AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಲೈವಿ’ ರಿಲೀಸ್​ಗೂ ಮೊದಲೇ ಕಂಗನಾ ರಣಾವತ್​ಗೆ ಬಾಂಬೆ ಹೈಕೋರ್ಟ್​ನಿಂದ ಕಹಿ ಸುದ್ದಿ

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಂಗನಾ ರಣಾವತ್​ ಗೀತ ರಚನೆಕಾರ ಜಾವೇದ್​ ಅಖ್ತರ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ‘ಈ ಆರೋಪಗಳೆಲ್ಲ ಸುಳ್ಳು. ಅವರು ನನ್ನ ಮಾನ ಹರಾಜು ಹಾಕಿದ್ದಾರೆ’ ಎಂದು ಕಂಗನಾ ವಿರುದ್ಧ ಜಾವೇದ್​ ದೂರು ದಾಖಲಿಸಿದ್ದರು.

‘ತಲೈವಿ’ ರಿಲೀಸ್​ಗೂ ಮೊದಲೇ ಕಂಗನಾ ರಣಾವತ್​ಗೆ ಬಾಂಬೆ ಹೈಕೋರ್ಟ್​ನಿಂದ ಕಹಿ ಸುದ್ದಿ
ಕಂಗನಾ ರಣಾವತ್
TV9 Web
| Edited By: |

Updated on: Sep 09, 2021 | 3:21 PM

Share

ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ನಾಳೆ (ಸೆ.10) ಸಿನಿಮಾ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲೇ ಕಂಗನಾಗೆ ಬಾಂಬೆ ಹೈಕೋರ್ಟ್​ ಕಹಿ ಸುದ್ದಿ ನೀಡಿದೆ. ತಮ್ಮ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾ ಮಾಡುವಂತೆ ಅವರು ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಆದರೆ, ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಂಗನಾ ರಣಾವತ್​ ಗೀತ ರಚನೆಕಾರ ಜಾವೇದ್​ ಅಖ್ತರ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ‘ಈ ಆರೋಪಗಳೆಲ್ಲ ಸುಳ್ಳು. ಅವರು ನನ್ನ ಮಾನ ಹರಾಜು ಹಾಕಿದ್ದಾರೆ’ ಎಂದು ಕಂಗನಾ ವಿರುದ್ಧ ಜಾವೇದ್​ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದರು.  ಇದನ್ನು ಕಂಗನಾ ಪ್ರಶ್ನೆ ಮಾಡಿದ್ದರು. ಅಲ್ಲದೆ, ಈ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿದ್ದರು. ಸೆಪ್ಟೆಂಬರ್​ 1ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರೇವತಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಈ ಪ್ರಕರಣದ ಆದೇಶವನ್ನು ನೀಡಲಾಗಿದ್ದು, ಕಂಗನಾ ಅರ್ಜಿ ವಜಾಗೊಂಡಿದೆ.

ಕಂಗನಾ ರಣಾವತ್​ ಟಿವಿ ಸಂದರ್ಶನದಲ್ಲಿ ಜಾವೇದ್​ ಅಖ್ತರ್​ ಬಗ್ಗೆ ಮಾನ ಹಾನಿ ಆಗುವ ರೀತಿಯಲ್ಲಿ ಮಾತನಾಡಿದ್ದರು. ಈ ಸಂಬಂಧ ಕಳೆದ ನವೆಂಬರ್​ ತಿಂಗಳಲ್ಲಿ ಜಾವೇದ್​ ಅವರು ಅಂಧೇರಿ ಮೆಟ್ರೋಪೊಲಿಟನ್​ ಮ್ಯಾಜಿಸ್ಟ್ರೇಟ್​ನಲ್ಲಿ ದೂರು ದಾಖಲಿಸಿದ್ದರು. 2020ರ ಡಿಸೆಂಬರ್​ ತಿಂಗಳಲ್ಲಿ ಕೋರ್ಟ್​ ಈ ಪ್ರಕರಣ ಸಂಬಂಧ ಪೊಲೀಸರಿಗೆ ಆದೇಶ ಒಂದನ್ನು ನೀಡಿತ್ತು. ಜಾವೇದ್​ ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಲು ನಿರ್ದೇಶಿಸಿತ್ತು. ಈ ವರ್ಷ ಫೆಬ್ರವರಿಯಲ್ಲಿ ಕಂಗನಾಗೆ ಸಮನ್ಸ್​ ನೀಡಲಾಗಿತ್ತು.

ಸೆ.10ರಂದು ಬಿಡುಗಡೆ ಆಗುತ್ತಿರುವ ‘ತಲೈವಿ’ ಚಿತ್ರಕ್ಕೆ ಎ.ಎಲ್. ವಿಜಯ್ ನಿರ್ದೇಶನ ಮಾಡಿದ್ದಾರೆ. ಅರವಿಂದ್ ಸ್ವಾಮಿ, ನಾಸರ್, ಭಾಗ್ಯಶ್ರೀ, ಸಮುದ್ರಖಣಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಟ್ ಕರ್ಫ್ಯೂ ಮತ್ತು ಥಿಯೇಟರ್ನಲ್ಲಿ ಶೇ.50ರಷ್ಟು ನಿರ್ಬಂಧದ ನಡುವೆಯೂ ‘ತಲೈವಿ’ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Thalaivii: ಕಂಗನಾ ಆಕ್ರೋಶದ ನಂತರ ‘ತಲೈವಿ’ಯ ಪ್ರದರ್ಶನಕ್ಕೆ PVR ಒಪ್ಪಿಗೆ; ಆದರೂ ಬಗೆಹರಿದಿಲ್ಲ ಹಿಂದಿ ಆವೃತ್ತಿಯ ಸಮಸ್ಯೆ

‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿಸಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ