AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್

ಸೆಪ್ಟೆಂಬರ್ 17ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ 16.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 197 ಕೋಟಿ ರೂಪಾಯಿ ಆಗಿದೆ.

ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್
ಕಾಶ್ಮೀರ್ ಫೈಲ್ಸ್-ಬ್ರಹ್ಮಾಸ್ತ್ರ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 18, 2022 | 10:59 AM

Share

ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾಗೆ (Brahmastra Movie) ರಿಲೀಸ್​ಗೂ ಮೊದಲೇ ಸಂಕಷ್ಟ ಎದುರಾಗಿತ್ತು. ಈ ಸಿನಿಮಾಗೆ ಬಾಯ್ಕಾಟ್ ಟ್ರೆಂಡ್​​ನ ಬೆದರಿಕೆ ಇತ್ತು. ಇದಕ್ಕೆ ಕಾರಣ ಆಗಿದ್ದು ಆಲಿಯಾ ಹಾಗೂ ರಣಬೀರ್ ಹೇಳಿಕೆ. ‘ನಿಮಗೆ ಇಷ್ಟವಿಲ್ಲದಿದ್ದರೆ ಸಿನಿಮಾ ನೋಡಬೇಡಿ’ ಎಂದು ಆಲಿಯಾ ಹೇಳಿದ್ದರು. ಇನ್ನು, ರಣಬೀರ್ ಕಪೂರ್ ಅವರು ಗೋಮಾಂಸ ತಿನ್ನುತ್ತೇನೆ ಎಂದು ಒಪ್ಪಿಕೊಂಡ ಹೇಳಿಕೆ ವೈರಲ್ ಆಗಿತ್ತು. ಇವೆರಡು ವಿಚಾರಗಳನ್ನು ಇಟ್ಟುಕೊಂಡು ಸಿನಿಮಾ ಬ್ಯಾನ್ ಮಾಡುವ ಆಗ್ರಹ ಕೇಳಿ ಬಂದಿತ್ತು. ಆದರೆ, ಅಚ್ಚರಿ ಎಂಬಂತೆ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಭಾನುವಾರದ (ಸೆಪ್ಟೆಂಬರ್ 18) ಕಲೆಕ್ಷನ್ ಸೇರಿದರೆ ಈ ಚಿತ್ರದ ಕಲೆಕ್ಷನ್ 200+ ಕೋಟಿ ರೂ. (ಭಾರತದ ಬಾಕ್ಸ್ ಆಫೀಸ್ ಲೆಕ್ಕಾಚಾರ) ಆಗಲಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಇದರ ಜತೆಗೆ ಬಾಯ್ಕಾಟ್ ಟ್ರೆಂಡ್ ಸೈಲೆಂಟ್ ಆಗಿದೆ.

‘ಬ್ರಹ್ಮಾಸ್ತ್ರ’ ಸಿನಿಮಾ ಬಾಲಿವುಡ್​ನಲ್ಲಿ ಗೆಲುವಿನ ನಗೆ ಬೀರಿದೆ. ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ತೆರೆಗೆ ಬಂದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 250+ ಕೋಟಿ ಕಲೆಕ್ಷನ್ ಮಾಡಿದ್ದು ಹೊರತುಪಡಿಸಿ ಮತ್ತಾವ ಚಿತ್ರವೂ ದೊಡ್ಡ ಗಳಿಕೆ ಮಾಡಿಲ್ಲ. ಈಗ ‘ಬ್ರಹ್ಮಾಸ್ತ್ರ’ ಸಿನಿಮಾ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ದಾಖಲೆ ಮುರಿಯಲು ರೆಡಿ ಆಗಿದೆ.

ಸೆಪ್ಟೆಂಬರ್ 17ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ 16.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 197 ಕೋಟಿ ರೂಪಾಯಿ ಆಗಿದೆ. ಇಂದಿನ ಕಲೆಕ್ಷನ್ ಸೇರಿದರೆ ಸಿನಿಮಾದ ಒಟ್ಟೂ ಕಲೆಕ್ಷನ್ 215 ಕೋಟಿ ರೂಪಾಯಿ ದಾಟಬಹುದು. ಮುಂದಿನ ದಿನಗಳಲ್ಲಿ ಸಿನಿಮಾದ ಗಲ್ಲಾಪಟ್ಟಿಗೆ ಗಳಿಕೆ ಇದೇ ರೀತಿ ಇದ್ದರೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಈ ಚಿತ್ರ ಹಿಂದಿಕ್ಕಲಿದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಇದನ್ನೂ ಓದಿ: ರಣಬೀರ್ ನಟನೆಯ ‘ಬ್ರಹ್ಮಾಸ್ತ್ರ’ ಗೆಲುವಿನಲ್ಲಿ ಆಲಿಯಾ ಭಟ್​ಗಿಲ್ಲ ಪಾಲು; ಯಾಕೀ ತಾರತಮ್ಯ?

ಅಯಾನ್ ಮುಖರ್ಜಿ ನಿರ್ದೇಶನದ ‘ಬ್ರಹ್ಮಾಸ್ತ್ರ’ ಸಿನಿಮಾದ ಗ್ರಾಫಿಕ್ಸ್ ಬಗ್ಗೆ ಹಲವರಿಂದ ಟೀಕೆ ವ್ಯಕ್ತವಾಗಿತ್ತು. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುವುದಿಲ್ಲ ಎಂದೇ ಹೇಳಲಾಗಿತ್ತು. ಆದರೆ, ಅಚ್ಚರಿಯ ರೀತಿಯಲ್ಲಿ ಸಿನಿಮಾ ಗಳಿಕೆ ಮಾಡುತ್ತಿದೆ. ಈ ಚಿತ್ರ ವಿಶ್ವ ಬಾಕ್ಸ್​ಆಫೀಸ್​ನಲ್ಲಿ ಈಗಾಗಲೇ 300+ ಕೋಟಿ ರೂಪಾಯಿ ಬಾಚಿಕೊಂಡಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ