Boney Kapoor: ‘ಶ್ರೀದೇವಿಯದ್ದು ಸಹಜ ಸಾವಲ್ಲ’: ಕೊನೆಗೂ ಮೌನ ಮುರಿದು ಕಾರಣ ತಿಳಿಸಿದ ಪತಿ ಬೋನಿ ಕಪೂರ್​

Sridevi Death Reason: ‘ಶ್ರೀದೇವಿ ಸಾವಿನ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

Boney Kapoor: ‘ಶ್ರೀದೇವಿಯದ್ದು ಸಹಜ ಸಾವಲ್ಲ’: ಕೊನೆಗೂ ಮೌನ ಮುರಿದು ಕಾರಣ ತಿಳಿಸಿದ ಪತಿ ಬೋನಿ ಕಪೂರ್​
ಶ್ರೀದೇವಿ, ಬೋನಿ ಕಪೂರ್​

Updated on: Oct 02, 2023 | 10:33 PM

ಖ್ಯಾತ ನಟಿ ಶ್ರೀದೇವಿ (Sridevi) ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್​ (Boney Kapoor) ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್​ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ (Sridevi Death) ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಬೋನಿ ಕಪೂರ್​ಗೆ ಸುಳ್ಳು ಪತ್ತೆ ಪರೀಕ್ಷೆ:

‘ದಿ ನ್ಯೂ ಇಂಡಿಯನ್​’ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್​ ಅವರು ಈ ವಿಚಾರ ತಿಳಿಸಿದ್ದಾರೆ. ‘ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

ಶ್ರೀದೇವಿ 2ನೇ ಮಗಳು ಚಿತ್ರರಂಗಕ್ಕೆ ಎಂಟ್ರಿ; ಖುಷಿ ಸಿನಿಮಾ ಬಗ್ಗೆ ಮಾಹಿತಿ ನೀಡಿದ ತಂದೆ ಬೋನಿ ಕಪೂರ್​

ಶ್ರೀದೇವಿ ಸಾವಿಗೆ ಕಾರಣ ಏನು?

ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್​ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ‘ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್​ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್​ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು’ ಎಂದಿದ್ದಾರೆ ಬೋನಿ ಕಪೂರ್​.

ಶ್ರೀದೇವಿ ಅವರ ಅಪರೂಪದ ಫೋಟೋ ಹಂಚಿಕೊಂಡ ಪತಿ ಬೋನಿ ಕಪೂರ್​

ಪ್ರಜ್ಞೆ ತಪ್ಪಿದ್ದಕ್ಕೆ ನಾಗಾರ್ಜುನ ಸಾಕ್ಷಿ:

‘ಇದು ದುರಾದೃಷ್ಟದ ಸಂಗತಿ. ಶ್ರೀದೇವಿ ನಿಧನದ ಬಳಿಕ ನಮಗೆ ಸಾಂತ್ವನ ಹೇಳಲು ಬಂದಿದ್ದ ನಾಗಾರ್ಜುನ ಅವರು ಅಂಥದ್ದೇ ಒಂದು ಘಟನೆಯನ್ನು ನೆನಪಿಸಿಕೊಂಡರು. ಕಠಿಣ ಡಯೆಟ್​ ಮಾಡುತ್ತಿರುವಾಗ ಒಂದು ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಬಾತ್​ರೂಮ್​ನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಶ್ರೀದೇವಿ ಹಲ್ಲು ಮುರಿದುಕೊಂಡಿದ್ದರು ಎಂಬುದನ್ನು ನಾಗಾರ್ಜುನ ತಿಳಿಸಿದರು’ ಎಂದು ಬೋನಿ ಕಪೂರ್​ ಹೇಳಿದ್ದಾರೆ.

ಶ್ರೀದೇವಿ ಅವರು ಊಟದಲ್ಲಿ ಕಿಂಚಿತ್ತೂ ಉಪ್ಪು ಬಳಸುತ್ತಿರಲಿಲ್ಲ. ಇದೇ ಅವರ ಸಾವಿಗೆ ಕಾರಣ ಆಯಿತು ಎಂಬುದು ಬೋನಿ ಕಪೂರ್​ ವಾದ. ಅವರ ಡಯೆಟ್​ನಲ್ಲಿ ಉಪ್ಪು ಬಳಸಲು ಸಲಹೆ ನೀಡಿ ಎಂದು ಡಾಕ್ಟರ್​ ಬಳಿಯೂ ಬೋನಿ ಮನವಿ ಮಾಡಿದ್ದರಂತೆ. ಆದರೆ ಅದನ್ನು ಶ್ರೀದೇವಿ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಹೊರಗಡೆ ಊಟಕ್ಕೆ ಹೋದಾಗಲೂ ಅವರು ಉಪ್ಪು ರಹಿತವಾದ ಆಹಾರವನ್ನೇ ಕೇಳುತ್ತಿದ್ದರು ಎಂದು ಬೋನಿ ಕಪೂರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us