AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ban Thank God: ‘ಥ್ಯಾಂಕ್​ ಗಾಡ್​’ ಸಿನಿಮಾ ಬ್ಯಾನ್​ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಶಿಕ್ಷಣ ಸಚಿವ

Boycott Thank God: ‘ಥ್ಯಾಂಕ್​ ಗಾಡ್​’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಅಜಯ್​ ದೇವಗನ್​ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Ban Thank God: ‘ಥ್ಯಾಂಕ್​ ಗಾಡ್​’ ಸಿನಿಮಾ ಬ್ಯಾನ್​ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಶಿಕ್ಷಣ ಸಚಿವ
ಥ್ಯಾಂಕ್ ಗಾಡ್ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Sep 21, 2022 | 12:57 PM

Share

ಬಾಲಿವುಡ್​ ಸಿನಿಮಾಗಳಿಗೆ ಬ್ಯಾಕ್​ ಟು ಬ್ಯಾಕ್​ ವಿಘ್ನಗಳು ಎದುರಾಗುತ್ತಿವೆ. ಹಿಂದಿ ಚಿತ್ರರಂಗದ ಸೆಲೆಬ್ರಿಟಿಗಳು ಸ್ವಲ್ಪವೇ ಕಿರಿಕ್​ ಮಾಡಿಕೊಂಡರೂ ಸಾಕು ಬಹಿಷ್ಕಾರದ (Boycott) ಕೂಗು ಕೇಳಿಬರುತ್ತಿವೆ. ಇತ್ತೀಚಿನ ದಿನಗಳಲ್ಲಿ ಹಲವು ಸಿನಿಮಾಗಳು ಬ್ಯಾನ್​ ಬಿಸಿಗೆ ಬಸವಳಿದಿವೆ. ಹಳೇ ನೆಪಗಳನ್ನೇ ಮುಂದಿಟ್ಟುಕೊಂಡು ಹೊಸ ಸಿನಿಮಾಗಳನ್ನು ಬಾಯ್ಕಾಟ್​ ಮಾಡಿದ ಉದಾಹರಣೆಯೂ ಇದೆ. ಇನ್ನು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳು ಸಿನಿಮಾದಲ್ಲಿ ಇದ್ದರೆ ಬಹಿಷ್ಕಾರದ ಟ್ರೆಂಡ್​ ಇನ್ನಷ್ಟು ಜೋರಾಗುತ್ತದೆ. ಈಗ ಅಜಯ್ ದೇವಗನ್​ (Ajay Devgn) ನಟನೆಯ ‘ಥ್ಯಾಂಕ್​ ಗಾಡ್​’ (Thank God) ಸಿನಿಮಾಗೆ ಬಾಯ್ಕಾಟ್​ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಈ ಚಿತ್ರವನ್ನು ಬ್ಯಾನ್​ ಮಾಡಬೇಕು ಎಂದು ಮಧ್ಯಪ್ರದೇಶದ ಶಿಕ್ಷಣ ಸಚಿವ ವಿಶ್ವಾಸ್​ ಸಾರಂಗ್​ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಇತ್ತೀಚೆಗಷ್ಟೇ ‘ಥ್ಯಾಂಕ್​ ಗಾಡ್​’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಈ ಚಿತ್ರದಲ್ಲಿ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ನಟಿಸಿದ್ದಾರೆ. ರಾಕುಲ್​ ಪ್ರೀತ್​ ಸಿಂಗ್​ ಕೂಡ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಅಂಶಗಳು ಇವೆ ಹಾಗೂ ಹಿಂದೂ ದೇವರನ್ನು ಆಕ್ಷೇಪಾರ್ಹ ರೀತಿಯಲ್ಲಿ ತೋರಿಸಲಾಗುತ್ತಿದೆ ಎಂದು ಸಚಿವ ವಿಶ್ವಾಸ್​ ಸಾರಂಗ್​ ಆರೋಪಿಸಿದ್ದಾರೆ.

‘ಥ್ಯಾಂಕ್​ ಗಾಡ್​’ ಸಿನಿಮಾದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಲಿದೆ ಎಂದು ಹೇಳಿರುವ ವಿಶ್ವಾಸ್​ ಸಾರಂಗ್​ ಅವರು ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್​ ಅವರಿಗೆ ಪತ್ರ ಬರೆದಿದ್ದಾರೆ. ಈ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ಅವರು ಮನವಿ ಸಲ್ಲಿಸಿದ್ದಾರೆ. ಸರ್ಕಾರದಿಂದ ಯಾವ ಪ್ರತಿಕ್ರಿಯೆ ಬರಬಹುದು ಎಂಬ ಕೌತುಕ ನಿರ್ಮಾಣ ಆಗಿದೆ.

ಇದನ್ನೂ ಓದಿ
Image
ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್
Image
ಬಾಯ್ಕಾಟ್ ಟ್ರೆಂಡ್​ ಬ್ರೇಕ್ ಮಾಡಿದ ‘ಬ್ರಹ್ಮಾಸ್ತ್ರ’; ಮೂರು ದಿನಕ್ಕೆ 225 ಕೋಟಿ ರೂಪಾಯಿ ಕಲೆಕ್ಷನ್​
Image
ಮಕಾಡೆ ಮಲಗಿದ ‘ಲಾಲ್​ ಸಿಂಗ್ ಚಡ್ಡಾ’ಗೆ ಒಟಿಟಿಯಿಂದ ಬಂತು ಬಂಪರ್ ಆಫರ್; ಟ್ರೋಲಿಗರ ಬಾಯಿ ಮುಚ್ಚಿಸಿದ ಆಮಿರ್
Image
Shah Rukh Khan: ಟ್ವಿಟರ್​ನಲ್ಲಿ ಟ್ರೆಂಡ್ ಆದ ‘ಬಾಯ್ಕಾಟ್ ಶಾರುಖ್ ಖಾನ್’; ನೆಟ್ಟಿಗರ ಆಕ್ರೋಶಕ್ಕೆ ಕಾರಣವೇನು?

ಒಂದು ಫ್ಯಾಂಟಿಸಿ ಕಥೆಯನ್ನು ‘ಥ್ಯಾಂಕ್​ ಗಾಡ್​’ ಸಿನಿಮಾ ಒಳಗೊಂಡಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ರಸ್ತೆ ಅಪಘಾತಕ್ಕೆ ಸಿಲುಕಿ ಸಾವು ಮತ್ತು ಬದುಕಿನ ಮಧ್ಯೆ ಸಿಕ್ಕಿಕೊಳ್ಳುವ ವ್ಯಕ್ತಿಯ ಪಾತ್ರದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟಿಸಿದ್ದಾರೆ. ಯಮಲೋಕದಲ್ಲಿ ಪಾಪ-ಪುಣ್ಯದ ಲೆಕ್ಕ ಬರೆಯುವ ಚಿತ್ರಗುಪ್ತನ ಪಾತ್ರವನ್ನು ಅಜಯ್​ ದೇವಗನ್​ ನಿಭಾಯಿಸಿದ್ದಾರೆ. ಇಡೀ ಸಿನಿಮಾ ಕಾಮಿಡಿ ಶೈಲಿಯಲ್ಲಿ ಮೂಡಿಬಂದಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ.

ಟ್ರೇಲರ್​ ನೋಡಿದ ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಜನಪ್ರಿಯ ‘ಮನಿಕೆ ಮಗೆ ಹಿತೆ..’ ಹಾಡನ್ನು ಈ ಚಿತ್ರದಲ್ಲಿ ರೀ-ಕ್ರಿಯೇಟ್​ ಮಾಡಲಾಗಿದೆ. ಈ ವಿಶೇಷ ಹಾಡಿನಲ್ಲಿ ನೋರಾ ಫತೇಹಿ ನಟಿಸಿದ್ದಾರೆ. ಯೂಟ್ಯೂಬ್​ನಲ್ಲಿ ಈ ಗೀತೆ ಕೋಟ್ಯಂತರ ವೀವ್ಸ್​ ಪಡೆದುಕೊಳ್ಳುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:57 pm, Wed, 21 September 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ