AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಯ ಮಗಳಿಗಾಗಿ ಹಿಂದಿಯಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಲು ಮುಂದಾದ ಬೋನಿ ಕಪೂರ್​

ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ಪ್ರತಿಭೆಗೆ ನಿರ್ಮಾಪಕ ಬೋನಿ ಕಪೂರ್​ ಫಿದಾ ಆಗಿದ್ದಾರೆ. ಹಾಗಾಗಿ ಉಪ್ಪೆನಾ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಬೇಕು ಎಂದು ಅವರು ಆಲೋಚಿಸಿದ್ದಾರೆ. ಆ ಸಿನಿಮಾವನ್ನು ಅವರು ತಮ್ಮ ಕಿರಿಯ ಪುತ್ರಿ ಖುಷಿ ಕಪೂರ್​ ಸಲುವಾಗಿ ಅವರು ನಿರ್ಮಾಣ ಮಾಡುವ ಆಸೆ ವ್ಯಕ್ತಪಡಿಸಿದ್ದಾರೆ.

ಕಿರಿಯ ಮಗಳಿಗಾಗಿ ಹಿಂದಿಯಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಲು ಮುಂದಾದ ಬೋನಿ ಕಪೂರ್​
ಬೋನಿ ಕಪೂರ್​, ಖುಷಿ ಕಪೂರ್​
ಮದನ್​ ಕುಮಾರ್​
|

Updated on: Mar 24, 2024 | 3:19 PM

Share

ನಿರ್ಮಾಪಕ ಬೋನಿ ಕಪೂರ್​ (Boney Kapoor) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ಅವರ ಮಕ್ಕಳಾದ ಜಾನ್ವಿ ಕಪೂರ್​ ಮತ್ತು ಖುಷಿ ಕಪೂರ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಜಾನ್ವಿ ಕಪೂರ್​ ಅವರು ದಕ್ಷಿಣದಲ್ಲೂ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರಿಗೆ ಈಗಾಗಲೇ ಭಾರಿ ಜನಪ್ರಿಯತೆ ಸಿಕ್ಕಿದೆ. ಆದರೆ ಕಿರಿಯ ಮಗಳು ಖುಷಿ ಕಪೂರ್​ (Khushi Kapoor) ಈಗತಾನೆ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಖುಷಿ ಕಪೂರ್​ಗಾಗಿ ‘ಉಪ್ಪೆನಾ’ (Uppena) ಚಿತ್ರವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಬೋನಿ ಕಪೂರ್​ ಉತ್ಸಾಹ ತೋರಿಸಿದ್ದಾರೆ. ಈ ವಿಷಯ ಕೇಳಿ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ಬೋನಿ ಕಪೂರ್​ ಅವರನ್ನು ನೆಟ್ಟಿಗರು ಟ್ರೋಲ್​ ಮಾಡಲು ಕಾರಣ ಕೂಡ ಇದೆ. ಯಾಕೆಂದರೆ, ‘ಉಪ್ಪೆನಾ’ ಸಿನಿಮಾದ ಕಥೆ ‘ಧಡಕ್​’ ಚಿತ್ರದ ಕಥೆಯ ರೀತಿಯೇ ಇದೆ. ಇನ್ನು, ‘ಧಡಕ್​’ ಸಿನಿಮಾವು ಮರಾಠಿಯ ‘ಸೈರಾಟ್​’ ಚಿತ್ರದ ರಿಮೇಕ್​. ‘ಉಪ್ಪೆನಾ’ ಕ್ಲೈಮ್ಯಾಕ್ಸ್​ನಲ್ಲಿ ಬರುವ ಕೆಲವು ದೃಶ್ಯಗಳನ್ನು ಹೊರತುಪಡಿಸಿ ಬಹುತೇಕ ಕಥೆ ಅದೇ ರೀತಿ ಇತ್ತು. ಈಗ ಬಾಲಿವುಡ್​ನಲ್ಲಿ ‘ಉಪ್ಪೆನಾ’ ರಿಮೇಕ್​ ಮಾಡಿದರೆ ಹಿಂದಿ ಪ್ರೇಕ್ಷಕರು ಮತ್ತೊಮ್ಮೆ ಅದೇ ಕಥೆಯನ್ನು ನೋಡಬೇಕಾ ಎಂದು ನೆಟ್ಟಿಗರು ಟ್ರೋಲ್​ ಮಾಡುಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಶ್ರೀದೇವಿ ಸಾವಿನ ಬಗ್ಗೆ ಬೋನಿ ಕಪೂರ್ ಮೇಲೆ ಮೂಡಿತ್ತು ಅನುಮಾನ; ಮೌನಕ್ಕೆ ಕಾರಣ ನೀಡಿದ್ದ ನಿರ್ಮಾಪಕ

ಖುಷಿ ಕಪೂರ್​ ಅವರು ‘ದಿ ಆರ್ಚೀಸ್​’ ಸಿನಿಮಾದ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ಆ ಸಿನಿಮಾ ನೇರವಾಗಿ ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ಬಿಡುಗಡೆ ಆಯಿತು. ಶ್ರೀದೇವಿ ಮಗಳು ಎಂಬ ಕಾರಣಕ್ಕೆ ಅವರಿಗೆ ಜನಪ್ರಿಯತೆ ಸಿಗುತ್ತಿದೆ. ಸ್ಟಾರ್​ ಕಿಡ್​ ಆದ್ದರಿಂದ ಸುಲಭವಾಗಿ ಅವಕಾಶ ಸಿಕ್ಕಿದ್ದಕ್ಕೆ ನೆಟ್ಟಿಗರೆಲ್ಲ ನೆಪೋಟಿಸಂ ವಿಚಾರವನ್ನು ಕಮೆಂಟ್​ ಬಾಕ್ಸ್​ನಲ್ಲಿ ಎಳೆದುತರುತ್ತಿದ್ದಾರೆ. ಮಗಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡಲು ಬೋನಿ ಕಪೂರ್​ ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಬಾರಿ ದೊಡ್ಡ ಪ್ರಾಜೆಕ್ಟ್​ಗೆ ಕೈ ಹಾಕಿದ ಬೋನಿ ಕಪೂರ್, ಸಾವಿರಾರು ಕೋಟಿ ಯೋಜನೆ

ರಾಮ್​ ಚರಣ್​ ನಟನೆಯ 16ನೇ ಸಿನಿಮಾ ಇತ್ತೀಚೆಗೆ ಸೆಟ್ಟೇರಿತು. ಆ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ. ದಕ್ಷಿಣದಲ್ಲಿ ‘ದೇವರ’ ಬಳಿಕ ಜಾನ್ವಿ ಕಪೂರ್​ ಒಪ್ಪಿಕೊಂಡ 2ನೇ ಸಿನಿಮಾ ಇದೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಬೋನಿ ಕಪೂರ್​ ಆಗಮಿಸಿದ್ದರು. ಬುಚ್ಚಿ ಬಾಬು ಸನಾ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಉಪ್ಪೆನಾ’ ಸಿನಿಮಾಗೆ ನಿರ್ದೇಶನ ಮಾಡಿದ್ದು ಕೂಡ ಬುಚ್ಚಿ ಬಾಬು ಸನಾ. ಅವರ ಪ್ರತಿಭೆಗೆ ಬೋನಿ ಕಪೂರ್​ ಅವರು ಫಿದಾ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!