Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ‘ಬ್ರಹ್ಮಾಸ್ತ್ರ’ ಸಿನಿಮಾಗಾಗಿ ತ್ರಿಶೂಲ ಹಿಡಿದು ಭಿನ್ನ ಅವತಾರ ತಾಳಿದ ರಣಬೀರ್​ ಕಪೂರ್​

Brahmastra Motion Poster: ಈ ಸಿನಿಮಾ ಮೂರು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗವಾಗಿ ‘ಬ್ರಹ್ಮಾಸ್ತ್ರ ಭಾಗ ಒಂದು​: ಶಿವ’ ತೆರೆಗೆ ಬರುತ್ತಿದೆ. ರಣಬೀರ್​ ಕಪೂರ್​ ಶಿವನಾಗಿ ಕಾಣಿಸಿಕೊಂಡಿದ್ದಾರೆ.

Ranbir Kapoor: ‘ಬ್ರಹ್ಮಾಸ್ತ್ರ’ ಸಿನಿಮಾಗಾಗಿ ತ್ರಿಶೂಲ ಹಿಡಿದು ಭಿನ್ನ ಅವತಾರ ತಾಳಿದ ರಣಬೀರ್​ ಕಪೂರ್​
ರಣಬೀರ್​ ಕಪೂರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 15, 2021 | 7:46 PM

ನಟ ರಣಬೀರ್​ ಕಪೂರ್ (Ranbir Kapoor) ​ ಹಾಗೂ ಆಲಿಯಾ ಭಟ್ (Alia Bhatt)​ ನಿಜ ಜೀವನದಲ್ಲಿ ಪರಸ್ಪರ ಪ್ರೀತಿಸುತ್ತಿದ್ದಾರೆ. ಅಚ್ಚರಿ ಎಂದರೆ, ಇವರ ನಟನೆಯ ಒಂದೇಒಂದು ಸಿನಿಮಾ ಕೂಡ ತೆರೆಗೆ ಬಂದಿಲ್ಲ. ಇವರು ಒಟ್ಟಾಗಿ ನಟಿಸುತ್ತಿರುವ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾದ ಕೆಲಸಗಳು ಸಾಕಷ್ಟು ವಿಳಂಬವಾಗಿದೆ. ಚಿತ್ರ ಸೆಟ್ಟೇರಿ ಕೆಲ ವರ್ಷಗಳೇ ಕಳೆದರೂ ಸಿನಿಮಾ ಮಾತ್ರ ಪೂರ್ಣಗೊಂಡಿಲ್ಲ. ಚಿತ್ರತಂಡ ಕೂಡ ಈ ಬಗ್ಗೆ ಅಪ್ಡೇಟ್​ ನೀಡಿರಲಿಲ್ಲ. ಈಗ ಈ ಚಿತ್ರದ ಮೋಷನ್​ ಪೋಸ್ಟರ್​ (Brahmastra Motion Poster) ರಿಲೀಸ್​ ಆಗಿದೆ. ಇದನ್ನು ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಈ ಸಿನಿಮಾ ಮೂರು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗವಾಗಿ ‘ಬ್ರಹ್ಮಾಸ್ತ್ರ ಭಾಗ ಒಂದು​: ಶಿವ’ ತೆರೆಗೆ ಬರುತ್ತಿದೆ. ರಣಬೀರ್​ ಕಪೂರ್​ ಶಿವನಾಗಿ ಕಾಣಿಸಿಕೊಂಡಿದ್ದಾರೆ. ಇಂದು ರಿಲೀಸ್​ ಆದ ಮೋಷನ್​ ಪೋಸ್ಟರ್​ನಲ್ಲಿ ತ್ರಿಶೂಲ ಹಿಡಿದು ಕಾಣಿಸಿಕೊಂಡಿದ್ದಾರೆ. ಅವರ ಹಿಂದೆ ಶಿವನ ವಿಗ್ರಹ ಇದೆ. ಸದ್ಯ, ಈ ಪೋಸ್ಟರ್​ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

‘ಈಶಾ ವಿಶ್ವದಲ್ಲಿ ಏನೋ ನಡೆಯುತ್ತಿದೆ. ಇದು ಸಾಮಾನ್ಯ ಜೀವಿಗಳ ತಿಳುವಳಿಕೆಯನ್ನು ಮೀರಿದೆ’ ಎಂದು ರಣಬೀರ್​ ಕಪೂರ್​​ ಮೋಷನ್​ ಪೋಸ್ಟರ್​ನಲ್ಲಿ ಹೇಳಿದ್ದಾರೆ. ಅಂದಹಾಗೆ, ಈ ಸಿನಿಮಾ 2022ರ ಸೆಪ್ಟೆಂಬರ್ 9ರಂದು ತೆರೆಗೆ ಬರುತ್ತಿದೆ.

ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ಅಮಿತಾಭ್​ ಬಚ್ಚನ್​, ನಾಗಾರ್ಜುನ, ಮೌನಿ ರಾಯ್​ ಮತ್ತು ಡಿಂಪಲ್​ ಕಪಾಡಿಯ ಮೊದಲಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ತೆರೆ ಕಾಣಲಿದೆ. ಸಿನಿಮಾ ವಿಳಂಬವಾಗುವ ಬಗ್ಗೆ ಈ ಮೊದಲು ಮಾತನಾಡಿದ್ದ ಆಲಿಯಾ ಭಟ್​, ‘ಇದೊಂದು ವಿಭಿನ್ನ ಚಿತ್ರ. ಉತ್ತಮ ಚಿತ್ರ ಹೆಚ್ಚು ಸಮಯವನ್ನು ಬೇಡುತ್ತದೆ’ ಎಂದಿದ್ದರು.

ಇದನ್ನೂ ಓದಿ: ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

ಕತ್ರಿನಾ ಕೈಫ್​ಗೆ ಗಿಫ್ಟ್​ ಕೊಡೋಕೆ ಕೋಟಿಕೋಟಿ ಖರ್ಚು ಮಾಡಿದ ಸಲ್ಮಾನ್​, ರಣಬೀರ್​?

Published On - 7:45 pm, Wed, 15 December 21

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​