‘ತಲೈವಿ’ ರಿಲೀಸ್​ಗೂ ಮೊದಲೇ ಕಂಗನಾ ರಣಾವತ್​ಗೆ ಬಾಂಬೆ ಹೈಕೋರ್ಟ್​ನಿಂದ ಕಹಿ ಸುದ್ದಿ

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಂಗನಾ ರಣಾವತ್​ ಗೀತ ರಚನೆಕಾರ ಜಾವೇದ್​ ಅಖ್ತರ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ‘ಈ ಆರೋಪಗಳೆಲ್ಲ ಸುಳ್ಳು. ಅವರು ನನ್ನ ಮಾನ ಹರಾಜು ಹಾಕಿದ್ದಾರೆ’ ಎಂದು ಕಂಗನಾ ವಿರುದ್ಧ ಜಾವೇದ್​ ದೂರು ದಾಖಲಿಸಿದ್ದರು.

‘ತಲೈವಿ’ ರಿಲೀಸ್​ಗೂ ಮೊದಲೇ ಕಂಗನಾ ರಣಾವತ್​ಗೆ ಬಾಂಬೆ ಹೈಕೋರ್ಟ್​ನಿಂದ ಕಹಿ ಸುದ್ದಿ
ಕಂಗನಾ ರಣಾವತ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 09, 2021 | 3:21 PM

ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ನಾಳೆ (ಸೆ.10) ಸಿನಿಮಾ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲೇ ಕಂಗನಾಗೆ ಬಾಂಬೆ ಹೈಕೋರ್ಟ್​ ಕಹಿ ಸುದ್ದಿ ನೀಡಿದೆ. ತಮ್ಮ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾ ಮಾಡುವಂತೆ ಅವರು ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಆದರೆ, ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಂಗನಾ ರಣಾವತ್​ ಗೀತ ರಚನೆಕಾರ ಜಾವೇದ್​ ಅಖ್ತರ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ‘ಈ ಆರೋಪಗಳೆಲ್ಲ ಸುಳ್ಳು. ಅವರು ನನ್ನ ಮಾನ ಹರಾಜು ಹಾಕಿದ್ದಾರೆ’ ಎಂದು ಕಂಗನಾ ವಿರುದ್ಧ ಜಾವೇದ್​ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದರು.  ಇದನ್ನು ಕಂಗನಾ ಪ್ರಶ್ನೆ ಮಾಡಿದ್ದರು. ಅಲ್ಲದೆ, ಈ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿದ್ದರು. ಸೆಪ್ಟೆಂಬರ್​ 1ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರೇವತಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಈ ಪ್ರಕರಣದ ಆದೇಶವನ್ನು ನೀಡಲಾಗಿದ್ದು, ಕಂಗನಾ ಅರ್ಜಿ ವಜಾಗೊಂಡಿದೆ.

ಕಂಗನಾ ರಣಾವತ್​ ಟಿವಿ ಸಂದರ್ಶನದಲ್ಲಿ ಜಾವೇದ್​ ಅಖ್ತರ್​ ಬಗ್ಗೆ ಮಾನ ಹಾನಿ ಆಗುವ ರೀತಿಯಲ್ಲಿ ಮಾತನಾಡಿದ್ದರು. ಈ ಸಂಬಂಧ ಕಳೆದ ನವೆಂಬರ್​ ತಿಂಗಳಲ್ಲಿ ಜಾವೇದ್​ ಅವರು ಅಂಧೇರಿ ಮೆಟ್ರೋಪೊಲಿಟನ್​ ಮ್ಯಾಜಿಸ್ಟ್ರೇಟ್​ನಲ್ಲಿ ದೂರು ದಾಖಲಿಸಿದ್ದರು. 2020ರ ಡಿಸೆಂಬರ್​ ತಿಂಗಳಲ್ಲಿ ಕೋರ್ಟ್​ ಈ ಪ್ರಕರಣ ಸಂಬಂಧ ಪೊಲೀಸರಿಗೆ ಆದೇಶ ಒಂದನ್ನು ನೀಡಿತ್ತು. ಜಾವೇದ್​ ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಲು ನಿರ್ದೇಶಿಸಿತ್ತು. ಈ ವರ್ಷ ಫೆಬ್ರವರಿಯಲ್ಲಿ ಕಂಗನಾಗೆ ಸಮನ್ಸ್​ ನೀಡಲಾಗಿತ್ತು.

ಸೆ.10ರಂದು ಬಿಡುಗಡೆ ಆಗುತ್ತಿರುವ ‘ತಲೈವಿ’ ಚಿತ್ರಕ್ಕೆ ಎ.ಎಲ್. ವಿಜಯ್ ನಿರ್ದೇಶನ ಮಾಡಿದ್ದಾರೆ. ಅರವಿಂದ್ ಸ್ವಾಮಿ, ನಾಸರ್, ಭಾಗ್ಯಶ್ರೀ, ಸಮುದ್ರಖಣಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಟ್ ಕರ್ಫ್ಯೂ ಮತ್ತು ಥಿಯೇಟರ್ನಲ್ಲಿ ಶೇ.50ರಷ್ಟು ನಿರ್ಬಂಧದ ನಡುವೆಯೂ ‘ತಲೈವಿ’ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Thalaivii: ಕಂಗನಾ ಆಕ್ರೋಶದ ನಂತರ ‘ತಲೈವಿ’ಯ ಪ್ರದರ್ಶನಕ್ಕೆ PVR ಒಪ್ಪಿಗೆ; ಆದರೂ ಬಗೆಹರಿದಿಲ್ಲ ಹಿಂದಿ ಆವೃತ್ತಿಯ ಸಮಸ್ಯೆ

‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿಸಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ