AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ಏಕಾಏಕಿ ಟ್ವಿಟರ್​ನಿಂದ ಹೊರಹೋಗಲು ನಿರ್ಧರಿಸಿದ ಕರಣ್​ ಜೋಹರ್​; ಕಾರಣ ಏನು?

Karan Johar Twitter: ಕರಣ್​ ಜೋಹರ್​ ಅವರು ಟ್ವಿಟರ್​ ತೊರೆದಿರುವುದು ಕುತೂಹಲಕ್ಕೆ ಕಾರಣ ಆಗಿದೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.

Karan Johar: ಏಕಾಏಕಿ ಟ್ವಿಟರ್​ನಿಂದ ಹೊರಹೋಗಲು ನಿರ್ಧರಿಸಿದ ಕರಣ್​ ಜೋಹರ್​; ಕಾರಣ ಏನು?
ಕರಣ್ ಜೋಹರ್
TV9 Web
| Edited By: |

Updated on:Oct 11, 2022 | 7:18 AM

Share

ಸೆಲೆಬ್ರಿಟಿಗಳ ಪಾಲಿಗೆ ಟ್ವಿಟರ್​​ (Twitter) ಒಂದು ದೊಡ್ಡ ಮಾಧ್ಯಮ. ತಮ್ಮ ಸಿನಿಮಾಗಳ ಪ್ರಚಾರಕ್ಕೆ ಈ ವೇದಿಕೆಯನ್ನು ಅವರು ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ಕೂಡ ಟ್ವಿಟರ್​​ನಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುವವರು. ಆದರೆ ಏಕಾಏಕಿ ಅವರು ಟ್ವಿಟರ್​ (Karan Johar Twitter) ತೊರೆಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಪೋಸ್ಟ್​ ಮಾಡಿದ್ದಾರೆ. ಕರಣ್​ ಜೋಹರ್​ ಅವರ ಈ ನಿರ್ಧಾರದಿಂದ ಅನೇಕರಿಗೆ ಅಚ್ಚರಿ ಆಗಿದೆ. ನೆಗೆಟಿವಿಟಿಯಿಂದ ದೂರ ಇರಬೇಕು ಎಂಬ ಕಾರಣಕ್ಕಾಗಿ ಅವರು ಈ ರೀತಿ ಮಾಡುತ್ತಿದ್ದಾರೆ. ಮತ್ತೆ ಯಾವಾಗ ಅವರು ಟ್ವಿಟರ್​ಗೆ ಮರಳುತ್ತಾರೋ ಎಂಬ ಕೌತುಕ ಮೂಡಿದೆ.

ಬಾಲಿವುಡ್​ನಲ್ಲಿ ಕರಣ್​ ಜೋಹರ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಿರೂಪಕನಾಗಿ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಅನೇಕರಿಗೆ ಅವರೇ ಗಾಡ್​ ಫಾದರ್​. ಅನೇಕ ಹಿಟ್​ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಸ್ಟಾ​ರ್​ ಕಿಡ್​ಗಳನ್ನು ಲಾಂಚ್​ ಮಾಡಲು ಕರಣ್​ ಜೋಹರ್​ ಸದಾ ಮುಂದಿರುತ್ತಾರೆ. ಅವರು ಮಾಡುವ ಪ್ರತಿ ಟ್ವೀಟ್​ ಕೂಡ ಲಕ್ಷಾಂತರ ಜನರನ್ನು ತಲುಪುತ್ತದೆ. ಹಾಗಿದ್ದರೂ ಸಹ ಅವರು ಟ್ವಿಟರ್​ಗೆ ಗುಡ್​ಬೈ ಹೇಳಲು ತೀರ್ಮಾನಿಸಿದ್ದಾರೆ.

ಕರಣ್​ ಜೋಹರ್​ ನಿರ್ಮಾಣ ಮಾಡಿದ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಕಮಾಯಿ ಮಾಡಿತು. ಕೆಲವರು ಈ ಚಿತ್ರದ ಬಾಕ್ಸ್​ ಆಫೀಸ್​ ಗಳಿಕೆಯನ್ನು ಪ್ರಶ್ನೆ ಮಾಡಿದರು. ಇದರಿಂದ ಒಂದು ಬಗೆಯ ನೆಗೆಟಿವಿಟಿ ಹಬ್ಬಿದೆ. ಅದು ಕರಣ್​ ಜೋಹರ್​ ಅವರಿಗೆ ಹೆಚ್ಚು ಬೇಸರ ಉಂಟು ಮಾಡಿದಂತಿದೆ. ‘ನಾವು ವಿಮರ್ಶೆಯನ್ನು ಸ್ವೀಕರಿಸಲು ರೆಡಿ ಇದ್ದೇನೆ. ಆದರೆ ನೆಗೆಟಿವಿಟಿ ಸ್ವೀಕರಿಸುವುದು ಕಷ್ಟ’ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದರು. ಅದರ ಬೆನ್ನಲೇ ಅವರು ಟ್ವಿಟರ್​ನಿಂದ ಹೊರನಡೆದಿರುವುದು ಕುತೂಹಲಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

‘ಪಾಸಿಟಿವ್​ ಶಕ್ತಿಗಳಿಗೆ ಜಾಗ ಮಾಡಿಕೊಡುವ ಸಲುವಾಗಿ ಮೊದಲ ಹೆಜ್ಜೆ ಇಟ್ಟಿದ್ದೇನೆ. ಟ್ವಿಟರ್​ಗೆ ವಿದಾಯ’ ಎಂದು ಕರಣ್​ ಜೋಹರ್ ಅವರು ಪೋಸ್ಟ್​ ಮಾಡಿದ್ದಾರೆ. ಈ ಬಗ್ಗೆ ಜನರು ಬಗೆಬಗೆಯಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ‘ಇವರು ಈ ಅಕೌಂಟ್​ ಬಿಟ್ಟು, ಬೇರೊಂದು ಅಕೌಂಟ್​ ಮೂಲಕ ಟ್ವಿಟರ್​ನಲ್ಲೇ ಇರುತ್ತಾರೆ’ ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ. ‘ನಿಮ್ಮ ಮಾನಸಿಕ ಆರೋಗ್ಯ ಮತ್ತು ಬ್ರಹ್ಮಾಸ್ತ್ರ 2ನೇ ಪಾರ್ಟ್​ ಬಗ್ಗೆ ಗಮನ ಹರಿಸಿ’ ಎಂದು ಒಬ್ಬರು ಸಲಹೆ ನೀಡಿದ್ದಾರೆ. ‘ಯಾವುದೇ ಸೋಶಿಯಲ್​ ಮೀಡಿಯಾಗಿಂತ ಮನಸ್ಸಿನ ಶಾಂತಿ ತುಂಬ ಮುಖ್ಯ’ ಎಂದು ಕೂಡ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:18 am, Tue, 11 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್