಿ.
|

Updated on: Sep 04, 2024 | 4:08 PM

Share

ನಟಿ, ಸಂಸದೆ ಕಂಗನಾ ರನೌತ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರೇ ಈ ಹಿಂದೆ ಹೇಳಿದ್ದಂತೆ ಅವರ ಇರುವ ಹಣ, ಆಸ್ತಿಗಳನ್ನು ಅಡಮಾನವಿಟ್ಟು ‘ಎಮರ್ಜೆನ್ಸಿ’ ಸಿನಿಮಾ ನಿರ್ಮಿಸಿದ್ದಾರೆ. ಆದರೆ ಈ ಸಿನಿಮಾದ ಬಿಡುಗಡೆಗೆ ತೀವ್ರ ಅಡ್ಡಿ-ಆತಂಕ ಎದುರಾಗಿದೆ. ಕಂಗನಾ, ಬಿಜೆಪಿ ಸಂಸದೆಯಾಗುವ ಮುನ್ನವೇ ಸಿನಿಮಾದ ಚಿತ್ರೀಕರಣ ಮುಗಿಸಿದ್ದರು. ಆದರೆ ಚುನಾವಣೆ ಟಿಕೆಟ್ ಸಿಕ್ಕಿದ ಕಾರಣ ಬಿಡುಗಡೆ ತಡ ಮಾಡಿದ್ದರು. ಈಗ ಅಂದುಕೊಂಡಂತೆ ಸಂಸದೆ ಆಗಿದ್ದಾರೆ ಆದರೆ ಸಿನಿಮಾ ಬಿಡುಗಡೆ ಮಾಡಲು ಆಗುತ್ತಿಲ್ಲ.

‘ಎಮರ್ಜೆನ್ಸಿ’ ಸಿನಿಮಾ, ಇಂದಿರಾ ಗಾಂಧಿ ಕುರಿತಾದ ಕತೆ ಹೊಂದಿರುವ ಸಿನಿಮಾ ಆಗಿದ್ದು, ಸಿನಿಮಾ ಟ್ರೈಲರ್ ಬಿಡುಗಡೆ ಆಗುತ್ತಿದ್ದಂತೆ ಸಿಖ್ ಸಮುದಾಯದವರು ಸಿನಿಮಾದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಿಖ್ ಸಮುದಾಯದ ವಿರೋಧದ ನಡುವೆಯೂ ಸಿನಿಮಾ ಬಿಡುಗಡೆ ದಿನಾಂಕವನ್ನು ಕಂಗನಾ ರನೌತ್ ಘೋಷಣೆ ಮಾಡಿದ್ದರು. ಆದರೆ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಸಿಬಿಎಫ್​ಸಿ ಹಿಂದೇಟು ಹಾಕಿದೆ.

ಸಿಬಿಎಫ್​ಸಿ, ಬೇಗನೆ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಸೂಚನೆ ನೀಡುವಂತೆ ‘ಎಮರ್ಜೆನ್ಸಿ’ ಸಿನಿಮಾದ ನಟಿ, ನಿರ್ದೇಶಕಿ, ನಿರ್ಮಾಪಕಿಯೂ ಆಗಿರುವ ಕಂಗನಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕಂಗನಾ ಮನವಿಯನ್ನು ತಳ್ಳಿ ಹಾಕಿರುವ ನ್ಯಾಯಾಲಯ, ಪ್ರಮಾಣ ಪತ್ರದ ವಿಷಯದಲ್ಲಿ ಸಿಬಿಎಫ್​ಸಿಗೆ ಸೂಚನೆಗಳನ್ನು ನೀಡಲಾಗದು ಎಂದು ಕಂಗನಾರ ಅರ್ಜಿಯನ್ನು ತಳ್ಳಿ ಹಾಕಿದೆ. ‘ಮಧ್ಯ ಪ್ರದೇಶ ಹೈಕೋರ್ಟ್ ಸಿಬಿಎಫ್​ಸಿಗೆ ‘ಎಮರ್ಜೆನ್ಸಿ’ ಸಿನಿಮಾದ ಕುರಿತಾಗಿ ಸೂಚನೆ ನೀಡಿರುವ ಕಾರಣ, ತಾನು ‘ಎಮರ್ಜೆನ್ಸಿ’ ಸಿನಿಮಾದ ಪ್ರಮಾಣ ಪತ್ರ ಬೇಗನೆ ನೀಡುವಂತೆ ಸೂಚನೆ ನೀಡಲಾಗದು’ ಎಂದಿದೆ.

ಇದನ್ನೂ ಓದಿ:ಇಂದಿರಾ ಗಾಂಧಿಯಂತೆ ಮಮತಾರನ್ನು ಹತ್ಯೆ ಮಾಡಿ ಎಂದಿದ್ದ ವಿದ್ಯಾರ್ಥಿನಿಯ ಬಂಧನ

ಕಂಗನಾ ರನೌತ್​ರ ‘ಎಮರ್ಜೆನ್ಸಿ’ ಸಿನಿಮಾದ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ವಿಚಾರಣೆ ನಡೆಸಿರುವ ನ್ಯಾಯಾಲಯ, ಸಿಬಿಎಫ್​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವ ಮೊದಲು ಅರ್ಜಿದಾರರು ಎತ್ತಿರುವ ಅನುಮಾನಗಳಿಗೆ ಸ್ಪಷ್ಟನೆ ನೀಡಿಯೇ ಪ್ರಮಾಣ ಪತ್ರ ನೀಡಬೇಕು ಎಂದಿದೆ. ಇದೇ ಕಾರಣಕ್ಕೆ ಸಿಬಿಎಫ್​ಸಿ, ‘ಎಮರ್ಜೆನ್ಸಿ’ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡುತ್ತಿದೆ.

ಕೆಲ ಮೂಲಗಳ ಪ್ರಕಾರ, ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ, ಸಂಜಯ್ ಗಾಂಧಿ ಇನ್ನೂ ಕೆಲವು ಕಾಂಗ್ರೆಸ್ ರಾಜಕಾರಣಿಗಳು ಹಾಗೂ ಸಿಖ್ ಸಮುದಾಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಲಾಗಿದೆ. ಎಲ್ಲವನ್ನು ಅತಿರೇಕದ ದೃಷ್ಟಿಯಿಂದಲೇ ಕಂಗನಾ ತಮ್ಮ ಸಿನಿಮಾದಲ್ಲಿ ತೋರಿಸಿರುವ ಕಾರಣ ಸಿಬಿಎಫ್​ಸಿ, ಪ್ರಮಾಣ ಪತ್ರ ನೀಡಲು ತಡ ಮಾಡುತ್ತಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ