AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಆರ್ಯನ್​ ಖಾನ್​ಗೆ ಬಿಗ್ ರಿಲೀಫ್ ನೀಡಿದ ಬಾಂಬೆ ಹೈಕೋರ್ಟ್; ಜಾಮೀನು ಷರತ್ತು ಸಡಿಲಗೊಳಿಸಿ ಆದೇಶ

Bombay HC: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಷರತ್ತನ್ನು ಸಡಿಲಿಸಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. ಆರ್ಯನ್ ವಾದಕ್ಕೆ ಕೋರ್ಟ್ ಹೇಳಿದ್ದೇನು? ಇಲ್ಲಿದೆ ಮಾಹಿತಿ.

Aryan Khan: ಆರ್ಯನ್​ ಖಾನ್​ಗೆ ಬಿಗ್ ರಿಲೀಫ್ ನೀಡಿದ ಬಾಂಬೆ ಹೈಕೋರ್ಟ್; ಜಾಮೀನು ಷರತ್ತು ಸಡಿಲಗೊಳಿಸಿ ಆದೇಶ
ಆರ್ಯನ್ ಖಾನ್
TV9 Web
| Edited By: |

Updated on: Dec 15, 2021 | 3:23 PM

Share

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದ ಆರೋಪಿ ಆರ್ಯನ್ ಖಾನ್‌ಗೆ (Aryan Khan) ಬಾಂಬೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾಮೀನು ಷರತ್ತನ್ನು ಮಾರ್ಪಡಿಸಲು ಕೋರಿ ಆರ್ಯನ್‌ ಖಾನ್‌ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಪುರಸ್ಕರಿಸಿದೆ. ಪ್ರತಿ ಶುಕ್ರವಾರ ಎನ್‌ಸಿಬಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿ ಅದು ಆದೇಶ ಹೊರಡಿಸಿದೆ. ವಿನಾಯಿತಿ ಕೋರಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದ ಆರ್ಯನ್‌ ಖಾನ್, ಜಾಮೀನು ಷರತ್ತಿನ ಭಾಗವಾಗಿ ಪ್ರತಿ ಶುಕ್ರವಾರ ಮುಂಬೈನಲ್ಲಿರುವ ಎನ್‌ಸಿಬಿ ಕಚೇರಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಬಾಂಬೆ ಹೈಕೋರ್ಟ್, ಆರ್ಯನ್ ಖಾನ್‌ಗೆ ಜಾಮೀನು ನೀಡುವ ಸಂದರ್ಭದಲ್ಲಿ, ಪ್ರತಿ ಶುಕ್ರವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯ ನಡುವೆ ಎನ್​ಸಿಬಿಗೆ ಹಾಜರಾಗಬೇಕು ಎಂದು ಹೇಳಿತ್ತು. ಅದರಂತೆ ಆರ್ಯನ್ ಖಾನ್ ಅವರು ನವೆಂಬರ್ 5, 12, 19, 26 ಮತ್ತು ಡಿಸೆಂಬರ್ 3 ಮತ್ತು 10 ರಂದು ಎನ್​ಸಿಬಿ ಮುಂದೆ ಹಾಜರಾಗಿದ್ದರು.

ಎನ್‌ಸಿಬಿಯ ಮೂರು ಪುಟಗಳ ಪ್ರತಿಕ್ರಿಯೆ ಮತ್ತು ಆರ್ಯನ್ ಖಾನ್ ಅವರ ಮನವಿಯನ್ನು ಪರಿಶೀಲಿಸಿದ ನಂತರ, ನ್ಯಾಯಮೂರ್ತಿ ಎನ್‌ಡಬ್ಲ್ಯೂ ಸಾಂಬ್ರೆ ಅವರು ಆರ್ಯನ್ ಖಾನ್ ಅವರನ್ನು ಎನ್‌ಸಿಬಿಯಿಂದ ಯಾವಾಗ ಮತ್ತು ಎಲ್ಲಿಗೆ ಕರೆದರೂ ಸಾಕಷ್ಟು ಸಮಯ ನೀಡಿದರೆ ಪ್ರಯಾಣಿಸಲು ತೊಂದರೆಯಿಲ್ಲ ಎಂದು ತಿಳಿಸಿದ್ದನ್ನು ಗಮನಿಸಿದರು. ಮತ್ತು ಈ ಕುರಿತು ಕೋರ್ಟ್ ಮಾಹಿತಿ ನೀಡಿ, ಎನ್​ಸಿಬಿ ಕಚೇರಿ ಹೊರತಾದ ಯಾವುದೇ ಸ್ಥಳಗಳಿಗೆ ಆರ್ಯನ್ ತೆರಳುವ ಮುನ್ನ ಡ್ರಗ್ ಕ್ರೂಸ್ ಪ್ರಕರಣದ ತನಿಖಾಧಿಕಾರಿಗೆ ತಿಳಿಸಬೇಕು ಎಂದು ಆದೇಶಿಸಿದೆ.

ಆರ್ಯನ್ ಖಾನ್ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿ ಜಾಮೀನು ಷರತ್ತುಗಳನ್ನು ಮಾರ್ಪಾಡು ಮಾಡುವಂತೆ ಮನವಿ ಮಾಡಿದ್ದರು. ಪ್ರತಿ ಶುಕ್ರವಾರ ಎನ್‌ಸಿಬಿ ಕಚೇರಿಯಲ್ಲಿ ಹಾಜರಾತಿಯನ್ನು ಗುರುತಿಬೇಕು ಎನ್ನುವ ಆದೇಶ ತೆಗೆಯಬೇಕು ಎಂದು ಅವರು ಕೋರಿದ್ದರು.

ಬುಧವಾರ ಆರ್ಯನ್ ಖಾನ್ ಪರ ವಕೀಲ ಅಮಿತ್ ದೇಸಾಯಿ ವಾದ ಮಂಡಿಸಿ, ‘‘ಪ್ರಕರಣದಲ್ಲಿ ಏನೂ ಆಗುತ್ತಿಲ್ಲ, ಅವರು (ಖಾನ್) ಸಹಕರಿಸುತ್ತಾರೆ ಮತ್ತು ಎನ್​ಸಿಬಿ ಬಯಸಿದಾಗ ಬಂದು ಹೋಗುತ್ತಾರೆ. ಈಗ ದೆಹಲಿಯಿಂದ ತನಿಖೆ ನಡೆಯುತ್ತಿದೆ, ಒಂದು ವೇಳೆ ಅವರು ದೆಹಲಿಗೆ ಬರಬೇಕೆಂದು ಬಯಸಿದರೆ ಆರ್ಯನ್ ಅಲ್ಲಿಗೂ ತೆರಳುತ್ತಾರೆ. ಅವರು ಎನ್‌ಸಿಬಿ ಕಚೇರಿಗೆ ಹೋಗಬೇಕಾದಾಗಲೆಲ್ಲಾ ಭಾರಿ ಪೊಲೀಸ್ ನಿಯೋಜನೆ ಇರುತ್ತದೆ. ಮುಂಬೈ ನಗರಕ್ಕೆ ಇತರ ರೀತಿಯಲ್ಲಿ ಸಹಾಯ ಮಾಡಲು ಇದನ್ನು ಕಡಿತ ಮಾಡಬಹುದು’’ ಎಂದಿದ್ದರು.

ಎನ್‌ಸಿಬಿ ಪರ ವಾದ ಮಂಡಿಸಿದ ವಕೀಲ ಶ್ರೀರಾಮ್ ಶಿರ್ಸತ್, ಜಾಮೀನು ಷರತ್ತನ್ನು ಮಾರ್ಪಾಡು ಮಾಡುವಲ್ಲಿ ಎನ್​ಸಿಬಿಗೆ ಯಾವುದೇ ತೊಂದರೆ ಇಲ್ಲ. ಆದರೆ ಆರ್ಯನ್ ಅವರು ದೆಹಲಿ ಅಥವಾ ಮುಂಬೈಗೆ ಕರೆದಾಗ ಹಾಜರಾಗಬೇಕು ಎಂದರು.  ಅಂತಿಮವಾಗಿ ನ್ಯಾಯಾಲಯ ಜಾಮೀನು ಷರತ್ತನ್ನು ಸಡಿಲಿಸಿ ಆದೇಶ ನೀಡಿದೆ.

ಇದನ್ನೂ ಓದಿ:

‘ನಮ್ಮ ಊರಿಗೆ ಬಂದು ತುಂಬಾ ಸಮಯವಾಯ್ತು’; ಬೆಂಗಳೂರ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

Raj Kundra: ಅಶ್ಲೀಲ ಚಿತ್ರ ಪ್ರಕರಣ; ರಾಜ್ ಕುಂದ್ರಾಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ