AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘83’ ಸಿನಿಮಾ ಬಹಿಷ್ಕರಿಸಲು ಟ್ವಿಟರ್​ನಲ್ಲಿ ಅಭಿಯಾನ; ಈ ಪರಿ ವಿರೋಧಕ್ಕೆ ಕಾರಣ ಏನು?

Boycott 83: ‘83’ ಚಿತ್ರವನ್ನು ಜನರು ವಿರೋಧಿಸಲು ಅನೇಕ ಕಾರಣಗಳಿವೆ. ಆದರೆ ಯಾವುದೂ ಕೂಡ ಹೊಸ ಕಾರಣ ಅಲ್ಲ. ಹಲವು ಘಟನೆಗಳನ್ನು ನೆಪ ಮಾಡಿಕೊಂಡು ಈ ಚಿತ್ರವನ್ನು ಬಹಿಷ್ಕರಿಸುವಂತೆ ಒಂದು ವರ್ಗದ ನೆಟ್ಟಿಗರು ಪಟ್ಟು ಹಿಡಿದಿದ್ದಾರೆ.

‘83’ ಸಿನಿಮಾ ಬಹಿಷ್ಕರಿಸಲು ಟ್ವಿಟರ್​ನಲ್ಲಿ ಅಭಿಯಾನ; ಈ ಪರಿ ವಿರೋಧಕ್ಕೆ ಕಾರಣ ಏನು?
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
TV9 Web
| Edited By: |

Updated on: Dec 24, 2021 | 12:39 PM

Share

ರಣವೀರ್​ ಸಿಂಗ್​ (Ranveer Singh) ನಟನೆಯ ‘83’ ಸಿನಿಮಾ (83 Movie) ದೊಡ್ಡ ಮಟ್ಟದ ಓಪನಿಂಗ್​ ಪಡೆದುಕೊಂಡಿದೆ. ಕಬೀರ್​ ಖಾನ್​ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಕಪಿಲ್​ ದೇವ್​ ಅವರ ಪಾತ್ರವನ್ನು ರಣವೀರ್​ ಸಿಂಗ್​ ನಿಭಾಯಿಸಿದ್ದಾರೆ. ಕ್ರಿಕೆಟ್​ ಪ್ರಿಯರಿಂದ ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ‘83’ ಸಿನಿಮಾವನ್ನು ಬಹಿಷ್ಕರಿಸುವಂತೆ ಒಂದಷ್ಟು ಜನರು ಅಭಿಯಾನ ನಡೆಸುತ್ತಿದ್ದಾರೆ. #Boycott83 ಹ್ಯಾಶ್​ ಟ್ಯಾಗ್​ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಈ ಚಿತ್ರವನ್ನು ವಿರೋಧಿಸಲಾಗುತ್ತಿದೆ. ಟ್ವಿಟರ್​ನಲ್ಲಿ #Boycott83 ಹ್ಯಾಶ್​ ಟ್ಯಾಗ್​ ಟ್ರೆಂಡ್​ (Twitter Trending) ಆಗಿದೆ. ಸುಶಾಂತ್​ ಸಿಂಗ್​ ರಜಪೂತ್ (Sushant Singh Rajput)​ ಅಭಿಮಾನಿಗಳು ಕೂಡ ಈ ಸಿನಿಮಾವನ್ನು ಬಹಿಷ್ಕರಿಸುವಂತೆ ​ಒತ್ತಾಯಿಸುತ್ತಿದ್ದಾರೆ.

‘83’ ಚಿತ್ರವನ್ನು ಜನರು ವಿರೋಧಿಸಲು ಅನೇಕ ಕಾರಣಗಳಿವೆ. ಆದರೆ ಯಾವುದೂ ಕೂಡ ಹೊಸ ಕಾರಣ ಅಲ್ಲ. ಹಳೇ ಘಟನೆಗಳನ್ನೆಲ್ಲ ನೆಪ ಮಾಡಿಕೊಂಡು ಈ ಚಿತ್ರವನ್ನು ಬಹಿಷ್ಕರಿಸುವಂತೆ ಒಂದು ವರ್ಗದ ನೆಟ್ಟಿಗರು ಪಟ್ಟು ಹಿಡಿದಿದ್ದಾರೆ. ಈ ಹಿಂದೆ ರಣವೀರ್​ ಸಿಂಗ್​ ಅವರು ಒಂದು ಜಾಹೀರಾತಿನಲ್ಲಿ ನಟಿಸಿದ್ದರು. ಅದರಲ್ಲಿ ಸುಶಾಂತ್​ ಸಿಂಗ್​ ರಜಪೂತ್​ ಅವರಿಗೆ ಪರೋಕ್ಷವಾಗಿ ಅವಮಾನ ಮಾಡಲಾಗಿತ್ತು ಎಂಬುದು ಸುಶಾಂತ್​ ಅಭಿಮಾನಿಗಳ ಆರೋಪವಾಗಿತ್ತು. ಅದನ್ನೇ ಮುಂದಿಟ್ಟುಕೊಂಡು ಈಗ ‘83’ ಸಿನಿಮಾವನ್ನು ವಿರೋಧಿಸಲಾಗುತ್ತಿದೆ.

ಈ ಸಿನಿಮಾದಲ್ಲಿ ಕಪಿಲ್​ ದೇವ್​ ಪತ್ನಿಯ ಪಾತ್ರವನ್ನು ದೀಪಿಕಾ ಪಡುಕೋಣೆ ನಿಭಾಯಿಸಿದ್ದಾರೆ. ಪ್ರತಿ ಬಾರಿ ಅವರ ಸಿನಿಮಾಗಳು ರಿಲೀಸ್​ ಆದಾಗ ಒಂದಷ್ಟು ಜನರು ಕಿಡಿಕಾರುತ್ತಾರೆ. ಈ ಹಿಂದೆ ಅವರು ಜೆಎನ್​ಯು ಕ್ಯಾಂಪಸ್​ಗೆ ಭೇಟಿ ನೀಡಿದ್ದೇ ಅದಕ್ಕೆ ಕಾರಣ. ಈಗ ಮತ್ತೆ ಜೆಎನ್​ಯು ವಿಚಾರವನ್ನು ಎಳೆದುತಂದು ‘83’ ಸಿನಿಮಾ ಬಹಿಷ್ಕರಿಸುವಂತೆ ಕೆಲವರು ಅಭಿಯಾನ ಮಾಡುತ್ತಿದ್ದಾರೆ.

ಯಾರು ಎಷ್ಟೇ ವಿರೋಧಿಸಿದರೂ ‘83’ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಹಿಂದಿಯಲ್ಲಿ ತಯಾರಾಗಿರುವ ಈ ಚಿತ್ರ ಕನ್ನಡ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗೆ ಡಬ್​ ಆಗಿ ತೆರೆಕಂಡಿದೆ. 1983ರ ವಿಶ್ವಕಪ್​ನಲ್ಲಿ ಭಾರತ ತಂಡ ಟ್ರೋಫಿ ಗೆದ್ದ ಘಟನೆಯನ್ನು ಆಧರಿಸಿ ‘83’ ಮೂಡಿಬಂದಿದೆ. ರಣವೀರ್​ ಸಿಂಗ್​ ಅಭಿನಯಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಗುತ್ತಿದೆ.

ಕರ್ನಾಟಕದಲ್ಲಿ ಈ ಚಿತ್ರವನ್ನು ಕಿಚ್ಚ ಸುದೀಪ್​ ಅವರು ಅರ್ಪಿಸಿದ್ದಾರೆ. ಶಾಲಿನಿ ಆರ್ಟ್ಸ್ ಹಾಗೂ ರಿಲಯನ್ಸ್ ಎಂಟರ್​ಟೇನ್ಮೆಂಟ್​ ಸಂಸ್ಥೆ ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿವೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ.

ಇದನ್ನೂ ಓದಿ:

ಬಿಡುಗಡೆಗೂ ಮುನ್ನ ‘83’ ಚಿತ್ರ ನೋಡಲು ನಿರಾಕರಿಸಿದ್ದ 1983 ವಿಶ್ವಕಪ್​ ಟೀಮ್ ಆಟಗಾರರು​; ಕಾರಣ ಏನು?

83 Movie Review: ಇದು ಬರೀ ಸಿನಿಮಾ ಅಲ್ಲ; ಕ್ರಿಕೆಟ್​ಪ್ರಿಯರ ಎಮೋಷನ್​, ವಿಶ್ವಕಪ್​ ಗೆಲುವಿನ ಹೊಸ ಸೆಲೆಬ್ರೇಷನ್​

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?