AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra Collection: ಎರಡೇ ದಿನಕ್ಕೆ 160 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಬ್ರಹ್ಮಾಸ್ತ್ರ’

Alia Bhatt | Ranbir Kapoor: ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಜೋಡಿಯಾಗಿ ನಟಿಸಿದ ಮೊದಲ ಸಿನಿಮಾ ‘ಬ್ರಹ್ಮಾಸ್ತ್ರ’. ಇಬ್ಬರ ಮೊದಲ ಕಾಂಬಿನೇಷನ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Brahmastra Collection: ಎರಡೇ ದಿನಕ್ಕೆ 160 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಬ್ರಹ್ಮಾಸ್ತ್ರ’
‘ಬ್ರಹ್ಮಾಸ್ತ್ರ’
TV9 Web
| Edited By: |

Updated on: Sep 11, 2022 | 5:24 PM

Share

ಹಲವು ತಿಂಗಳಿನಿಂದ ಕಳೆಗುಂದಿದ್ದ ಹಿಂದಿ ಚಿತ್ರರಂಗಕ್ಕೆ (Bollywood) ಈಗ ಹೊಸ ಚೈತನ್ಯ ಬಂದಂತೆ ಆಗಿದೆ. ಎರಡೇ ದಿನದಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಬಲ್ಲಂತಹ ಸಿನಿಮಾಗಾಗಿ ಇಡೀ ಬಿ-ಟೌನ್​ ಕಾದು ಕುಳಿತಿತ್ತು. ಅದನ್ನು ನಿಜ ಮಾಡುವ ರೀತಿಯಲ್ಲಿ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಬಿಡುಗಡೆ ಆಗಿದೆ. ಸೆಪ್ಟೆಂಬರ್​ 9ರಂದು ರಿಲೀಸ್​ ಆದ ಈ ಚಿತ್ರ ವಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಮರ್ಶಕರು ಈ ಸಿನಿಮಾವನ್ನು ತೆಗಳಿದ್ದಾರೆ. ಆದರೆ ಬಾಕ್ಸ್​ ಆಫೀಸ್​ ಕಲೆಕ್ಷನ್ (Brahmastra Box Office Collection)​ ವಿಚಾರದಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಹಿಂದೆ ಬಿದ್ದಿಲ್ಲ. ಎರಡು ದಿನಕ್ಕೆ ಈ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 160 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ದಿನದ ಕಲೆಕ್ಷನ್​ ಸೇರಿದರೆ ಅನಾಯಾಸವಾಗಿ 200 ಕೋಟಿ ರೂಪಾಯಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಆಲಿಯಾ ಭಟ್ ಮತ್ತು ರಣಬೀರ್​ ಕಪೂರ್​ ಅವರ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ಬ್ರೇಕ್​ ಸಿಕ್ಕಿದೆ.

ಅಯಾನ್​ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಒಟ್ಟು ಮೂರು ಪಾರ್ಟ್​ಗಳಲ್ಲಿ ಈ ಚಿತ್ರ ಬರಲಿದೆ. ಅದರಲ್ಲಿ ಮೊದಲ ಪಾರ್ಟ್​ ಈಗ ಬಿಡುಗಡೆ ಆಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಮಾಯಿ ಆಗುತ್ತಿರುವುದಕ್ಕೆ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ.

ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಈ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅವರಿಬ್ಬರು ಜೋಡಿಯಾಗಿ ನಟಿಸಿದ ಮೊದಲ ಸಿನಿಮಾ ‘ಬ್ರಹ್ಮಾಸ್ತ್ರ’. ಇಬ್ಬರ ಮೊದಲ ಕಾಂಬಿನೇಷನ್​ಗೆ ಜನರು ಫಿದಾ ಆಗಿದ್ದಾರೆ. ವೀಕೆಂಡ್​ನಲ್ಲಿ ಈ ಚಿತ್ರವನ್ನು ಪ್ರೇಕ್ಷಕರು ಮುಗಿಬಿದ್ದು ನೋಡಿದ್ದಾರೆ. ಅದರ ಪರಿಣಾಮವಾಗಿ ದೊಡ್ಡ ಮೊತ್ತದ ಕಲೆಕ್ಷನ್​ ಆಗುತ್ತಿದೆ. ಈ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​, ಅಕ್ಕಿನೇನಿ ನಾಗಾರ್ಜುನ ಮುಂತಾದ ಸ್ಟಾರ್​ ಕಲಾವಿದರು ಅಭಿನಯಿಸಿದ್ದಾರೆ. ಶಾರುಖ್​ ಖಾನ್​ ಅವರು ಒಂದು ಅತಿಥಿ ಪಾತ್ರ ಮಾಡಿರುವುದು ವಿಶೇಷ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ರಣಬೀರ್​ ಕಪೂರ್​ ಅವರು ನಟಿಸಿದ ‘ಶಂಷೇರಾ’ ಸಿನಿಮಾ ಈ ವರ್ಷ ತೆರೆಕಂಡು ಹೀನಾಯವಾಗಿ ಸೋತಿತ್ತು. ಆ ಬೇಸರವನ್ನು ಮರೆಸುವ ರೀತಿಯಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾದ ಕಲೆಕ್ಷನ್​ ಆಗುತ್ತಿದೆ. ಇನ್ನು, ಆಲಿಯಾ ಭಟ್​ ಅವರಿಗೆ ಈ ವರ್ಷ ‘ಗಂಗೂಬಾಯಿ ಕಾಠಿಯಾವಾಡಿ’, ‘ಆರ್​ಆರ್​ಆರ್​’ ಸಿನಿಮಾದ ಬಳಿಕ ಸಿಗುತ್ತಿರುವ ಮೂರನೇ ಗೆಲುವು ಇದಾಗಿದೆ. ಕಳಪೆ ಗ್ರಾಫಿಕ್ಸ್​ ಇದೆ ಎಂಬ ಕಾರಣಕ್ಕೆ ಒಂದು ವರ್ಗದ ಪ್ರೇಕ್ಷಕರು ‘ಬ್ರಹ್ಮಾಸ್ತ್ರ’ ಚಿತ್ರವನ್ನು ಜರಿದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್