AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Boney Kapoor: ‘ಶ್ರೀದೇವಿಯದ್ದು ಸಹಜ ಸಾವಲ್ಲ’: ಕೊನೆಗೂ ಮೌನ ಮುರಿದು ಕಾರಣ ತಿಳಿಸಿದ ಪತಿ ಬೋನಿ ಕಪೂರ್​

Sridevi Death Reason: ‘ಶ್ರೀದೇವಿ ಸಾವಿನ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

Boney Kapoor: ‘ಶ್ರೀದೇವಿಯದ್ದು ಸಹಜ ಸಾವಲ್ಲ’: ಕೊನೆಗೂ ಮೌನ ಮುರಿದು ಕಾರಣ ತಿಳಿಸಿದ ಪತಿ ಬೋನಿ ಕಪೂರ್​
ಶ್ರೀದೇವಿ, ಬೋನಿ ಕಪೂರ್​
ಮದನ್​ ಕುಮಾರ್​
|

Updated on: Oct 02, 2023 | 10:33 PM

Share

ಖ್ಯಾತ ನಟಿ ಶ್ರೀದೇವಿ (Sridevi) ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್​ (Boney Kapoor) ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್​ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ (Sridevi Death) ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಬೋನಿ ಕಪೂರ್​ಗೆ ಸುಳ್ಳು ಪತ್ತೆ ಪರೀಕ್ಷೆ:

‘ದಿ ನ್ಯೂ ಇಂಡಿಯನ್​’ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್​ ಅವರು ಈ ವಿಚಾರ ತಿಳಿಸಿದ್ದಾರೆ. ‘ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

ಶ್ರೀದೇವಿ 2ನೇ ಮಗಳು ಚಿತ್ರರಂಗಕ್ಕೆ ಎಂಟ್ರಿ; ಖುಷಿ ಸಿನಿಮಾ ಬಗ್ಗೆ ಮಾಹಿತಿ ನೀಡಿದ ತಂದೆ ಬೋನಿ ಕಪೂರ್​

ಶ್ರೀದೇವಿ ಸಾವಿಗೆ ಕಾರಣ ಏನು?

ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್​ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ‘ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್​ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್​ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು’ ಎಂದಿದ್ದಾರೆ ಬೋನಿ ಕಪೂರ್​.

ಶ್ರೀದೇವಿ ಅವರ ಅಪರೂಪದ ಫೋಟೋ ಹಂಚಿಕೊಂಡ ಪತಿ ಬೋನಿ ಕಪೂರ್​

ಪ್ರಜ್ಞೆ ತಪ್ಪಿದ್ದಕ್ಕೆ ನಾಗಾರ್ಜುನ ಸಾಕ್ಷಿ:

‘ಇದು ದುರಾದೃಷ್ಟದ ಸಂಗತಿ. ಶ್ರೀದೇವಿ ನಿಧನದ ಬಳಿಕ ನಮಗೆ ಸಾಂತ್ವನ ಹೇಳಲು ಬಂದಿದ್ದ ನಾಗಾರ್ಜುನ ಅವರು ಅಂಥದ್ದೇ ಒಂದು ಘಟನೆಯನ್ನು ನೆನಪಿಸಿಕೊಂಡರು. ಕಠಿಣ ಡಯೆಟ್​ ಮಾಡುತ್ತಿರುವಾಗ ಒಂದು ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಬಾತ್​ರೂಮ್​ನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಶ್ರೀದೇವಿ ಹಲ್ಲು ಮುರಿದುಕೊಂಡಿದ್ದರು ಎಂಬುದನ್ನು ನಾಗಾರ್ಜುನ ತಿಳಿಸಿದರು’ ಎಂದು ಬೋನಿ ಕಪೂರ್​ ಹೇಳಿದ್ದಾರೆ.

ಶ್ರೀದೇವಿ ಅವರು ಊಟದಲ್ಲಿ ಕಿಂಚಿತ್ತೂ ಉಪ್ಪು ಬಳಸುತ್ತಿರಲಿಲ್ಲ. ಇದೇ ಅವರ ಸಾವಿಗೆ ಕಾರಣ ಆಯಿತು ಎಂಬುದು ಬೋನಿ ಕಪೂರ್​ ವಾದ. ಅವರ ಡಯೆಟ್​ನಲ್ಲಿ ಉಪ್ಪು ಬಳಸಲು ಸಲಹೆ ನೀಡಿ ಎಂದು ಡಾಕ್ಟರ್​ ಬಳಿಯೂ ಬೋನಿ ಮನವಿ ಮಾಡಿದ್ದರಂತೆ. ಆದರೆ ಅದನ್ನು ಶ್ರೀದೇವಿ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಹೊರಗಡೆ ಊಟಕ್ಕೆ ಹೋದಾಗಲೂ ಅವರು ಉಪ್ಪು ರಹಿತವಾದ ಆಹಾರವನ್ನೇ ಕೇಳುತ್ತಿದ್ದರು ಎಂದು ಬೋನಿ ಕಪೂರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ