AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ಏಕಾಏಕಿ ಟ್ವಿಟರ್​ನಿಂದ ಹೊರಹೋಗಲು ನಿರ್ಧರಿಸಿದ ಕರಣ್​ ಜೋಹರ್​; ಕಾರಣ ಏನು?

Karan Johar Twitter: ಕರಣ್​ ಜೋಹರ್​ ಅವರು ಟ್ವಿಟರ್​ ತೊರೆದಿರುವುದು ಕುತೂಹಲಕ್ಕೆ ಕಾರಣ ಆಗಿದೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.

Karan Johar: ಏಕಾಏಕಿ ಟ್ವಿಟರ್​ನಿಂದ ಹೊರಹೋಗಲು ನಿರ್ಧರಿಸಿದ ಕರಣ್​ ಜೋಹರ್​; ಕಾರಣ ಏನು?
ಕರಣ್ ಜೋಹರ್
TV9 Web
| Edited By: |

Updated on:Oct 11, 2022 | 7:18 AM

Share

ಸೆಲೆಬ್ರಿಟಿಗಳ ಪಾಲಿಗೆ ಟ್ವಿಟರ್​​ (Twitter) ಒಂದು ದೊಡ್ಡ ಮಾಧ್ಯಮ. ತಮ್ಮ ಸಿನಿಮಾಗಳ ಪ್ರಚಾರಕ್ಕೆ ಈ ವೇದಿಕೆಯನ್ನು ಅವರು ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ಕೂಡ ಟ್ವಿಟರ್​​ನಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುವವರು. ಆದರೆ ಏಕಾಏಕಿ ಅವರು ಟ್ವಿಟರ್​ (Karan Johar Twitter) ತೊರೆಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಪೋಸ್ಟ್​ ಮಾಡಿದ್ದಾರೆ. ಕರಣ್​ ಜೋಹರ್​ ಅವರ ಈ ನಿರ್ಧಾರದಿಂದ ಅನೇಕರಿಗೆ ಅಚ್ಚರಿ ಆಗಿದೆ. ನೆಗೆಟಿವಿಟಿಯಿಂದ ದೂರ ಇರಬೇಕು ಎಂಬ ಕಾರಣಕ್ಕಾಗಿ ಅವರು ಈ ರೀತಿ ಮಾಡುತ್ತಿದ್ದಾರೆ. ಮತ್ತೆ ಯಾವಾಗ ಅವರು ಟ್ವಿಟರ್​ಗೆ ಮರಳುತ್ತಾರೋ ಎಂಬ ಕೌತುಕ ಮೂಡಿದೆ.

ಬಾಲಿವುಡ್​ನಲ್ಲಿ ಕರಣ್​ ಜೋಹರ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಿರೂಪಕನಾಗಿ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಅನೇಕರಿಗೆ ಅವರೇ ಗಾಡ್​ ಫಾದರ್​. ಅನೇಕ ಹಿಟ್​ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಸ್ಟಾ​ರ್​ ಕಿಡ್​ಗಳನ್ನು ಲಾಂಚ್​ ಮಾಡಲು ಕರಣ್​ ಜೋಹರ್​ ಸದಾ ಮುಂದಿರುತ್ತಾರೆ. ಅವರು ಮಾಡುವ ಪ್ರತಿ ಟ್ವೀಟ್​ ಕೂಡ ಲಕ್ಷಾಂತರ ಜನರನ್ನು ತಲುಪುತ್ತದೆ. ಹಾಗಿದ್ದರೂ ಸಹ ಅವರು ಟ್ವಿಟರ್​ಗೆ ಗುಡ್​ಬೈ ಹೇಳಲು ತೀರ್ಮಾನಿಸಿದ್ದಾರೆ.

ಕರಣ್​ ಜೋಹರ್​ ನಿರ್ಮಾಣ ಮಾಡಿದ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಕಮಾಯಿ ಮಾಡಿತು. ಕೆಲವರು ಈ ಚಿತ್ರದ ಬಾಕ್ಸ್​ ಆಫೀಸ್​ ಗಳಿಕೆಯನ್ನು ಪ್ರಶ್ನೆ ಮಾಡಿದರು. ಇದರಿಂದ ಒಂದು ಬಗೆಯ ನೆಗೆಟಿವಿಟಿ ಹಬ್ಬಿದೆ. ಅದು ಕರಣ್​ ಜೋಹರ್​ ಅವರಿಗೆ ಹೆಚ್ಚು ಬೇಸರ ಉಂಟು ಮಾಡಿದಂತಿದೆ. ‘ನಾವು ವಿಮರ್ಶೆಯನ್ನು ಸ್ವೀಕರಿಸಲು ರೆಡಿ ಇದ್ದೇನೆ. ಆದರೆ ನೆಗೆಟಿವಿಟಿ ಸ್ವೀಕರಿಸುವುದು ಕಷ್ಟ’ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದರು. ಅದರ ಬೆನ್ನಲೇ ಅವರು ಟ್ವಿಟರ್​ನಿಂದ ಹೊರನಡೆದಿರುವುದು ಕುತೂಹಲಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

‘ಪಾಸಿಟಿವ್​ ಶಕ್ತಿಗಳಿಗೆ ಜಾಗ ಮಾಡಿಕೊಡುವ ಸಲುವಾಗಿ ಮೊದಲ ಹೆಜ್ಜೆ ಇಟ್ಟಿದ್ದೇನೆ. ಟ್ವಿಟರ್​ಗೆ ವಿದಾಯ’ ಎಂದು ಕರಣ್​ ಜೋಹರ್ ಅವರು ಪೋಸ್ಟ್​ ಮಾಡಿದ್ದಾರೆ. ಈ ಬಗ್ಗೆ ಜನರು ಬಗೆಬಗೆಯಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ‘ಇವರು ಈ ಅಕೌಂಟ್​ ಬಿಟ್ಟು, ಬೇರೊಂದು ಅಕೌಂಟ್​ ಮೂಲಕ ಟ್ವಿಟರ್​ನಲ್ಲೇ ಇರುತ್ತಾರೆ’ ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ. ‘ನಿಮ್ಮ ಮಾನಸಿಕ ಆರೋಗ್ಯ ಮತ್ತು ಬ್ರಹ್ಮಾಸ್ತ್ರ 2ನೇ ಪಾರ್ಟ್​ ಬಗ್ಗೆ ಗಮನ ಹರಿಸಿ’ ಎಂದು ಒಬ್ಬರು ಸಲಹೆ ನೀಡಿದ್ದಾರೆ. ‘ಯಾವುದೇ ಸೋಶಿಯಲ್​ ಮೀಡಿಯಾಗಿಂತ ಮನಸ್ಸಿನ ಶಾಂತಿ ತುಂಬ ಮುಖ್ಯ’ ಎಂದು ಕೂಡ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:18 am, Tue, 11 October 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?