AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಕಾನ್ ಚಿತ್ರೋತ್ಸವದಲ್ಲಿ ಮುದ್ದು ಮುದ್ದಾಗಿ ಕಾಣಿಸಿಕೊಂಡ ನಟಿ ಅನುಷ್ಕಾ ಶರ್ಮಾ; ಕೊಹ್ಲಿ ರಿಯಾಕ್ಷನ್ ಏನು?

ಅನುಷ್ಕಾ ಶರ್ಮಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕಾನ್​ ಚಿತ್ರೋತ್ಸವದ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

Anushka Sharma: ಕಾನ್ ಚಿತ್ರೋತ್ಸವದಲ್ಲಿ ಮುದ್ದು ಮುದ್ದಾಗಿ ಕಾಣಿಸಿಕೊಂಡ ನಟಿ ಅನುಷ್ಕಾ ಶರ್ಮಾ; ಕೊಹ್ಲಿ ರಿಯಾಕ್ಷನ್ ಏನು?
ಅನುಷ್ಕಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on: May 27, 2023 | 8:13 AM

Share

ಫ್ರಾನ್ಸ್​ನಲ್ಲಿ ಕಾನ್ ಸಿನಿಮೋತ್ಸವಕ್ಕೆ ಇಂದು (ಮೇ 27) ತೆರೆ ಬೀಳಲಿದೆ. ಈ ಬಾರಿ ಹಲವು ದೇಶಗಳಿಂದ ಸೆಲೆಬ್ರಿಟಿಗಳು ಬಂದು ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. 2023ನೇ ಸಾಲಿನ ಕಾನ್ ಸಿನಿಮೋತ್ಸವ (Cannes Film Festival) ಮೇ 16ರಿಂದ ಆರಂಭ ಆಗಿತ್ತು. ಮೇ 26ರಂದು ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದಲ್ಲಿ ಕೆಂಪು ಹಾಸಿನ ಮೇಲೆ ನಡೆದು ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿದ್ದಾರೆ.

ಈ ವರ್ಷ ಭಾರತದ ಅನೇಕ ಸೆಲೆಬ್ರಿಟಿಗಳು ಕಾನ್​ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ, ಸಾರಾ ಅಲಿ ಖಾನ್ ಸೇರಿದಂತೆ ಅನೇಕ ಭಾರತದ ಸೆಲೆಬ್ರಿಟಿಗಳು ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. ಅದೇ ರೀತಿ ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ಅನುಷ್ಕಾ ಶರ್ಮಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಕೊಹ್ಲಿ ಕೆಂಪು ಹಾರ್ಟ್ ಹಾಗೂ ಕಣ್ಣಿನಲ್ಲಿ ಹಾರ್ಟ್ ಇರುವ ಎಮೋಜಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅನುಷ್ಕಾ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಅನೇಕರು ಬರೆದುಕೊಂಡಿದ್ದಾರೆ. ಸದ್ಯ ಕೊಹ್ಲಿ ಅವರು ಟೆಸ್ಟ್​ ಚಾಂಪಿಯನ್​ಶಿಪ್​ಗಾಗಿ ಇಂಗ್ಲೆಂಡ್​ಗೆ ತೆರಳಿದ್ದಾರೆ.

ಇದನ್ನೂ ಓದಿ: Cannes: ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಮಿಂಚಿದ ಕನ್ನಡದ ನಟಿ ಇತಿ ಆಚಾರ್ಯ

ಕಾನ್ ಚಿತ್ರೋತ್ಸವ ಪ್ರತಿವರ್ಷದಂತೆ ಫ್ರಾನ್ಸ್​ನಲ್ಲಿ ನಡೆದಿದೆ. ಈ ಮೊದಲು ಶರ್ಮಿಳಾ ಠಾಗೋರ್, ಐಶ್ವರ್ಯಾ ರೈ, ವಿದ್ಯಾ ಬಾಲನ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ, ಸೋನಂ ಕಪೂರ್, ಅದಿತಿ ರಾವ್ ಹೈದರಿ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿ ಕೆಂಪು ಹಾಸಿನ ಮೇಲೆ ನಡೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!