AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಷ್ಟ ಇಲ್ಲ ಅಂದ್ರೆ ನನ್ನ ನೋಡ್ಬೇಡಿ’: ಕರೀನಾ ರೀತಿ ಹೇಳಿಕೆ ನೀಡಿ ಟ್ರೋಲ್​ ಆಗುತ್ತಿರುವ ಆಲಿಯಾ ಭಟ್​

Alia Bhatt | Boycott Bollywood: ‘ಎಷ್ಟು ದರ್ಪದಿಂದ ಆಲಿಯಾ ಭಟ್​ ಈ ರೀತಿ ಹೇಳಿದ್ದಾರೆ ನೋಡಿ. ಬ್ರಹ್ಮಾಸ್ತ್ರ ಸಿನಿಮಾವನ್ನು ಬಹಿಷ್ಕರಿಸೋಣ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

‘ಇಷ್ಟ ಇಲ್ಲ ಅಂದ್ರೆ ನನ್ನ ನೋಡ್ಬೇಡಿ’: ಕರೀನಾ ರೀತಿ ಹೇಳಿಕೆ ನೀಡಿ ಟ್ರೋಲ್​ ಆಗುತ್ತಿರುವ ಆಲಿಯಾ ಭಟ್​
ಆಲಿಯಾ ಭಟ್
TV9 Web
| Edited By: |

Updated on:Aug 23, 2022 | 11:42 AM

Share

ಭಾರತೀಯ ಚಿತ್ರರಂಗದಲ್ಲಿ ನಟಿ ಆಲಿಯಾ ಭಟ್ (Alia Bhatt)​ ದೊಡ್ಡ ಸಾಧನೆ ಮಾಡಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ಇಷ್ಟೆಲ್ಲ ಮಾಡಿದರೂ ಕೂಡ ಅವರಿಗೆ ಟ್ರೋಲ್​ ಕಾಟ ತಪ್ಪಿದ್ದಲ್ಲ. ಆಗಾಗ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಒಂದಷ್ಟು ವರ್ಷಗಳ ಹಿಂದೆ ಆಲಿಯಾ ಭಟ್​ ಅವರಿಗೆ ಸಾಮಾನ್ಯ ಜ್ಞಾನ ಇಲ್ಲ ಎಂಬ ಕಾರಣಕ್ಕೆ ಜನರು ಕಟು ಟೀಕೆ ಮಾಡಿದ್ದರು. ನಂತರ ನೆಪೋಟಿಸಂ ಕಾರಣದಿಂದ ಟ್ರೋಲ್​ (Troll) ಮಾಡಿದರು. ಈಗ ಒಂದೇ ಒಂದು ಹೇಳಿಕೆ ನೀಡಿ ಆಲಿಯಾ ಅವರು ನೆಟ್ಟಿಗರ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾ (Brahmastra) ಬಿಡುಗಡೆಗೆ ಸಜ್ಜಾಗುತ್ತಿರುವ ಈ ಹೊತ್ತಿನಲ್ಲಿ ಆಲಿಯಾ ಭಟ್​ ಅನಗತ್ಯವಾಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಬಾಲಿವುಡ್​ ಮಂದಿಗೆ ಈಗ ಬಹಿಷ್ಕಾರದ ಭಯ ಕಾಡುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳ ಎದುರಿನಲ್ಲಿ ಹಿಂದಿ ಸಿನಿಮಾಗಳು ಸೋಲುತ್ತಿವೆ. ಅದರ ಜೊತೆಯಲ್ಲೇ ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರ ಸಿನಿಮಾಗಳನ್ನು ಜನರು ಬಹಿಷ್ಕರಿಸುತ್ತಿದ್ದಾರೆ. #BoycottBollywood ಎಂಬ ಟ್ರೆಂಡ್​ ಜೋರಾಗಿದೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಆಲಿಯಾ ಭಟ್​ ಅವರು ಜನರನ್ನು ಕೆಣಕುವಂತಹ ಹೇಳಿಕೆ ನೀಡಿದ್ದಾರೆ.

‘ನಾನು ಏನು ಎಂಬುದನ್ನು ಪದೇಪದೇ ಕೂಗಿ ಹೇಳಲು ಸಾಧ್ಯವಿಲ್ಲ. ನಿಮಗೆ ನಾನು ಇಷ್ಟ ಎಲ್ಲ ಎಂದಾದರೆ ನನ್ನನ್ನು ನೋಡಬೇಡಿ’ ಎಂದು ಆಲಿಯಾ ಭಟ್​ ಹೇಳಿದ್ದಾರೆ. ಈ ಮೊದಲು ಕರೀನಾ ಕಪೂರ್ ಖಾನ್ ಕೂಡ ಇದೇ ರೀತಿ ಹೇಳಿಕೆ ನೀಡಿ ಟ್ರೋಲ್​ಗೆ ಒಳಗಾಗಿದ್ದರು. ಈಗ ಆಲಿಯಾ ಭಟ್​ ಅವರನ್ನು ಜನರು ಕಮೆಂಟ್​ಗಳ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?

‘ಎಷ್ಟು ದರ್ಪದಿಂದ ಆಲಿಯಾ ಭಟ್​ ಈ ರೀತಿ ಹೇಳಿದ್ದಾರೆ ನೋಡಿ. ಅವರು ಹೇಳಿದನ್ನು ನಾವು ಸವಾಲು ಅಂತ ಸ್ವೀಕರಿಸೋಣ. ಬ್ರಹ್ಮಾಸ್ತ್ರ ಸಿನಿಮಾವನ್ನು ಬಹಿಷ್ಕರಿಸೋಣ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಬಹಿಷ್ಕಾರದ ಟ್ರೆಂಡ್​ನಿಂದಾಗಿ ಬಾಲಿವುಡ್​ ಸೆಲೆಬ್ರಿಟಿಗಳಿಗೆ ತಲೆ ಹಾಳಾಗಿದೆ ಎನಿಸುತ್ತದೆ. ನಿಮ್ಮ ಆಯ್ಕೆಯಂತೆಯೇ ಆಗಲಿ ಆಲಿಯಾ’ ಎಂದು ವ್ಯಕ್ತಿಯೊಬ್ಬರು ವ್ಯಂಗ್ಯವಾಡಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿರುವಾಗ ಆಲಿಯಾ ಇಂಥ ಹೇಳಿಕೆ ನೀಡಬಾರದಿತ್ತು ಎಂದು ಜನರು ಅಭಿಪ್ರಾಯ ಪಟ್ಟಿದ್ದಾರೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್​ ಜೋಡಿಯಾಗಿ ನಟಿಸಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್​ 9ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದಾರೆ. ಕಳಪೆ ಗ್ರಾಫಿಕ್ಸ್​ ಕಾರಣದಿಂದ ಈ ಚಿತ್ರದ ಟ್ರೇಲರ್​ ಕೂಡ ಟೀಕೆಗೆ ಒಳಗಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:42 am, Tue, 23 August 22

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ