AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ‘ಬ್ರಹ್ಮಾಸ್ತ್ರ’ ಸಿನಿಮಾಗಾಗಿ ತ್ರಿಶೂಲ ಹಿಡಿದು ಭಿನ್ನ ಅವತಾರ ತಾಳಿದ ರಣಬೀರ್​ ಕಪೂರ್​

Brahmastra Motion Poster: ಈ ಸಿನಿಮಾ ಮೂರು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗವಾಗಿ ‘ಬ್ರಹ್ಮಾಸ್ತ್ರ ಭಾಗ ಒಂದು​: ಶಿವ’ ತೆರೆಗೆ ಬರುತ್ತಿದೆ. ರಣಬೀರ್​ ಕಪೂರ್​ ಶಿವನಾಗಿ ಕಾಣಿಸಿಕೊಂಡಿದ್ದಾರೆ.

Ranbir Kapoor: ‘ಬ್ರಹ್ಮಾಸ್ತ್ರ’ ಸಿನಿಮಾಗಾಗಿ ತ್ರಿಶೂಲ ಹಿಡಿದು ಭಿನ್ನ ಅವತಾರ ತಾಳಿದ ರಣಬೀರ್​ ಕಪೂರ್​
ರಣಬೀರ್​ ಕಪೂರ್
TV9 Web
| Edited By: |

Updated on:Dec 15, 2021 | 7:46 PM

Share

ನಟ ರಣಬೀರ್​ ಕಪೂರ್ (Ranbir Kapoor) ​ ಹಾಗೂ ಆಲಿಯಾ ಭಟ್ (Alia Bhatt)​ ನಿಜ ಜೀವನದಲ್ಲಿ ಪರಸ್ಪರ ಪ್ರೀತಿಸುತ್ತಿದ್ದಾರೆ. ಅಚ್ಚರಿ ಎಂದರೆ, ಇವರ ನಟನೆಯ ಒಂದೇಒಂದು ಸಿನಿಮಾ ಕೂಡ ತೆರೆಗೆ ಬಂದಿಲ್ಲ. ಇವರು ಒಟ್ಟಾಗಿ ನಟಿಸುತ್ತಿರುವ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾದ ಕೆಲಸಗಳು ಸಾಕಷ್ಟು ವಿಳಂಬವಾಗಿದೆ. ಚಿತ್ರ ಸೆಟ್ಟೇರಿ ಕೆಲ ವರ್ಷಗಳೇ ಕಳೆದರೂ ಸಿನಿಮಾ ಮಾತ್ರ ಪೂರ್ಣಗೊಂಡಿಲ್ಲ. ಚಿತ್ರತಂಡ ಕೂಡ ಈ ಬಗ್ಗೆ ಅಪ್ಡೇಟ್​ ನೀಡಿರಲಿಲ್ಲ. ಈಗ ಈ ಚಿತ್ರದ ಮೋಷನ್​ ಪೋಸ್ಟರ್​ (Brahmastra Motion Poster) ರಿಲೀಸ್​ ಆಗಿದೆ. ಇದನ್ನು ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಈ ಸಿನಿಮಾ ಮೂರು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗವಾಗಿ ‘ಬ್ರಹ್ಮಾಸ್ತ್ರ ಭಾಗ ಒಂದು​: ಶಿವ’ ತೆರೆಗೆ ಬರುತ್ತಿದೆ. ರಣಬೀರ್​ ಕಪೂರ್​ ಶಿವನಾಗಿ ಕಾಣಿಸಿಕೊಂಡಿದ್ದಾರೆ. ಇಂದು ರಿಲೀಸ್​ ಆದ ಮೋಷನ್​ ಪೋಸ್ಟರ್​ನಲ್ಲಿ ತ್ರಿಶೂಲ ಹಿಡಿದು ಕಾಣಿಸಿಕೊಂಡಿದ್ದಾರೆ. ಅವರ ಹಿಂದೆ ಶಿವನ ವಿಗ್ರಹ ಇದೆ. ಸದ್ಯ, ಈ ಪೋಸ್ಟರ್​ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

‘ಈಶಾ ವಿಶ್ವದಲ್ಲಿ ಏನೋ ನಡೆಯುತ್ತಿದೆ. ಇದು ಸಾಮಾನ್ಯ ಜೀವಿಗಳ ತಿಳುವಳಿಕೆಯನ್ನು ಮೀರಿದೆ’ ಎಂದು ರಣಬೀರ್​ ಕಪೂರ್​​ ಮೋಷನ್​ ಪೋಸ್ಟರ್​ನಲ್ಲಿ ಹೇಳಿದ್ದಾರೆ. ಅಂದಹಾಗೆ, ಈ ಸಿನಿಮಾ 2022ರ ಸೆಪ್ಟೆಂಬರ್ 9ರಂದು ತೆರೆಗೆ ಬರುತ್ತಿದೆ.

ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ಅಮಿತಾಭ್​ ಬಚ್ಚನ್​, ನಾಗಾರ್ಜುನ, ಮೌನಿ ರಾಯ್​ ಮತ್ತು ಡಿಂಪಲ್​ ಕಪಾಡಿಯ ಮೊದಲಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ತೆರೆ ಕಾಣಲಿದೆ. ಸಿನಿಮಾ ವಿಳಂಬವಾಗುವ ಬಗ್ಗೆ ಈ ಮೊದಲು ಮಾತನಾಡಿದ್ದ ಆಲಿಯಾ ಭಟ್​, ‘ಇದೊಂದು ವಿಭಿನ್ನ ಚಿತ್ರ. ಉತ್ತಮ ಚಿತ್ರ ಹೆಚ್ಚು ಸಮಯವನ್ನು ಬೇಡುತ್ತದೆ’ ಎಂದಿದ್ದರು.

ಇದನ್ನೂ ಓದಿ: ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

ಕತ್ರಿನಾ ಕೈಫ್​ಗೆ ಗಿಫ್ಟ್​ ಕೊಡೋಕೆ ಕೋಟಿಕೋಟಿ ಖರ್ಚು ಮಾಡಿದ ಸಲ್ಮಾನ್​, ರಣಬೀರ್​?

Published On - 7:45 pm, Wed, 15 December 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ