AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹೀರಾತಿನಲ್ಲಿ ಬಿಂದಿ ಇಡದೆ ಕಾಣಿಸಿಕೊಂಡ ಕರೀನಾ; ಮಲಬಾರ್ ಗೋಲ್ಡ್​ ಬಹಿಷ್ಕರಿಸಿ ಎಂದ ನೆಟ್ಟಿಗರು

ಕರೀನಾ ಕಪೂರ್ ಅವರು ಸೈಫ್ ಅಲಿ ಖಾನ್​ರನ್ನು ಮದುವೆ ಆಗಿದ್ದಕ್ಕೆ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ವಿವಾಹದ ಬಳಿಕ ಇಲ್ಲಿಯವರೆಗೆ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ. ಈಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ.

ಜಾಹೀರಾತಿನಲ್ಲಿ ಬಿಂದಿ ಇಡದೆ ಕಾಣಿಸಿಕೊಂಡ ಕರೀನಾ; ಮಲಬಾರ್ ಗೋಲ್ಡ್​ ಬಹಿಷ್ಕರಿಸಿ ಎಂದ ನೆಟ್ಟಿಗರು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 24, 2022 | 6:32 PM

ಇತ್ತೀಚೆಗೆ ಜಾಹೀರಾತು ಮೇಕಿಂಗ್​ನಲ್ಲೂ ಸಖತ್ ಸ್ಪರ್ಧೆ ಇದೆ. ಗ್ರಾಹಕರನ್ನು ಸೆಳೆಯಲು ಒಂದಕ್ಕಿಂತ ಒಂದು ಭಿನ್ನ ಅಡ್ವಟೈಸ್​ಮೆಂಟ್ ಮಾಡಲಾಗುತ್ತದೆ. ಆದರೆ, ಕೆಲವೊಮ್ಮೆ ಜಾಹೀರಾತಿನಲ್ಲಿ ಇರುವ ಸಣ್ಣ ಎಡವಟ್ಟಿನಿಂದ ಕಂಪನಿ ದೊಡ್ಡ ನಷ್ಟ ಅನುಭವಿಸಬೇಕಾಗುತ್ತದೆ. ಮಲಬಾರ್ ಗೋಲ್ಡ್ (Malabar Gold)​ ಸಂಸ್ಥೆ ಇದೇ ರೀತಿಯ ಸಂಕಷ್ಟದಲ್ಲಿ ಸಿಲುಕಿದೆ. ಈ ಸಂಸ್ಥೆಯ ಜಾಹೀರಾತಿನಲ್ಲಿ ನಟಿ ಕರೀನಾ ಕಪೂರ್ (Kareena Kapoor) ಕಾಣಿಸಿಕೊಂಡಿದ್ದಾರೆ. ಆದರೆ, ಅವರು ಹಣೆಗೆ ಬಿಂದಿ ಇಟ್ಟಿಲ್ಲ ಎನ್ನುವ ಕಾರಣಕ್ಕೆ ‘#BoycottMalabarGold’ ಹ್ಯಾಶ್​ಟ್ಯಾಗ್ ಟ್ರೆಂಡ್ ಆಗಿದೆ.

ಕರೀನಾ ಕಪೂರ್ ಅವರು ಸೈಫ್ ಅಲಿ ಖಾನ್​ರನ್ನು ಮದುವೆ ಆಗಿದ್ದಕ್ಕೆ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ವಿವಾಹದ ಬಳಿಕ ಇಲ್ಲಿಯವರೆಗೆ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ. ‘ರಾಮಾಯಣ’ ಆಧರಿಸಿ ಬರುತ್ತಿರುವ ಸಿನಿಮಾದಲ್ಲಿ ಕರೀನಾಗೆ ಸೀತೆಯ ಪಾತ್ರ ಆಫರ್ ಮಾಡಲಾಗಿತ್ತು ಎನ್ನಲಾಗಿತ್ತು. ಇದಕ್ಕೆ ಅವರು ಹೆಚ್ಚು ಸಂಭಾವನೆ ಕೇಳಿದ್ದಕ್ಕೆ ಟ್ರೋಲ್ ಆಗಿದ್ದರು. ಈಗ ಕರೀನಾ ಮತ್ತೆ ಸುದ್ದಿಯಲ್ಲಿದ್ದಾರೆ.

ಮಲಬಾರ್ ​ ಗೋಲ್ಡ್​ನ ಜ್ಯುವೆಲರಿಗಳನ್ನು ಧರಿಸಿ ಕರೀನಾ ಫೋಟೋಶೂಟ್ ಮಾಡಿಸಿದ್ದಾರೆ. ಈ ಜಾಹೀರಾತನ್ನು ಮಲಬಾರ್ ಗೋಲ್ಡ್ ಪ್ರಕಟಿಸಿದೆ. ಹಿಂದುಗಳು ಹಣೆಗೆ ಕುಂಕುಮ ಅಥವಾ ಬಿಂದಿ ಇಡುತ್ತಾರೆ. ಕರೀನಾ ಹಣೆಯಲ್ಲಿ ಬಿಂದಿ ಇರಲಿಲ್ಲ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ‘ಹಿಂದೂ ಸಂಪ್ರದಾಯವನ್ನೇ ಮರೆತಿರುವ ಮಲಬಾರ್ ಸಂಸ್ಥೆಯ ಚಿನ್ನವನ್ನು ನಾವೇಕೆ ಖರೀದಿಸಬೇಕು? ಅವರು ಇಸ್ಲಾಮಿಕ್ ಕುಟುಂಬಕ್ಕೆ ಸೇರಿದವರು. ಮಲಬಾರ್ ಗೋಲ್ಡ್​ ಅವರೇ ನಿಮ್ಮ ಆಯ್ಕೆಯೇ ತಪ್ಪು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಹಣೆಗೆ ಬಿಂದಿಯನ್ನು ಏಕೆ ಇಡಬೇಕು ಎಂಬ ಬಗ್ಗೆ ಕೆಲವರು ವೈಜ್ಞಾನಿಕ ಕಾರಣ ನೀಡಿದ್ದಾರೆ.

ತಮನ್ನಾ ಭಾಟಿಯಾ ಕೂಡ ಈ ಮೊದಲು ಮಲಬಾರ್ ಗೋಲ್ಡ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಅವರು ಹಣೆಗೆ ಬಿಂದಿ ಇಟ್ಟುಕೊಂಡಿದ್ದರು. ಆದರೆ, ಕರೀನಾ ಹಣೆಗೆ ಬಿಂದಿ ಇಡದೇ ಇರುವುದು ಉದ್ದೇಶ ಪೂರ್ವಕ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರ-ವಿರೋಧ ಚರ್ಚೆ ಜೋರಾಗಿದೆ. ಆದರೆ, ಸಂಸ್ಥೆಯವರು ಈ ಬಗ್ಗೆ ಯಾವುದೇ ಪ್ರಕಟಣೆ ಹೊರಡಿಸಿಲ್ಲ.

ಇದನ್ನೂ ಓದಿ: ‘ಕರೀನಾ ಸಿಕ್ಕಾಪಟ್ಟೆ ಡೇಂಜರ್’ ಎಂದು ಸೈಫ್​ಗೆ ಹಿತೋಪದೇಶ ನೀಡಿದ್ದ ಅಕ್ಷಯ್; ಇಲ್ಲಿದೆ ಕರೀನಾ- ಸೈಫ್ ಪ್ರೇಮ ಪುರಾಣ!

ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಮಿಂಚಿದ ಕರೀನಾ ಕಪೂರ್​; ಇಲ್ಲಿವೆ ಕಲರ್​ಫುಲ್​ ಫೋಟೋಗಳು

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ