AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಯ ಮಗಳಿಗಾಗಿ ಹಿಂದಿಯಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಲು ಮುಂದಾದ ಬೋನಿ ಕಪೂರ್​

ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ಪ್ರತಿಭೆಗೆ ನಿರ್ಮಾಪಕ ಬೋನಿ ಕಪೂರ್​ ಫಿದಾ ಆಗಿದ್ದಾರೆ. ಹಾಗಾಗಿ ಉಪ್ಪೆನಾ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಬೇಕು ಎಂದು ಅವರು ಆಲೋಚಿಸಿದ್ದಾರೆ. ಆ ಸಿನಿಮಾವನ್ನು ಅವರು ತಮ್ಮ ಕಿರಿಯ ಪುತ್ರಿ ಖುಷಿ ಕಪೂರ್​ ಸಲುವಾಗಿ ಅವರು ನಿರ್ಮಾಣ ಮಾಡುವ ಆಸೆ ವ್ಯಕ್ತಪಡಿಸಿದ್ದಾರೆ.

ಕಿರಿಯ ಮಗಳಿಗಾಗಿ ಹಿಂದಿಯಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಲು ಮುಂದಾದ ಬೋನಿ ಕಪೂರ್​
ಬೋನಿ ಕಪೂರ್​, ಖುಷಿ ಕಪೂರ್​
ಮದನ್​ ಕುಮಾರ್​
|

Updated on: Mar 24, 2024 | 3:19 PM

Share

ನಿರ್ಮಾಪಕ ಬೋನಿ ಕಪೂರ್​ (Boney Kapoor) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ಅವರ ಮಕ್ಕಳಾದ ಜಾನ್ವಿ ಕಪೂರ್​ ಮತ್ತು ಖುಷಿ ಕಪೂರ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಜಾನ್ವಿ ಕಪೂರ್​ ಅವರು ದಕ್ಷಿಣದಲ್ಲೂ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರಿಗೆ ಈಗಾಗಲೇ ಭಾರಿ ಜನಪ್ರಿಯತೆ ಸಿಕ್ಕಿದೆ. ಆದರೆ ಕಿರಿಯ ಮಗಳು ಖುಷಿ ಕಪೂರ್​ (Khushi Kapoor) ಈಗತಾನೆ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಖುಷಿ ಕಪೂರ್​ಗಾಗಿ ‘ಉಪ್ಪೆನಾ’ (Uppena) ಚಿತ್ರವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಬೋನಿ ಕಪೂರ್​ ಉತ್ಸಾಹ ತೋರಿಸಿದ್ದಾರೆ. ಈ ವಿಷಯ ಕೇಳಿ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ಬೋನಿ ಕಪೂರ್​ ಅವರನ್ನು ನೆಟ್ಟಿಗರು ಟ್ರೋಲ್​ ಮಾಡಲು ಕಾರಣ ಕೂಡ ಇದೆ. ಯಾಕೆಂದರೆ, ‘ಉಪ್ಪೆನಾ’ ಸಿನಿಮಾದ ಕಥೆ ‘ಧಡಕ್​’ ಚಿತ್ರದ ಕಥೆಯ ರೀತಿಯೇ ಇದೆ. ಇನ್ನು, ‘ಧಡಕ್​’ ಸಿನಿಮಾವು ಮರಾಠಿಯ ‘ಸೈರಾಟ್​’ ಚಿತ್ರದ ರಿಮೇಕ್​. ‘ಉಪ್ಪೆನಾ’ ಕ್ಲೈಮ್ಯಾಕ್ಸ್​ನಲ್ಲಿ ಬರುವ ಕೆಲವು ದೃಶ್ಯಗಳನ್ನು ಹೊರತುಪಡಿಸಿ ಬಹುತೇಕ ಕಥೆ ಅದೇ ರೀತಿ ಇತ್ತು. ಈಗ ಬಾಲಿವುಡ್​ನಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಿದರೆ ಹಿಂದಿ ಪ್ರೇಕ್ಷಕರು ಮತ್ತೊಮ್ಮೆ ಅದೇ ಕಥೆಯನ್ನು ನೋಡಬೇಕಾ ಎಂದು ನೆಟ್ಟಿಗರು ಟ್ರೋಲ್​ ಮಾಡುಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಶ್ರೀದೇವಿ ಸಾವಿನ ಬಗ್ಗೆ ಬೋನಿ ಕಪೂರ್ ಮೇಲೆ ಮೂಡಿತ್ತು ಅನುಮಾನ; ಮೌನಕ್ಕೆ ಕಾರಣ ನೀಡಿದ್ದ ನಿರ್ಮಾಪಕ

ಖುಷಿ ಕಪೂರ್​ ಅವರು ‘ದಿ ಆರ್ಚೀಸ್​’ ಸಿನಿಮಾದ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ಆ ಸಿನಿಮಾ ನೇರವಾಗಿ ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ಬಿಡುಗಡೆ ಆಯಿತು. ಶ್ರೀದೇವಿ ಮಗಳು ಎಂಬ ಕಾರಣಕ್ಕೆ ಅವರಿಗೆ ಜನಪ್ರಿಯತೆ ಸಿಗುತ್ತಿದೆ. ಸ್ಟಾರ್​ ಕಿಡ್​ ಆದ್ದರಿಂದ ಸುಲಭವಾಗಿ ಅವಕಾಶ ಸಿಕ್ಕಿದ್ದಕ್ಕೆ ನೆಟ್ಟಿಗರೆಲ್ಲ ನೆಪೋಟಿಸಂ ವಿಚಾರವನ್ನು ಕಮೆಂಟ್​ ಬಾಕ್ಸ್​ನಲ್ಲಿ ಎಳೆದುತರುತ್ತಿದ್ದಾರೆ. ಮಗಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡಲು ಬೋನಿ ಕಪೂರ್​ ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಬಾರಿ ದೊಡ್ಡ ಪ್ರಾಜೆಕ್ಟ್​ಗೆ ಕೈ ಹಾಕಿದ ಬೋನಿ ಕಪೂರ್, ಸಾವಿರಾರು ಕೋಟಿ ಯೋಜನೆ

ರಾಮ್​ ಚರಣ್​ ನಟನೆಯ 16ನೇ ಸಿನಿಮಾ ಇತ್ತೀಚೆಗೆ ಸೆಟ್ಟೇರಿತು. ಆ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ. ದಕ್ಷಿಣದಲ್ಲಿ ‘ದೇವರ’ ಬಳಿಕ ಜಾನ್ವಿ ಕಪೂರ್​ ಒಪ್ಪಿಕೊಂಡ 2ನೇ ಸಿನಿಮಾ ಇದೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಬೋನಿ ಕಪೂರ್​ ಆಗಮಿಸಿದ್ದರು. ಬುಚ್ಚಿ ಬಾಬು ಸನಾ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಉಪ್ಪೆನಾ’ ಸಿನಿಮಾಗೆ ನಿರ್ದೇಶನ ಮಾಡಿದ್ದು ಕೂಡ ಬುಚ್ಚಿ ಬಾಬು ಸನಾ. ಅವರ ಪ್ರತಿಭೆಗೆ ಬೋನಿ ಕಪೂರ್​ ಅವರು ಫಿದಾ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ