AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ದರ ಕಡಿಮೆ ಮಾಡಿದ್ದಕ್ಕೆ ಕೋಟಿಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಸಿನಿಮಾ; ಉಳಿದ ಚಿತ್ರಗಳ ಕಥೆ ಏನು?

‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್ 22ರಂದು ಕೇವಲ 3 ಕೋಟಿ ಗಳಿಕೆ ಮಾಡಿತ್ತು. 75 ರೂಪಾಯಿ ಟಿಕೆಟ್ ದರ ನಿಗದಿ ಮಾಡಿದ್ದರಿಂದ ಸೆಪ್ಟೆಂಬರ್ 23ರಂದು ಸಿನಿಮಾ ಕಲೆಕ್ಷನ್ ಜಾಸ್ತಿ ಆಗಿದೆ.

ಟಿಕೆಟ್​ ದರ ಕಡಿಮೆ ಮಾಡಿದ್ದಕ್ಕೆ ಕೋಟಿಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಸಿನಿಮಾ; ಉಳಿದ ಚಿತ್ರಗಳ ಕಥೆ ಏನು?
ರಣಬೀರ್
TV9 Web
| Edited By: |

Updated on:Sep 24, 2022 | 5:46 PM

Share

ಸೆಪ್ಟೆಂಬರ್ 23ರಂದು ಭಾರತದಾದ್ಯಂತ ‘ರಾಷ್ಟ್ರೀಯ ಸಿನಿಮಾ ದಿನಾಚರಣೆ’ (National Cinema Day) ಆಚರಿಸಲಾಗಿದೆ. ಈ ವಿಶೇಷ ದಿನದಂದು ಮಲ್ಟಿಪ್ಲೆಕ್ಸ್​​ಗಳು ಪ್ರೇಕ್ಷಕರಿಗೆ ಸಖತ್ ಆಫರ್ ನೀಡಿದ್ದವು. ಕೇವಲ 75 ರೂಪಾಯಿಗೆ ಸಿನಿಮಾ ನೋಡುವ ಅವಕಾಶ ಕಲ್ಪಿಸಲಾಗಿತ್ತು. ಈ ಕಾರಣದಿಂದ ಬಹುತೇಕ ಮಲ್ಟಿಪ್ಲೆಕ್ಸ್​​ಗಳು (Multiplex) ತುಂಬಿ ತುಳುಕಿದ್ದವು. ‘ಬ್ರಹ್ಮಾಸ್ತ್ರ’ (Brahmastra Movie) ಸಿನಿಮಾಗೆ ಈ ಆಫರ್ ವರದಾನವಾಗಿದೆ. ಶುಕ್ರವಾರ (ಸೆಪ್ಟೆಂಬರ್ 23) ಈ ಚಿತ್ರ ಬರೋಬ್ಬರಿ 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದರಿಂದ ಚಿತ್ರತಂಡ ಸಖತ್ ಖುಷಿಪಟ್ಟಿದೆ.

ಅಯಾನ್ ಮುಖರ್ಜಿ ನಿರ್ದೇಶನದ ‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್ 9ರಂದು ತೆರೆಗೆ ಬಂತು. ಈ ಚಿತ್ರ ಮೊದಲ ಮೂರು ದಿನ ಭರ್ಜರಿ ಕಲೆಕ್ಷನ್ ಮಾಡಿತು. ಚಿತ್ರದ ಬಗ್ಗೆ ಒಳ್ಳೆಯ ಟಾಕ್ ಶುರುವಾದ ಕಾರಣ ಜನರು ಮುಗಿಬಿದ್ದು ಚಿತ್ರ ವೀಕ್ಷಿಸಿದ್ದಾರೆ. ಹೀಗಾಗಿ ಸಿನಿಮಾ ಒಳ್ಳೆಯ ಕಮಾಯಿ ಮಾಡುತ್ತಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 400 ಕೋಟಿ ರೂಪಾಯಿ ಸಮೀಪಿಸಿದೆ.

‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್ 22ರಂದು ಕೇವಲ 3 ಕೋಟಿ ಗಳಿಕೆ ಮಾಡಿತ್ತು. 75 ರೂಪಾಯಿ ಟಿಕೆಟ್ ದರ ನಿಗದಿ ಮಾಡಿದ್ದರಿಂದ ಸೆಪ್ಟೆಂಬರ್ 23ರಂದು ಸಿನಿಮಾ ಕಲೆಕ್ಷನ್ ಜಾಸ್ತಿ ಆಗಿದೆ. ಅಂದರೆ, ಶೇ. 240 ಕಲೆಕ್ಷನ್ ಹೆಚ್ಚಿದೆ. ಇಂದು (ಸೆಪ್ಟೆಂಬರ್ 24), ನಾಳೆ (ಸೆಪ್ಟೆಂಬರ್ 25) ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಹಾಲಿವುಡ್​ನ ‘ಅವತಾರ್​ 2’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅದಕ್ಕೂ ಮೊದಲು ‘ಅವತಾರ್​’ ಸಿನಿಮಾ ರೀ-ರಿಲೀಸ್ ಆಗಿದೆ. ಈ ಚಿತ್ರ ಕೂಡ ಒಳ್ಳೆಯ ಕಲೆಕ್ಷನ್ ಮಾಡಿದೆ. ಇದೇ ದಿನ ‘ಗುರು ಶಿಷ್ಯರು’ ರಿಲೀಸ್ ಆಯಿತು. ಕಳೆದ ವಾರ ಧನಂಜಯ ನಟನೆಯ ‘ಮಾನ್ಸೂನ್ ರಾಗ’ ಮೆಚ್ಚುಗೆ ಪಡೆದುಕೊಂಡಿತು. ಈ ಎರಡೂ ಚಿತ್ರಗಳು ಒಳ್ಳೆಯ ರೆಸ್ಪಾನ್ಸ್ ಪಡೆದವು. ಈ ಚಿತ್ರ ಕೂಡ ಸೆಪ್ಟೆಂಬರ್ 23ರಂದು ಒಳ್ಳೆಯ ಕಲೆಕ್ಷನ್ ಮಾಡಿದೆ.

ಇದನ್ನೂ ಓದಿ: ಮಿತಿ ಮೀರಿದ ಬಜೆಟ್​; ‘ಬ್ರಹ್ಮಾಸ್ತ್ರ’ ಚಿತ್ರಕ್ಕಾಗಿ ಸಂಭಾವನೆಯನ್ನೇ ಪಡೆದಿಲ್ಲ ರಣಬೀರ್ ಕಪೂರ್

ಸಿನಿಮಾ ನೋಡೋಕೆ ಪ್ರೇಕ್ಷಕರು ಥಿಯೇಟರ್​​ಗೆ ಬರುವುದಿಲ್ಲ ಎಂಬ ಆರೋಪ ಇದೆ. ಆದರೆ, ರಾಷ್ಟ್ರೀಯ ಸಿನಿಮಾ ದಿನ ಈ ವಿಚಾರವನ್ನು ಸುಳ್ಳು ಮಾಡಿದೆ. ಟಿಕೆಟ್​ ದರ ಹೆಚ್ಚಿರುವುದರಿಂದಲೇ ಪ್ರೇಕ್ಷಕರು ಥಿಯೇಟರ್​ಗೆ ಹೆಚ್ಚಾಗಿ ಬರುತ್ತಿಲ್ಲ ಎಂಬ ವಾದ ಇತ್ತು. ಅದು ಮತ್ತೆ ಸಾಬೀತಾಗಿದೆ.

Published On - 5:22 pm, Sat, 24 September 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?