AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆತ್ತಲೆ ಫೋಟೋಶೂಟ್ ಪ್ರಕರಣ; ರಣವೀರ್ ಸಿಂಗ್​ಗೆ ಎದುರಾಯ್ತು ದೊಡ್ಡ ಕಂಟಕ

ರಣವೀರ್ ಸಿಂಗ್ ಅವರು ಸದಾ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲು ಇಷ್ಟಪಡುತ್ತಾರೆ. ಆದರೆ, ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಬೆತ್ತಲೆ ಫೋಟೋಶೂಟ್ ಪ್ರಕರಣ; ರಣವೀರ್ ಸಿಂಗ್​ಗೆ ಎದುರಾಯ್ತು ದೊಡ್ಡ ಕಂಟಕ
ರಣವೀರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 25, 2022 | 5:25 PM

Share

ನಟ ರಣವೀರ್ ಸಿಂಗ್ (Ranveer Singh) ಅವರು ಇತ್ತೀಚೆಗೆ ಬೆತ್ತಲೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಶೂಟ್​ ವೇಳೆ ಅವರು ದೇಹದ ಮೇಲೆ ಯಾವುದೇ ಬಟ್ಟೆ ಧರಿಸಿರಲಿಲ್ಲ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ರಣವೀರ್ ಸಿಂಗ್ ಅವರ ವಿರುದ್ಧ ಸಾಕಷ್ಟು ಜನರು ಹರಿಹಾಯ್ದಿದ್ದರು. ಕೆಲವರು ಅವರನ್ನು ಬೆಂಬಲಿಸಿದ್ದರು. ಈಗ ಈ ಫೋಟೋಶೂಟ್​ನಿಂದ ರಣವೀರ್ ಸಿಂಗ್​ ಇಕ್ಕಟ್ಟಿಗೆ ಸಿಲುಕಿದ್ದಾರೆ. ಅವರ ವಿರುದ್ಧ ಎನ್​ಜಿಒ ಸಂಸ್ಥೆಯೊಂದು ದೂರು ನೀಡಿದೆ. ರಣವೀರ್ ಸಿಂಗ್ ಅವರ ಈ ಫೋಟೋಶೂಟ್​ನಿಂದ ಸಮಾಜದ ಸ್ವಾಸ್ಥ್ಯ ಹಾಳಾಗಿದೆ ಎಂದು ಎನ್​ಜಿಒನವರು ಆರೋಪಿಸಿದ್ದಾರೆ.

ರಣವೀರ್ ಸಿಂಗ್ ಅವರು ಸದಾ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲು ಇಷ್ಟಪಡುತ್ತಾರೆ. ಈ ಮೊದಲು ಚಿತ್ರ ವಿಚಿತ್ರ ಬಟ್ಟೆ ಧರಿಸಿ ಅವರು ಪಬ್ಲಿಕ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ಫೋಟೋಶೂಟ್​ನಿಂದ ಅನೇಕರು ಮುಜುಗರಕ್ಕೆ ಒಳಗಾಗಿದ್ದರು. ಇನ್ನೂ ಕೆಲವರು ರಣವೀರ್ ಸಿಂಗ್ ತೆಗೆದುಕೊಂಡ ಬೋಲ್ಡ್​ ಸ್ಟೆಪ್​ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ಈಗ ಈ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲು ಏರಿದೆ.

ಇದನ್ನೂ ಓದಿ
Image
Ranveer Singh: ಸಂಪೂರ್ಣ ಬೆತ್ತಲಾದ ರಣವೀರ್​ ಸಿಂಗ್​; ದೀಪಿಕಾ ಪಡುಕೋಣೆ ಪತಿಯ ಹಲವು ಫೋಟೋ ವೈರಲ್​
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Ranveer Singh: ರಣವೀರ್​ ಸಿಂಗ್​ ಒಟ್ಟು ಆಸ್ತಿ ಎಷ್ಟು? 2 ಸಿನಿಮಾ ಸೋತ ಮಾತ್ರಕ್ಕೆ ಕರಗಿಲ್ಲ ಸ್ಟಾರ್​ ನಟನ ನೂರಾರು ಕೋಟಿ ಸಂಪತ್ತು
Image
ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ರಣವೀರ್​ ಸಿಂಗ್​ ಹೊಸ ಸಿನಿಮಾ ಲೀಕ್​; ‘ಜಯೇಶ್​ಭಾಯ್​’ಗೆ 2 ಆಘಾತ

ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಷನ್​ ಈ ಬಗ್ಗೆ ದೂರು ದಾಖಲು ಮಾಡಿದೆ. ರಣವೀರ್ ಸಿಂಗ್ ಅವರು ಬೆತ್ತಲೆ ಫೋಟೋಶೂಟ್ ಮಾಡಿಸಿದ್ದರಿಂದ ಮಹಿಳೆಯರ ಭಾವನೆಗೆ ಧಕ್ಕೆ ಆಗಿದೆ ಎಂದು ಈ ಎನ್​ಜಿಒ ಸಂಸ್ಥೆಯವರು ದೂರಿನಲ್ಲಿ ಹೇಳಿದ್ದಾರೆ. ‘ನಾವು ವಾಕ್​ ಸ್ವಾತಂತ್ರ್ಯ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುತ್ತೇವೆ. ಆದರೆ, ಬೆತ್ತಲೆ ಫೋಟೋಗಳನ್ನು ಹಾಕುವುದನ್ನು ನಾವು ಖಂಡಿಸುತ್ತೇವೆ’ ಎಂದು ದೂರಿನಲ್ಲಿ ಹೇಳಲಾಗಿದೆ.

‘ನಟರನ್ನು ಭಾರತದಲ್ಲಿ ಹೀರೋಗಳು ಎಂದು ಕರೆಯಲಾಗುತ್ತದೆ. ಸಾಕಷ್ಟು ಮಂದಿ ಅವರನ್ನು ಹಿಂಬಾಲಿಸುತ್ತಾರೆ. ನಟರನ್ನು ಆರಾಧಿಸುವವರೂ ಇದ್ದಾರೆ. ಆದರೆ ರಣವೀರ್ ಸಿಂಗ್ ಅವರಂತಹ ನಟರು ಚೀಪ್ ಪಬ್ಲಿಸಿಟಿಗಾಗಿ ಈ ರೀತಿ ಬೆತ್ತಲೆ ಫೋಟೋಶೂಟ್ ಮಾಡಿಸುತ್ತಾರೆ. ಇದನ್ನು ಖಂಡಿಸಬೇಕು. ಈ ರೀತಿಯ ಫೋಟೋಗಳಿಂದ ಸಮಾಜವೇ ತಲೆಬಗ್ಗಿಸುವಂತಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರುದಾರರು ಕೋರಿದ್ದಾರೆ.

ರಣವೀರ್ ಸಿಂಗ್ ಪರವಾಗಿ ಅನೇಕ ಸೆಲೆಬ್ರಿಟಿಗಳು ಧ್ವನಿ ಎತ್ತಿದ್ದರು. ಅವರು ಮಾಡಿದ್ದ ಫೋಟೋಶೂಟ್ ಸರಿ ಎಂದು ಅನೇಕರು ಹೊಗಳಿದ್ದರು. ಆದರೆ, ಈಗ ಈ ದೂರಿನಿಂದ ಅವರಿಗೆ ಸಂಕಷ್ಟ ಎದುರಾಗಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ