AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ 2’ ಸೆಟ್ಟೇರಿತಾ? ವೈರಲ್ ಆಗುತ್ತಿದೆ ದೀಪಿಕಾ-ರಣಬೀರ್ ಕಪೂರ್ ಪೋಸ್ಟರ್

‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಅಯಾನ್ ಮುಖರ್ಜಿ ಅವರು.  ಸದ್ಯ ಅವರು ‘ವಾರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗೋದು 2025ರಲ್ಲಿ! ‘ಬ್ರಹ್ಮಾಸ್ತ್ರ: ಪಾರ್ಟ್ 2- ದೇವ್’ ರಿಲೀಸ್ ಆಗೋದು 2026ರಲ್ಲಿ!

‘ಬ್ರಹ್ಮಾಸ್ತ್ರ 2’ ಸೆಟ್ಟೇರಿತಾ? ವೈರಲ್ ಆಗುತ್ತಿದೆ ದೀಪಿಕಾ-ರಣಬೀರ್ ಕಪೂರ್ ಪೋಸ್ಟರ್
ದೀಪಿಕಾ-ರಣಬೀರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 03, 2023 | 3:25 PM

Share

‘ಬ್ರಹ್ಮಾಸ್ತ್ರ: ಶಿವ ಪಾರ್ಟ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೆ ಎರಡನೇ ಪಾರ್ಟ್ ಸಿದ್ಧಗೊಳ್ಳಬೇಕಿದೆ. ಅದಕ್ಕೂ ಮೊದಲೇ ಫ್ಯಾನ್ ಮೇಡ್​​ ಪೋಸ್ಟರ್ ಒಂದು ವೈರಲ್ ಆಗಿದೆ. ಈ ಪೋಸ್ಟರ್​ನಲ್ಲಿ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಅವರು ಗಮನ ಸೆಳೆದಿದ್ದಾರೆ.

‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಅಯಾನ್ ಮುಖರ್ಜಿ ಅವರು.  ಸದ್ಯ ಅವರು ‘ವಾರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗೋದು 2025ರಲ್ಲಿ! ‘ಬ್ರಹ್ಮಾಸ್ತ್ರ: ಪಾರ್ಟ್ 2- ದೇವ್’ ರಿಲೀಸ್ ಆಗೋದು 2026ರಲ್ಲಿ! ಅಂದರೆ ಇದಕ್ಕೆ ಇನ್ನೂ ಮೂರು ವರ್ಷ ಸಮಯ ಇದೆ. ಹೀಗಾಗಿ, ಸದ್ಯಕ್ಕಂತೂ ಈ ಚಿತ್ರದ ಬಗ್ಗೆ ಅಪ್​ಡೇಟ್ ಸಿಗೋದು ಅನುಮಾನವೇ. ಆದರೆ, ಕೆಲ ಅಭಿಮಾನಿಗಳಿಗೆ ಸುಮ್ಮನೆ ಕೂರೋಕೆ ಸಾಧ್ಯವಾಗುತ್ತಿಲ್ಲ.

ಈ ಚಿತ್ರದ ಬಗ್ಗೆ ಏನಾದರೂ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಕಾರಣದಿಂದಲೇ ಕೆಲವರು ತಾವೇ ಪೋಸ್ಟರ್ ಮಾಡಿ ಹರಿಬಿಡುತ್ತಿದ್ದಾರೆ. ‘ಬ್ರಹ್ಮಾಸ್ತ್ರ ಸೀಕ್ವೆಲ್​ನಲ್ಲಿ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಅವರು ದೇವ್ ಮತ್ತು ಅಮೃತಾ ಆಗಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿದೆ. ಇದು ನಿಜವಾದ ಪೋಸ್ಟರ್ ಎಂದು ಅನೇಕರು ನಂಬಿದ್ದಾರೆ. ಇದಕ್ಕೆ ಸಾವಿರಾರು ಲೈಕ್ಸ್ ಸಿಕ್ಕಿದೆ.

‘ಆಲಿಯಾ ಹಾಗೂ ರಣಬೀರ್ ಕಪೂರ್ ಕೆಮಿಸ್ಟ್ರಿ ಇಷ್ಟವಾಗಿದೆ. ಈಗ ಮತ್ತೊಮ್ಮೆ ರಣಬೀರ್ ಹಾಗೂ ದೀಪಿಕಾ ಕೆಮಿಸ್ಟ್ರಿ ನೋಡಲು ಕಾದಿದ್ದೇವೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಈ ಪೋಸ್ಟರ್​ಗೆ ಅಯಾನ್ ಮುಖರ್ಜಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by DEEPIKA NATION! (@pikag0d)

ಅಯಾನ್ ಮುಖರ್ಜಿ ಅವರು ಈವರೆಗೆ ನಿರ್ದೇಶನ ಮಾಡಿದ್ದು ಕೇವಲ ಮೂರು ಚಿತ್ರವನ್ನು. ವಿಶೇಷ ಎಂದರೆ ಈ ಮೂರು ಸಿನಿಮಾಗಳನ್ನು ಅವರು ರಣಬೀರ್ ಕಪೂರ್ ಜೊತೆಯೇ ಮಾಡಿದ್ದಾರೆ. ‘ಬ್ರಹ್ಮಾಸ್ತ್ರ’ ಸೂಪರ್ ಹಿಟ್ ಆದ ಬಳಿಕ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ‘ವಾರ್’ ಸಿನಿಮಾಗೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೀಕ್ವೆಲ್​ ಆಫರ್ ಅಯಾನ್ ಮುಖರ್ಜಿ ಪಾಲಾಗಿದೆ.

ಇದನ್ನೂ ಓದಿ: ರಣಬೀರ್ ಕಪೂರ್ ಒಟ್ಟೂ ಆಸ್ತಿ ಎಷ್ಟು? ಎಲ್ಲಿಂದ ಬಂತು ಇಷ್ಟೊಂದು ಹಣ?

ಇನ್ನು ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಡಿಸೆಂಬರ್ 1ರಂದು ಸಿನಿಮಾ ರಿಲೀಸ್ ಆಗಲಿದೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ. ದೀಪಿಕಾ ಅವರು ‘ಫೈಟರ್’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?