Ranbir Kapoor: 650 ಕೋಟಿ ರೂ. ಬಜೆಟ್​ನಲ್ಲಿ ಸಿದ್ಧವಾಯ್ತಾ ‘ಬ್ರಹ್ಮಾಸ್ತ್ರ’? ಲಾಸ್​ ಎಂದವರಿಗೆ ರಣಬೀರ್​ ಕೊಟ್ರು ಉತ್ತರ

Brahmastra Box Office Collection: ‘ಬ್ರಹ್ಮಾಸ್ತ್ರ’ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಲೆಕ್ಕಾಚಾರ ಸುಳ್ಳು ಎಂದು ಒಂದಷ್ಟು ಮಂದಿ ವಾದಿಸುತ್ತಿದ್ದಾರೆ. ಬಜೆಟ್​ ಬಗ್ಗೆಯೂ ಸಖತ್​ ಚರ್ಚೆ ಆಗುತ್ತಿದೆ.

Ranbir Kapoor: 650 ಕೋಟಿ ರೂ. ಬಜೆಟ್​ನಲ್ಲಿ ಸಿದ್ಧವಾಯ್ತಾ ‘ಬ್ರಹ್ಮಾಸ್ತ್ರ’? ಲಾಸ್​ ಎಂದವರಿಗೆ ರಣಬೀರ್​ ಕೊಟ್ರು ಉತ್ತರ
ರಣಬೀರ್ ಕಪೂರ್
Follow us
| Updated By: ಮದನ್​ ಕುಮಾರ್​

Updated on: Sep 19, 2022 | 11:25 AM

2022ರ ವರ್ಷದಲ್ಲಿ ಬಾಲಿವುಡ್​ ಸಿನಿಮಾಗಳು ಗೆದ್ದಿದ್ದು ತುಂಬ ಕಡಿಮೆ. ಸಾಲು ಸಾಲು ಸೋಲಿನ ನಡುವೆ ಗೆದ್ದ ಚಿತ್ರಗಳ ಸಂಖ್ಯೆ ತುಂಬ ವಿರಳ. ಪ್ರೇಕ್ಷಕರು ಕೃಪೆ ತೋರಿದ್ದರಿಂದ ಈಗ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್​ (Box Office Collection) ಮಾಡಿದೆ. ಆದರೆ ಈ ಗಳಿಕೆ ಬಗ್ಗೆ ಕೆಲವರಿಗೆ ಅನುಮಾನ ಇದೆ. ಇನ್ನು, ಚಿತ್ರದ ಬಜೆಟ್​ ಬಗ್ಗೆಯೂ ಸಿಕ್ಕಾಪಟ್ಟೆ ಚರ್ಚೆಗಳು ನಡೆಯುತ್ತಿವೆ. ಸಿನಿಮಾದ ಬಜೆಟ್​ ಬರೋಬ್ಬರಿ 650 ಕೋಟಿ ರೂಪಾಯಿ ಆಗಿರುವಾಗ ಈ ಚಿತ್ರವನ್ನು ಹಿಟ್​ ಎಂದು ಕರೆಯಲು ಹೇಗೆ ಸಾಧ್ಯ ಎಂದು ಕಂಗನಾ ರಣಾವತ್​ ಪ್ರಶ್ನಿಸಿದ್ದಾರೆ. ಅದಕ್ಕೆ ರಣಬೀರ್​ ಕಪೂರ್ (Ranbir Kapoor) ತಿರುಗೇಟು ನೀಡಿದ್ದಾರೆ.

‘ಬ್ರಹ್ಮಾಸ್ತ್ರ’ ಕಥೆ ಮೂರು ಪಾರ್ಟ್​ಗಳಲ್ಲಿ ಬರುತ್ತಿದೆ. ಈಗ ಬಿಡುಗಡೆ ಆಗಿರುವುದು ಮೊದಲ ಪಾರ್ಟ್​ ಮಾತ್ರ. ಏನೇ ಬಜೆಟ್​ ಹಾಕಿದ್ದರೂ ಕೂಡ ಅದು ಮೂರೂ ಪಾರ್ಟ್​ಗೆ ಹಂಚಿಕೆ ಆಗಲಿದೆ. ಮೊದಲ ಪಾರ್ಟ್​ ಸಲುವಾಗಿ ನಿರ್ಮಿಸಿದ ಸೆಟ್​ಗಳು, ಖರೀದಿಸಿದ ಪ್ರಾಪರ್ಟಿಗಳು, ಸಿದ್ಧಪಡಿಸಿರುವ ವಿಎಫ್​ಎಕ್ಸ್ ದೃಶ್ಯಗಳು ಇನ್ನುಳಿದ ಪಾರ್ಟ್​​ಗಳಿಗೂ ಬಳಕೆ ಆಗಲಿವೆ. ಇದರಿಂದ ಚಿತ್ರತಂಡಕ್ಕೆ ಹೆಚ್ಚಿನ ಹೊರೆ ಆಗುವುದಿಲ್ಲ ಎಂಬುದು ರಣಬೀರ್​ ಕಪೂರ್​ ಅವರ ಮಾತು.

ಅಯಾನ್​ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ಕಳಪೆ ಗ್ರಾಫಿಕ್ಸ್ ಇದೆ ಎಂಬ ಆರೋಪದ ನಡುವೆಯೂ ಈ ಸಿನಿಮಾ ಉತ್ತಮ ಕೆಲಕ್ಷನ್​ ಮಾಡಿದೆ. ಕಥೆ ಚೆನ್ನಾಗಿಲ್ಲ ಎಂಬ ನೆಗೆಟಿವ್​ ವಿಮರ್ಶೆ ಸಿಕ್ಕ ಹೊರತಾಗಿಯೂ ಜನರು ಈ ಸಿನಿಮಾವನ್ನು ಮುಗಿಬಿದ್ದು ನೋಡಿದ್ದಾರೆ. ಈ ಎಲ್ಲ ಕಾರಣದಿಂದಾಗಿ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್​ ಹಿಟ್​ ಆಗಿದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಈ ವರ್ಷ ಏಪ್ರಿಲ್​ ತಿಂಗಳಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಮದುವೆ ನೆರವೇರಿತು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಅವರು ಹಸೆಮಣೆ ಏರಿದರು. ಅವರಿಬ್ಬರು ಮೊದಲ ಬಾರಿಗೆ ಜೊತೆಯಾಗಿ ನಟಿಸಿದ ಸಿನಿಮಾ ‘ಬ್ರಹ್ಮಾಸ್ತ್ರ’. ಈ ಕ್ಯೂಟ್​ ಜೋಡಿಯನ್ನು ನೋಡಿ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಶಾರುಖ್​ ಖಾನ್​ ಅವರ ಅತಿಥಿ ಪಾತ್ರದಿಂದಾಗಿ ಚಿತ್ರದ ಮೆರುಗು ಹೆಚ್ಚಿದೆ. ವಿದೇಶದಲ್ಲೂ ಈ ಸಿನಿಮಾಗೆ ಉತ್ತಮ ಕಲೆಕ್ಷನ್​ ಆಗಿದೆ. ಇನ್ನೂ ಅನೇಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದೆಲ್ಲದರ ನಡುವೆ ‘ಬ್ರಹ್ಮಾಸ್ತ್ರ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಲೆಕ್ಕಾಚಾರ ಸುಳ್ಳು ಎಂದು ಒಂದಷ್ಟು ಮಂದಿ ವಾದಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ