AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಯ ಮಗಳಿಗಾಗಿ ಹಿಂದಿಯಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಲು ಮುಂದಾದ ಬೋನಿ ಕಪೂರ್​

ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ಪ್ರತಿಭೆಗೆ ನಿರ್ಮಾಪಕ ಬೋನಿ ಕಪೂರ್​ ಫಿದಾ ಆಗಿದ್ದಾರೆ. ಹಾಗಾಗಿ ಉಪ್ಪೆನಾ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಬೇಕು ಎಂದು ಅವರು ಆಲೋಚಿಸಿದ್ದಾರೆ. ಆ ಸಿನಿಮಾವನ್ನು ಅವರು ತಮ್ಮ ಕಿರಿಯ ಪುತ್ರಿ ಖುಷಿ ಕಪೂರ್​ ಸಲುವಾಗಿ ಅವರು ನಿರ್ಮಾಣ ಮಾಡುವ ಆಸೆ ವ್ಯಕ್ತಪಡಿಸಿದ್ದಾರೆ.

ಕಿರಿಯ ಮಗಳಿಗಾಗಿ ಹಿಂದಿಯಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಲು ಮುಂದಾದ ಬೋನಿ ಕಪೂರ್​
ಬೋನಿ ಕಪೂರ್​, ಖುಷಿ ಕಪೂರ್​
ಮದನ್​ ಕುಮಾರ್​
|

Updated on: Mar 24, 2024 | 3:19 PM

Share

ನಿರ್ಮಾಪಕ ಬೋನಿ ಕಪೂರ್​ (Boney Kapoor) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ಅವರ ಮಕ್ಕಳಾದ ಜಾನ್ವಿ ಕಪೂರ್​ ಮತ್ತು ಖುಷಿ ಕಪೂರ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಜಾನ್ವಿ ಕಪೂರ್​ ಅವರು ದಕ್ಷಿಣದಲ್ಲೂ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರಿಗೆ ಈಗಾಗಲೇ ಭಾರಿ ಜನಪ್ರಿಯತೆ ಸಿಕ್ಕಿದೆ. ಆದರೆ ಕಿರಿಯ ಮಗಳು ಖುಷಿ ಕಪೂರ್​ (Khushi Kapoor) ಈಗತಾನೆ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಖುಷಿ ಕಪೂರ್​ಗಾಗಿ ‘ಉಪ್ಪೆನಾ’ (Uppena) ಚಿತ್ರವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಬೋನಿ ಕಪೂರ್​ ಉತ್ಸಾಹ ತೋರಿಸಿದ್ದಾರೆ. ಈ ವಿಷಯ ಕೇಳಿ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ಬೋನಿ ಕಪೂರ್​ ಅವರನ್ನು ನೆಟ್ಟಿಗರು ಟ್ರೋಲ್​ ಮಾಡಲು ಕಾರಣ ಕೂಡ ಇದೆ. ಯಾಕೆಂದರೆ, ‘ಉಪ್ಪೆನಾ’ ಸಿನಿಮಾದ ಕಥೆ ‘ಧಡಕ್​’ ಚಿತ್ರದ ಕಥೆಯ ರೀತಿಯೇ ಇದೆ. ಇನ್ನು, ‘ಧಡಕ್​’ ಸಿನಿಮಾವು ಮರಾಠಿಯ ‘ಸೈರಾಟ್​’ ಚಿತ್ರದ ರಿಮೇಕ್​. ‘ಉಪ್ಪೆನಾ’ ಕ್ಲೈಮ್ಯಾಕ್ಸ್​ನಲ್ಲಿ ಬರುವ ಕೆಲವು ದೃಶ್ಯಗಳನ್ನು ಹೊರತುಪಡಿಸಿ ಬಹುತೇಕ ಕಥೆ ಅದೇ ರೀತಿ ಇತ್ತು. ಈಗ ಬಾಲಿವುಡ್​ನಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಿದರೆ ಹಿಂದಿ ಪ್ರೇಕ್ಷಕರು ಮತ್ತೊಮ್ಮೆ ಅದೇ ಕಥೆಯನ್ನು ನೋಡಬೇಕಾ ಎಂದು ನೆಟ್ಟಿಗರು ಟ್ರೋಲ್​ ಮಾಡುಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಶ್ರೀದೇವಿ ಸಾವಿನ ಬಗ್ಗೆ ಬೋನಿ ಕಪೂರ್ ಮೇಲೆ ಮೂಡಿತ್ತು ಅನುಮಾನ; ಮೌನಕ್ಕೆ ಕಾರಣ ನೀಡಿದ್ದ ನಿರ್ಮಾಪಕ

ಖುಷಿ ಕಪೂರ್​ ಅವರು ‘ದಿ ಆರ್ಚೀಸ್​’ ಸಿನಿಮಾದ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ಆ ಸಿನಿಮಾ ನೇರವಾಗಿ ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ಬಿಡುಗಡೆ ಆಯಿತು. ಶ್ರೀದೇವಿ ಮಗಳು ಎಂಬ ಕಾರಣಕ್ಕೆ ಅವರಿಗೆ ಜನಪ್ರಿಯತೆ ಸಿಗುತ್ತಿದೆ. ಸ್ಟಾರ್​ ಕಿಡ್​ ಆದ್ದರಿಂದ ಸುಲಭವಾಗಿ ಅವಕಾಶ ಸಿಕ್ಕಿದ್ದಕ್ಕೆ ನೆಟ್ಟಿಗರೆಲ್ಲ ನೆಪೋಟಿಸಂ ವಿಚಾರವನ್ನು ಕಮೆಂಟ್​ ಬಾಕ್ಸ್​ನಲ್ಲಿ ಎಳೆದುತರುತ್ತಿದ್ದಾರೆ. ಮಗಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡಲು ಬೋನಿ ಕಪೂರ್​ ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಬಾರಿ ದೊಡ್ಡ ಪ್ರಾಜೆಕ್ಟ್​ಗೆ ಕೈ ಹಾಕಿದ ಬೋನಿ ಕಪೂರ್, ಸಾವಿರಾರು ಕೋಟಿ ಯೋಜನೆ

ರಾಮ್​ ಚರಣ್​ ನಟನೆಯ 16ನೇ ಸಿನಿಮಾ ಇತ್ತೀಚೆಗೆ ಸೆಟ್ಟೇರಿತು. ಆ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ. ದಕ್ಷಿಣದಲ್ಲಿ ‘ದೇವರ’ ಬಳಿಕ ಜಾನ್ವಿ ಕಪೂರ್​ ಒಪ್ಪಿಕೊಂಡ 2ನೇ ಸಿನಿಮಾ ಇದೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಬೋನಿ ಕಪೂರ್​ ಆಗಮಿಸಿದ್ದರು. ಬುಚ್ಚಿ ಬಾಬು ಸನಾ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಉಪ್ಪೆನಾ’ ಸಿನಿಮಾಗೆ ನಿರ್ದೇಶನ ಮಾಡಿದ್ದು ಕೂಡ ಬುಚ್ಚಿ ಬಾಬು ಸನಾ. ಅವರ ಪ್ರತಿಭೆಗೆ ಬೋನಿ ಕಪೂರ್​ ಅವರು ಫಿದಾ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು