AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಲೈವಿ’ ರಿಲೀಸ್​ಗೂ ಮೊದಲೇ ಕಂಗನಾ ರಣಾವತ್​ಗೆ ಬಾಂಬೆ ಹೈಕೋರ್ಟ್​ನಿಂದ ಕಹಿ ಸುದ್ದಿ

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಂಗನಾ ರಣಾವತ್​ ಗೀತ ರಚನೆಕಾರ ಜಾವೇದ್​ ಅಖ್ತರ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ‘ಈ ಆರೋಪಗಳೆಲ್ಲ ಸುಳ್ಳು. ಅವರು ನನ್ನ ಮಾನ ಹರಾಜು ಹಾಕಿದ್ದಾರೆ’ ಎಂದು ಕಂಗನಾ ವಿರುದ್ಧ ಜಾವೇದ್​ ದೂರು ದಾಖಲಿಸಿದ್ದರು.

‘ತಲೈವಿ’ ರಿಲೀಸ್​ಗೂ ಮೊದಲೇ ಕಂಗನಾ ರಣಾವತ್​ಗೆ ಬಾಂಬೆ ಹೈಕೋರ್ಟ್​ನಿಂದ ಕಹಿ ಸುದ್ದಿ
ಕಂಗನಾ ರಣಾವತ್
TV9 Web
| Edited By: |

Updated on: Sep 09, 2021 | 3:21 PM

Share

ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ನಾಳೆ (ಸೆ.10) ಸಿನಿಮಾ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲೇ ಕಂಗನಾಗೆ ಬಾಂಬೆ ಹೈಕೋರ್ಟ್​ ಕಹಿ ಸುದ್ದಿ ನೀಡಿದೆ. ತಮ್ಮ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾ ಮಾಡುವಂತೆ ಅವರು ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಆದರೆ, ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಂಗನಾ ರಣಾವತ್​ ಗೀತ ರಚನೆಕಾರ ಜಾವೇದ್​ ಅಖ್ತರ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ‘ಈ ಆರೋಪಗಳೆಲ್ಲ ಸುಳ್ಳು. ಅವರು ನನ್ನ ಮಾನ ಹರಾಜು ಹಾಕಿದ್ದಾರೆ’ ಎಂದು ಕಂಗನಾ ವಿರುದ್ಧ ಜಾವೇದ್​ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದರು.  ಇದನ್ನು ಕಂಗನಾ ಪ್ರಶ್ನೆ ಮಾಡಿದ್ದರು. ಅಲ್ಲದೆ, ಈ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿದ್ದರು. ಸೆಪ್ಟೆಂಬರ್​ 1ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರೇವತಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಈ ಪ್ರಕರಣದ ಆದೇಶವನ್ನು ನೀಡಲಾಗಿದ್ದು, ಕಂಗನಾ ಅರ್ಜಿ ವಜಾಗೊಂಡಿದೆ.

ಕಂಗನಾ ರಣಾವತ್​ ಟಿವಿ ಸಂದರ್ಶನದಲ್ಲಿ ಜಾವೇದ್​ ಅಖ್ತರ್​ ಬಗ್ಗೆ ಮಾನ ಹಾನಿ ಆಗುವ ರೀತಿಯಲ್ಲಿ ಮಾತನಾಡಿದ್ದರು. ಈ ಸಂಬಂಧ ಕಳೆದ ನವೆಂಬರ್​ ತಿಂಗಳಲ್ಲಿ ಜಾವೇದ್​ ಅವರು ಅಂಧೇರಿ ಮೆಟ್ರೋಪೊಲಿಟನ್​ ಮ್ಯಾಜಿಸ್ಟ್ರೇಟ್​ನಲ್ಲಿ ದೂರು ದಾಖಲಿಸಿದ್ದರು. 2020ರ ಡಿಸೆಂಬರ್​ ತಿಂಗಳಲ್ಲಿ ಕೋರ್ಟ್​ ಈ ಪ್ರಕರಣ ಸಂಬಂಧ ಪೊಲೀಸರಿಗೆ ಆದೇಶ ಒಂದನ್ನು ನೀಡಿತ್ತು. ಜಾವೇದ್​ ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಲು ನಿರ್ದೇಶಿಸಿತ್ತು. ಈ ವರ್ಷ ಫೆಬ್ರವರಿಯಲ್ಲಿ ಕಂಗನಾಗೆ ಸಮನ್ಸ್​ ನೀಡಲಾಗಿತ್ತು.

ಸೆ.10ರಂದು ಬಿಡುಗಡೆ ಆಗುತ್ತಿರುವ ‘ತಲೈವಿ’ ಚಿತ್ರಕ್ಕೆ ಎ.ಎಲ್. ವಿಜಯ್ ನಿರ್ದೇಶನ ಮಾಡಿದ್ದಾರೆ. ಅರವಿಂದ್ ಸ್ವಾಮಿ, ನಾಸರ್, ಭಾಗ್ಯಶ್ರೀ, ಸಮುದ್ರಖಣಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಟ್ ಕರ್ಫ್ಯೂ ಮತ್ತು ಥಿಯೇಟರ್ನಲ್ಲಿ ಶೇ.50ರಷ್ಟು ನಿರ್ಬಂಧದ ನಡುವೆಯೂ ‘ತಲೈವಿ’ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Thalaivii: ಕಂಗನಾ ಆಕ್ರೋಶದ ನಂತರ ‘ತಲೈವಿ’ಯ ಪ್ರದರ್ಶನಕ್ಕೆ PVR ಒಪ್ಪಿಗೆ; ಆದರೂ ಬಗೆಹರಿದಿಲ್ಲ ಹಿಂದಿ ಆವೃತ್ತಿಯ ಸಮಸ್ಯೆ

‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿಸಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್