AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?

Brahmastra Part 1 Shiva: ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ರಣಬೀರ್​ ಕಪೂರ್​, ಆಲಿಯಾ ಭಟ್, ಅಮಿತಾಭ್​ ಬಚ್ಚನ್​, ಮೌನಿ ರಾಯ್​, ಅಕ್ಕಿನೇನಿ ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಇದರ ಟ್ರೇಲರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
ರಣಬೀರ್ ಕಪೂರ್
TV9 Web
| Edited By: |

Updated on:Jun 15, 2022 | 1:20 PM

Share

ಹಿಂದಿ ಪ್ರೇಕ್ಷಕರು ‘ಬ್ರಹ್ಮಾಸ್ತ್ರ’ (Brahmastra Part 1: Shiva) ಸಿನಿಮಾಗಾಗಿ ಕಾದಿದ್ದಾರೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೇಲರ್​ ಇಂದು (ಜೂನ್​ 15) ಬಿಡುಗಡೆ ಆಗಿದೆ. ಸಿನಿಮಾದ ಕಥೆ ಏನು ಎಂಬುದರ ಸುಳಿವನ್ನು ಈ ಟ್ರೇಲರ್​ನಲ್ಲಿ ಬಿಟ್ಟುಕೊಡಲಾಗಿದೆ. ನಟ ರಣಬೀರ್​ ಕಪೂರ್​ (Ranbir Kapoor) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ಜೋಡಿ ಆಗಿರುವುದು ಖ್ಯಾತ ನಟಿ ಆಲಿಯಾ ಭಟ್​ (Alia Bhatt). ಇವರಿಬ್ಬರು ರಿಯಲ್​ ಲೈಫ್​ನಲ್ಲಿ ದಂಪತಿಗಳಾಗಿರುವುದರಿಂದ ಪ್ರೇಕ್ಷಕರಿಗೆ ಈ ಕಾಂಬಿನೇಷನ್​ ಹೆಚ್ಚು ಇಷ್ಟವಾಗುತ್ತಿದೆ. ಅಯಾನ್​ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಸ್ಟಾರ್​ ಸ್ಟುಡಿಯೋ’, ‘ಧರ್ಮ ಪ್ರೊಡಕ್ಷನ್ಸ್​’, ‘ಪ್ರೈಂ ಫೋಕಸ್​’ ಮತ್ತು ‘ಸ್ಟಾರ್​ ಲೈಟ್​ ಪಿಕ್ಚರ್ಸ್​’ ಸಂಸ್ಥೆಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿವೆ. ಸದ್ಯ ಬಿಡುಗಡೆ ಆಗಿರುವ ಟ್ರೇಲರ್​ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದೊಂದು ಫ್ಯಾಂಟಸಿ ಸಿನಿಮಾ. ಅತಿಮಾನುಷ ಶಕ್ತಿ ಹೊಂದಿರುವ ಶಿವ ಎಂಬ ವ್ಯಕ್ತಿಯಾಗಿ ರಣಬೀರ್​ ಕಪೂರ್​ ಕಾಣಿಸಿಕೊಳ್ಳಲಿದ್ದಾರೆ. ಬೆಂಕಿಯ ಜೊತೆ ಶಿವನಿಗೆ ಒಂದು ವಿಶೇಷವಾದ ಕನೆಕ್ಷನ್​ ಇದೆ. ಆತನನ್ನು ಬೆಂಕಿ ಸುಡುವುದಿಲ್ಲ. ಹಾಗಾದರೆ ಅವನ ಹಿನ್ನೆಲೆ ಏನು? ಇಂಥ ಶಕ್ತಿ ಆತನಿಗೆ ಬಂದಿದ್ದು ಹೇಗೆ? ಅವನ ಹಿಂದೆ ದುಷ್ಟಶಕ್ತಿಗಳು ಯಾಕೆ ಬೆನ್ನುಬಿದ್ದಿವೆ ಎಂಬಿತ್ಯಾದಿ ಕೌತುಕದ ಪ್ರಶ್ನೆಗಳನ್ನು ಮೂಡಿಸುವಲ್ಲಿ ಈ ‘ಬ್ರಹ್ಮಾಸ್ತ್ರ’ ಟ್ರೇಲರ್ ಯಶಸ್ವಿ ಆಗಿದೆ.

‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣಬೀರ್​ ಕಪೂರ್​, ಆಲಿಯಾ ಭಟ್​ ಮಾತ್ರವಲ್ಲದೇ ಅಮಿತಾಭ್​ ಬಚ್ಚನ್​, ಮೌನಿ ರಾಯ್​, ಅಕ್ಕಿನೇನಿ ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಶಾರುಖ್​ ಖಾನ್​ ಅವರು ಕಾಣಿಸಿಕೊಳ್ಳಲಿರುವುದು ವಿಶೇಷ. ಇಡೀ ಟ್ರೇಲರ್​ನಲ್ಲಿ ಗ್ರಾಫಿಕ್ಸ್​ ದೃಶ್ಯಗಳು ಹೈಲೈಟ್​ ಆಗಿವೆ. ಅದನ್ನು ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ
Image
ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?
Image
‘ರಣಬೀರ್​-ಆಲಿಯಾ ಒಟ್ಟಾಗಿ ನನ್ನ ಸಿನಿಮಾವನ್ನು ಹಾಳು ಮಾಡುತ್ತಿದ್ದಾರೆ ಅನಿಸುತ್ತಿತ್ತು; ‘ಬ್ರಹ್ಮಾಸ್ತ್ರ’ ನಿರ್ದೇಶಕ 
Image
ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​
Image
Ranbir Kapoor: ಅಂಗಾಂಗ ದಾನ ಮಾಡಲು ನಿರ್ಧರಿಸಿದ ಬ್ರಹ್ಮಾಸ್ತ್ರ ಚಿತ್ರತಂಡ

ಸೆಪ್ಟೆಂಬರ್​ 9ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗಲಿದೆ. ಮೂರು ಪಾರ್ಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ ಪಾರ್ಟ್​ 1: ಶಿವ’ ಎಂದು ಶೀರ್ಷಿಕೆ ಇಡಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಇದು ರಿಲೀಸ್​ ಆಗಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಮುಂತಾದ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:20 pm, Wed, 15 June 22

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?