AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಬಾಲಕಿ ಈಗ ಸ್ಟಾರ್ ನಟಿ? ಹಿಂಟ್: ಸುದೀಪ್ ಜೊತೆಯೂ ನಟಿಸಿದ್ದಾರೆ

ಈ ಪುಟ್ಟ ಹುಡುಗಿ ಈಗ ಬಾಲಿವುಡ್​ನ ಸ್ಟಾರ್ ನಟಿ ಯಾರೆಂದು ಗುರುತಿಸಬಲ್ಲಿರಾ? ನಟಿಯಾಗಿ ಹೆಸರು ಮಾಡಿರುವ ಜೊತೆಗೆ ವಿವಾದಗಳಿಂದಲೂ ಅಷ್ಟೆ ಸುದ್ದಿಯಾಗಿದ್ದಾರೆ ಈ ನಟಿ. ಈಕೆಯ ಮೇಲೆ ಇಡಿ, ಸಿಬಿಐ ಕೇಸುಗಳು ಸಹ ಇವೆ.

ಈ ಫೋಟೋದಲ್ಲಿರೋ ಬಾಲಕಿ ಈಗ ಸ್ಟಾರ್ ನಟಿ? ಹಿಂಟ್: ಸುದೀಪ್ ಜೊತೆಯೂ ನಟಿಸಿದ್ದಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 11, 2024 | 3:53 PM

Share

ಬಾಲ್ಯದ ಫೋಟೋಗಳನ್ನು ಕಂಡರೆ ಫ್ಯಾನ್ಸ್​ಗೆ ಎಲ್ಲಿಲ್ಲದ ಖುಷಿ. ಈ ರೀತಿಯ ಫೋಟೋಗಳಿಗಾಗಿ ಫ್ಯಾನ್ಸ್ ಕಾಯುತ್ತಾ ಇರುತ್ತಾರೆ. ಈಗ ಸ್ಟಾರ್ ನಟಿಯ ಫೋಟೋ ಒಂದು ಅವರ ಜನ್ಮದಿನದ ಪ್ರಯುಕ್ತ ವೈರಲ್ ಆಗಿದೆ. ಅವರು ಶ್ರೀಲಂಕಾದಲ್ಲಿ ಹುಟ್ಟಿ ಬೆಳೆದಿದ್ದು. ಆ ಬಳಿಕ ಭಾರತಕ್ಕೆ ಬಂದು ಸೆಟಲ್ ಆದರು. ವಿವಾದಗಳ ಮೂಲಕವೂ ಅವರು ಆಗಾಗ ಸುದ್ದಿ ಆಗುತ್ತಾರೆ. ಹಾಗಾದರೆ ಅವರು ಯಾರು ಎಂಬುದನ್ನು ಪತ್ತೆ ಹಚ್ಚುತ್ತೀರಾ? ಅವರು ಬೇರಾರೂ ಅಲ್ಲ ನಟಿ ಜಾಕ್ವೆಲಿನ್ ಫರ್ನಾಂಡಿಸ್.

ಜಾಕ್ವೆಲಿನ್ ಅವರಿಗೆ ಇಂದು (ಆಗಸ್ಟ್ 11) ಜನ್ಮದಿನ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ಅವರನ್ನು 7 ಕೋಟಿ ಮಂದಿ ಫಾಲೋ ಮಾಡುತ್ತಾರೆ. ಇಷ್ಟೊಂದು ಖ್ಯಾತಿ ಸಿಗೋದು ಅಷ್ಟು ಸುಲಭದ ಮಾತಲ್ಲ. ಇವರು ಹುಟ್ಟಿದ್ದು ಬಹ್ರೇನ್ನಲ್ಲಿ. ಆ ಬಳಿಕ ಬೆಳೆದು ದೊಡ್ಡವರಾಗಿದ್ದು, ಅವರ ನಾಗರಿಕತ್ವ ಇರೋದು ಶ್ರೀಲಂಕಾದಲ್ಲಿ. ಅವರು 1985ರ ಆಗಸ್ಟ್ 11ರಂದು ಜನಿಸಿದರು. ಈ ವರೆಗೆ ಅವರು ಮದುವೆ ಬಗ್ಗೆ ಆಲೋಚನೆ ಮಾಡಿಲ್ಲ. ಈಗ ಅವರಿಗೆ 39 ವರ್ಷ ವಯಸ್ಸು.

2009ರಲ್ಲಿ ರಿಲೀಸ್ ಆದ ‘ಅಲಾದಿನ್’ ಹೆಸರಿನ ಸಿನಿಮಾ ಮೂಲಕ ಜಾಕ್ವೆಲಿನ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರಿಗೆ ಸ್ಪೆಷಲ್ ಡ್ಯಾನ್ಸ್ಗಳಲ್ಲಿ ನಟಿಸೋ ಆಫರ್ಗಳು ಸಿಗೋಕೆ ಆರಂಭಿಸಿದವು. 2022ರಲ್ಲಿ ರಿಲೀಸ್ ಆದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಡ್ಯಾನ್ಸ್ ಮಾಡುವುದರ ಜೊತೆಗೆ ಕೆಲ ದೃಶ್ಯಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ವರ್ಷ ಅವರ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗುತ್ತಿಲ್ಲ.

ಇದನ್ನೂ ಓದಿ:‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಮತ್ತೆ ಇಡಿ ವಿಚಾರಣೆ

ಜಾಕ್ವೆಲಿನ್ ವಿವಾದಗಳಿಂದ ದೂರ ಇರಲು ಬಯಸುತ್ತಾರೆ. ಆದರೆ, ವಿವಾದಗಳು ಅವರನ್ನು ಹುಡುಕಿ ಬರುತ್ತವೆ. ಇತ್ತೀಚೆಗೆ ಜಾಕ್ವೆಲಿನ್ ಅವರು ಸುಕೇಶ್ ಚಂದ್ರಶೇಖರ್ ಜೊತೆಗಿನ ಸಂಬಂಧದ ಕಾರಣಕ್ಕೆ ಸುದ್ದಿ ಆಗಿದ್ದಾರೆ. ಈತ 200 ಕೋಟಿ ರೂಪಾಯಿ ವಂಚನೆಯಲ್ಲಿ ಅರೆಸ್ಟ್ ಆಗಿದ್ದಾನೆ. ಜೊತೆಗೆ ಜಾಕ್ವೆಲಿನ್ ಜೊತೆ ಕಳೆದ ಆಪ್ತ ಕ್ಷಣಗಳ ಫೋಟೋ ವೈರಲ್ ಮಾಡಿದ್ದಾನೆ. ಅವರಿಗೆ ದುಬಾರಿ ವಸ್ತುಗಳನ್ನು ಸುಕೇಶ್ ಗಿಫ್ಟ್ ಮಾಡಿದ್ದ. ಇದು ಜಾಕ್ವೆಲಿನ್ಗೆ ಮುಳುವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sun, 11 August 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ