AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra Box Office Collection: ಸೋಮವಾರದ ಪರೀಕ್ಷೆಯಲ್ಲಿ ‘ಬ್ರಹ್ಮಾಸ್ತ್ರ’ ಚಿತ್ರ ಪಾಸ್​ ಆಯ್ತಾ?

Alia Bhatt | Ranbir Kapoor: ‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಕಳಪೆ ಗ್ರಾಫಿಕ್ಸ್​ ಇದೆ ಎಂಬ ಕಾರಣಕ್ಕೆ ಅನೇಕರು ಟ್ರೋಲ್​ ಮಾಡಿದ್ದರು. ಅದರಿಂದ ಚಿತ್ರದ ಕಲೆಕ್ಷನ್​ಗೆ ಯಾವುದೇ ಧಕ್ಕೆ ಆಗಿಲ್ಲ.

Brahmastra Box Office Collection: ಸೋಮವಾರದ ಪರೀಕ್ಷೆಯಲ್ಲಿ ‘ಬ್ರಹ್ಮಾಸ್ತ್ರ’ ಚಿತ್ರ ಪಾಸ್​ ಆಯ್ತಾ?
ರಣಬೀರ್ ಕಪೂರ್, ಆಲಿಯಾ ಭಟ್
TV9 Web
| Edited By: |

Updated on:Sep 13, 2022 | 2:46 PM

Share

ಬಾಕ್ಸ್​ ಆಫೀಸ್​ ವಿಚಾರದಲ್ಲಿ ಸೋಮವಾರ ತುಂಬ ಮುಖ್ಯವಾಗುತ್ತದೆ. ಶುಕ್ರವಾರ ರಿಲೀಸ್​ ಆದ ಸಿನಿಮಾ ಸೋಮವಾರದವರೆಗೆ ಫಾರ್ಮ್​ ಕಾಯ್ದುಕೊಂಡರೆ ನಿರ್ಮಾಪಕರಿಗೆ ಖುಷಿ ಆಗುತ್ತದೆ. ಅದೇ ಕಾರಣದಿಂದ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಸೋಮವಾರ (ಸೆ.12) ಎಷ್ಟು ಕಲೆಕ್ಷನ್​ ಮಾಡಬಹುದು ಎಂದು ತಿಳಿಯಲು ಎಲ್ಲರೂ ಕಾದಿದ್ದರು. ಬಾಕ್ಸ್ ಆಫೀಸ್ ಮೂಲಗಳ ಪ್ರಕಾರ ಸೆ.12ರಂದು ಈ ಚಿತ್ರಕ್ಕೆ ಶೇಕಡ 50ರಷ್ಟು ಹಿನ್ನೆಡೆ ಆಗಿದೆ. ಹಾಗಂತ ಚಿತ್ರತಂಡ ಬೇಸರ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಈಗಿನ ಬಾಲಿವುಡ್​ (Bollywood) ಟ್ರೆಂಡ್​ಗೆ ಹೋಲಿಸಿದರೆ ಸೋಮವಾರ ‘ಬ್ರಹ್ಮಾಸ್ತ್ರ’ ಮಾಡಿರುವ ಕಲೆಕ್ಷನ್​ (Box Office Collection) ಆಶಾದಾಯಕ ಆಗಿದೆ. ಸೋಮವಾರ ಹಿಂದಿ ವರ್ಷನ್​ನಿಂದ 16 ಕೋಟಿ ರೂಪಾಯಿ ಗಳಿಸಿ ಈ ಚಿತ್ರ ಬೀಗುತ್ತಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್​ 250 ಕೋಟಿ ರೂಪಾಯಿಗೆ ಸನಿಹದಲ್ಲಿದೆ.

‘ಬ್ರಹ್ಮಾಸ್ತ್ರ’ ಸಿನಿಮಾಗೆ ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದಾರೆ. ಸ್ನೇಹಿತರ ಜೊತೆಗೂಡಿ ಕರಣ್​ ಜೋಹರ್​ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್​ನಲ್ಲಿ ಕಳಪೆ ಗ್ರಾಫಿಕ್ಸ್​ ಇದೆ ಎಂಬ ಕಾರಣಕ್ಕೆ ಅನೇಕರು ಟ್ರೋಲ್​ ಮಾಡಿದ್ದರು. ಅದರಿಂದ ಚಿತ್ರಕ್ಕೆ ಯಾವುದೇ ಧಕ್ಕೆ ಆಗಿಲ್ಲ. ವಿಶೇಷ ಕಥಾಹಂದರ ಇರುವ ಈ ಸಿನಿಮಾವನ್ನು ಜನರು ಇಷ್ಟಪಟ್ಟು ನೋಡುತ್ತಿದ್ದಾರೆ. ಬಹುದಿನಗಳ ಬಳಿಕ ಹಿಂದಿ ಚಿತ್ರರಂಗಕ್ಕೆ ಒಂದು ದೊಡ್ಡ ಗೆಲುವು ಸಿಕ್ಕಂತಾಗಿದೆ.

ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಅವರಿಗೆ ಜೋಡಿಯಾಗಿ ಆಲಿಯಾ ಭಟ್​ ನಟಿಸಿದ್ದಾರೆ. ಅಮಿತಾಭ್​ ಬಚ್ಚನ್​, ನಾಗಾರ್ಜುನ ಅವರಂಥ ಘಟಾನುಘಟಿ ಕಲಾವಿದರು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅವರು ಅತಿಥಿ ಪಾತ್ರ ಮಾಡಿರುವುದು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಬಿಡುಗಡೆ ಆಗಿದೆ. ಹಿಂದಿಯ ಈ ಚಿತ್ರವನ್ನು ತೆಲುಗು, ಕನ್ನಡ, ಮಲಯಾಳಂ, ತಮಿಳು ಭಾಷೆಗಳಿಗೆ ಡಬ್​ ಮಾಡಿ ತೆರೆಕಾಣಿಸಲಾಗಿದೆ. ತೆಲುಗು ವರ್ಷನ್​ನಿಂದ ಉತ್ತಮ ಕಮಾಯಿ ಆಗುತ್ತಿದೆ ಎಂದು ವರದಿ ಆಗಿದೆ. ಪಕ್ಕಾ ಲೆಕ್ಕದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಈ ಚಿತ್ರವನ್ನು ದಕ್ಷಿಣ ಭಾರತದಲ್ಲಿ ರಾಜಮೌಳಿ ಅವರು ಪ್ರಸೆಂಟ್​ ಮಾಡಿದ್ದಾರೆ. ಅದರಿಂದಲೂ ಉತ್ತಮ ಪ್ರಚಾರ ಸಿಕ್ಕಿದೆ.

ಇದೇ ಮೊದಲ ಬಾರಿಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಜೋಡಿಯಾಗಿ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್​ ನೋಡಿ ಜನರು ಇಷ್ಟಪಟ್ಟಿದ್ದಾರೆ. ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ಸಿಕ್ಕರೂ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಸದ್ದು ಮಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:46 pm, Tue, 13 September 22

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ