AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆದ ಮೂರೇ ದಿನಕ್ಕೆ ಉಚಿತ ಟಿಕೆಟ್ ಆಫರ್ ಘೋಷಿಸಿದ ‘ದಿ ವ್ಯಾಕ್ಸಿನ್ ವಾರ್’

The Vaccine War: 'ದಿ ವ್ಯಾಕ್ಸಿನ್ ವಾರ್' ಸಿನಿಮಾ ಬಿಡುಗಡೆ ಆದಂದಿನಿಂದಲೂ ಬಾಕ್ಸ್ ಆಫೀಸ್​ನಲ್ಲಿ ಕುಟುಂತ್ತಲೇ ಸಾಗುತ್ತಿದೆ. ಸಿನಿಮಾಕ್ಕೆ ಪ್ರಚಾರ ನೀಡುವ ಉದ್ದೇಶದಿಂದ ಉಚಿತ ಟಿಕೆಟ್ ಆಫರ್ ಘೋಷಿಸಲಾಗಿದೆ.

ಬಿಡುಗಡೆ ಆದ ಮೂರೇ ದಿನಕ್ಕೆ ಉಚಿತ ಟಿಕೆಟ್ ಆಫರ್ ಘೋಷಿಸಿದ 'ದಿ ವ್ಯಾಕ್ಸಿನ್ ವಾರ್'
ದಿ ವ್ಯಾಕ್ಸಿನ್ ವಾರ್
ಮಂಜುನಾಥ ಸಿ.
|

Updated on: Oct 01, 2023 | 6:41 PM

Share

ದಿ ಕಾಶ್ಮೀರ್ ಫೈಲ್ಸ್‘ (The Kashmir Files) ಸಿನಿಮಾ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ‘ದಿ ವ್ಯಾಕ್ಸಿನ್ ವಾರ್’ ಹೆಸರಿನ ಹೊಸ ಸಿನಿಮಾ ನಿರ್ದೇಶನ ಮಾಡಿದ್ದು, ಸಿನಿಮಾ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಆದರೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರೀತಿಯಲ್ಲಿ ದೊಡ್ಡ ಜಯವಿರಲಿ ಸಾಮಾನ್ಯ ಯಶಸ್ಸು ಸಹ ಸಿನಿಮಾಕ್ಕೆ ಕಷ್ಟವಾಗಿದೆ. ಇದೇ ಕಾರಣಕ್ಕೆ ಸಿನಿಮಾವನ್ನು ಗೆಲ್ಲಿಸಿಕೊಳ್ಳಲು ವಿವಿಧ ಪ್ರಯತ್ನಗಳನ್ನು ವಿವೇಕ್ ಅಗ್ನಿಹೋತ್ರಿ ಮಾಡುತ್ತಿದ್ದು, ಉಚಿತ ಟಿಕೆಟ್ ಆಫರ್ ಅನ್ನು ಸಹ ನೀಡುತ್ತಿದ್ದಾರೆ.

ಹೌದು, ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಒಂದು ಟಿಕೆಟ್ ಖರೀದಿ ಮಾಡಿದರೆ ಒಂದು ಟಿಕೆಟ್ ಉಚಿತವಾಗಿ ಸಿಗಲಿದೆ. ಅಲ್ಲಿಗೆ ಒಂದು ಟಿಕೆಟ್ ಬೆಲೆಯಲ್ಲಿ ಇಬ್ಬರು ಸಿನಿಮಾ ನೋಡಬಹುದಾಗಿದೆ. ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿವೇಕ್ ಅಗ್ನಿಹೋತ್ರಿ, ”ಇಂದು ಭಾನುವಾರ ಹಾಗೂ ಗಾಂಧಿ ಜಯಂತಿಯಂತೆ ನೀವು ನಿಮ್ಮ ಕುಟುಂಬದವರೊಡನೆ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ವೀಕ್ಷಿಸಿ. ಈ ಎರಡು ದಿನ ಒಂದು ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್ ಉಚಿತವಿದ್ದು, ಆ ಉಚಿತ ಟಿಕೆಟ್ ಅನ್ನು ನಿಮ್ಮ ಮನೆಯ ಕೆಲಸದಾಕೆ ಅಥವಾ ಯಾವುದೇ ಮಹಿಳೆ ಅಥವಾ ಯುವತಿಗೆ ನೀಡಿ ನೀವು ಖುಷಿಯಾಗಿ, ಅವರಿಗೂ ಸಂತಸ ನೀಡಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:‘ನಾನು ನಕ್ಸಲ್ ಆಗಿದ್ದೆ’; ಕರಾಳ ಸತ್ಯ ಬಿಚ್ಚಿಟ್ಟ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಅಸಲಿಗೆ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ತೆವಳುತ್ತಿದೆ. ಸೆಪ್ಟೆಂಬರ್ 28ರಂದು ಬಿಡುಗಡೆ ಆದ ಈ ಸಿನಿಮಾ ಮೊದಲ ದಿನ ಭಾರತದಲ್ಲಿ ಗಳಿಸಿದ್ದು ಕೇವಲ 85 ಲಕ್ಷ. ವಿಶ್ವದಾದ್ಯಂತ ಸುಮಾರು 1.30 ಕೋಟಿ ಹಣವನ್ನಷ್ಟೆ ಗಳಿಸಿತು. ಇದೀಗ ಬಿಡುಗಡೆ ಆದ ಮೂರು ದಿನಗಳಲ್ಲಿ ಸಿನಿಮಾವು ವಿಶ್ವದಾದ್ಯಂತ 3.25 ಕೋಟಿ ಹಣ ಗಳಿಸಿದೆ. ಸಿನಿಮಾದ ಒಟ್ಟು ಬಜೆಟ್ 10 ಕೋಟಿ ಆಗಿದ್ದು, ಹಾಕಿರುವ ಬಜೆಟ್ ಅನ್ನು ವಾಪಸ್ ಪಡೆಯುವುದು ಸಹ ಕಷ್ಟವಾಗಿ ಪರಿಣಮಿಸಿದೆ. ಹಾಗಾಗಿ ಈ ಉಚಿತ ಟಿಕೆಟ್ ಘೋಷಣೆ ಮಾಡಿ ಹೆಚ್ಚು ಜನರನ್ನು ಚಿತ್ರಮಂದಿರಕ್ಕೆ ಸೆಳೆಯುವ ಪ್ರಯತ್ನ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾಕ್ಕೂ ಇದೇ ರೀತಿಯ ಆಫರ್ ಅನ್ನು ನೀಡಲಾಗಿತ್ತು. ‘ಜವಾನ್’ ಸಿನಿಮಾವು 1000 ಕೋಟಿ ಕಲೆಕ್ಷನ್ ಮಾಡಿದ ಬೆನ್ನಲ್ಲೆ ಒಂದು ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್ ಉಚಿತ ಘೋಷಣೆ ಮಾಡಲಾಯ್ತು. ಈ ಯೋಜನೆ ‘ಜವಾನ್’ ಸಿನಿಮಾಕ್ಕೆ ವರ್ಕೌಟ್ ಆಯ್ತು. ಬೈ ಒನ್ ಗೆಟ್ ಒನ್ ಆಫರ್​ನಲ್ಲಿ ಹಲವರು ‘ಜವಾನ್’ ಸಿನಿಮಾ ವೀಕ್ಷಿಸಿದ್ದರು. ಈಗ ಇದೇ ಆಫರ್ ಅನ್ನು ‘ದಿ ವ್ಯಾಕ್ಸಿನ್ ವಾರ್’ ತಂಡ ಬಿಡುಗಡೆ ಮಾಡಿದೆ ಆದರೆ ಇದು ವರ್ಕೌಟ್ ಆಗುತ್ತದೆಯೇ ಕಾದು ನೋಡಬೇಕಿದೆ.

ಇನ್ನು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾವು ಭಾರತದ ವ್ಯಾಕ್ಸಿನ್ ನಿರ್ಮಾಣದ ಕತೆಯನ್ನು ಒಳಗೊಂಡಿದೆ. ಭಾರತದ ವಿಜ್ಞಾನಿಗಳ ತಂಡ ವ್ಯಾಕ್ಸಿನ್ ತಯಾರಿಗೆ ಎಷ್ಟೆಲ್ಲ ಕಷ್ಟಪಡಬೇಕಾಯ್ತು, ಭಾರತದ ಮಹಿಳಾ ವಿಜ್ಞಾನಿಗಳು ವ್ಯಾಕ್ಸಿನ್ ನಿರ್ಮಾಣದಲ್ಲಿ ವಹಿಸಿದ ಪಾತ್ರವೇನು? ವ್ಯಾಕ್ಸಿನ್ ತಯಾರಿಗೆ ವಿಲನ್ ಆಗಿ ನಿಂತಿದ್ದವರು ಯಾರು? ಇನ್ನೂ ಹಲವು ವಿಷಯಗಳನ್ನು ಈ ಸಿನಿಮಾದ ಕತೆ ಒಳಗೊಂಡಿದೆ. ಸಿನಿಮಾದಲ್ಲಿ ನಾನಾ ಪಟೇಕರ್, ಪಲ್ಲವಿ ಜೋಶಿ, ಕನ್ನಡತಿ ಸಪ್ತಮಿ ಗೌಡ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?