Boney Kapoor: ‘ಶ್ರೀದೇವಿಯದ್ದು ಸಹಜ ಸಾವಲ್ಲ’: ಕೊನೆಗೂ ಮೌನ ಮುರಿದು ಕಾರಣ ತಿಳಿಸಿದ ಪತಿ ಬೋನಿ ಕಪೂರ್​

|

Updated on: Oct 02, 2023 | 10:33 PM

Sridevi Death Reason: ‘ಶ್ರೀದೇವಿ ಸಾವಿನ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

Boney Kapoor: ‘ಶ್ರೀದೇವಿಯದ್ದು ಸಹಜ ಸಾವಲ್ಲ’: ಕೊನೆಗೂ ಮೌನ ಮುರಿದು ಕಾರಣ ತಿಳಿಸಿದ ಪತಿ ಬೋನಿ ಕಪೂರ್​
ಶ್ರೀದೇವಿ, ಬೋನಿ ಕಪೂರ್​
Follow us on

ಖ್ಯಾತ ನಟಿ ಶ್ರೀದೇವಿ (Sridevi) ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್​ (Boney Kapoor) ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್​ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ (Sridevi Death) ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಬೋನಿ ಕಪೂರ್​ಗೆ ಸುಳ್ಳು ಪತ್ತೆ ಪರೀಕ್ಷೆ:

‘ದಿ ನ್ಯೂ ಇಂಡಿಯನ್​’ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್​ ಅವರು ಈ ವಿಚಾರ ತಿಳಿಸಿದ್ದಾರೆ. ‘ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

ಶ್ರೀದೇವಿ 2ನೇ ಮಗಳು ಚಿತ್ರರಂಗಕ್ಕೆ ಎಂಟ್ರಿ; ಖುಷಿ ಸಿನಿಮಾ ಬಗ್ಗೆ ಮಾಹಿತಿ ನೀಡಿದ ತಂದೆ ಬೋನಿ ಕಪೂರ್​

ಶ್ರೀದೇವಿ ಸಾವಿಗೆ ಕಾರಣ ಏನು?

ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್​ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ‘ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್​ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್​ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು’ ಎಂದಿದ್ದಾರೆ ಬೋನಿ ಕಪೂರ್​.

ಶ್ರೀದೇವಿ ಅವರ ಅಪರೂಪದ ಫೋಟೋ ಹಂಚಿಕೊಂಡ ಪತಿ ಬೋನಿ ಕಪೂರ್​

ಪ್ರಜ್ಞೆ ತಪ್ಪಿದ್ದಕ್ಕೆ ನಾಗಾರ್ಜುನ ಸಾಕ್ಷಿ:

‘ಇದು ದುರಾದೃಷ್ಟದ ಸಂಗತಿ. ಶ್ರೀದೇವಿ ನಿಧನದ ಬಳಿಕ ನಮಗೆ ಸಾಂತ್ವನ ಹೇಳಲು ಬಂದಿದ್ದ ನಾಗಾರ್ಜುನ ಅವರು ಅಂಥದ್ದೇ ಒಂದು ಘಟನೆಯನ್ನು ನೆನಪಿಸಿಕೊಂಡರು. ಕಠಿಣ ಡಯೆಟ್​ ಮಾಡುತ್ತಿರುವಾಗ ಒಂದು ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಬಾತ್​ರೂಮ್​ನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಶ್ರೀದೇವಿ ಹಲ್ಲು ಮುರಿದುಕೊಂಡಿದ್ದರು ಎಂಬುದನ್ನು ನಾಗಾರ್ಜುನ ತಿಳಿಸಿದರು’ ಎಂದು ಬೋನಿ ಕಪೂರ್​ ಹೇಳಿದ್ದಾರೆ.

ಶ್ರೀದೇವಿ ಅವರು ಊಟದಲ್ಲಿ ಕಿಂಚಿತ್ತೂ ಉಪ್ಪು ಬಳಸುತ್ತಿರಲಿಲ್ಲ. ಇದೇ ಅವರ ಸಾವಿಗೆ ಕಾರಣ ಆಯಿತು ಎಂಬುದು ಬೋನಿ ಕಪೂರ್​ ವಾದ. ಅವರ ಡಯೆಟ್​ನಲ್ಲಿ ಉಪ್ಪು ಬಳಸಲು ಸಲಹೆ ನೀಡಿ ಎಂದು ಡಾಕ್ಟರ್​ ಬಳಿಯೂ ಬೋನಿ ಮನವಿ ಮಾಡಿದ್ದರಂತೆ. ಆದರೆ ಅದನ್ನು ಶ್ರೀದೇವಿ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಹೊರಗಡೆ ಊಟಕ್ಕೆ ಹೋದಾಗಲೂ ಅವರು ಉಪ್ಪು ರಹಿತವಾದ ಆಹಾರವನ್ನೇ ಕೇಳುತ್ತಿದ್ದರು ಎಂದು ಬೋನಿ ಕಪೂರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.