AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBFC: ‘72 ಹೂರೇ’ಚಿತ್ರದ ಟ್ರೇಲರ್​ಗೆ ಪ್ರಮಾಣಪತ್ರ ನೀಡಲು ಸೆನ್ಸಾರ್​ ಮಂಡಳಿ ನಕಾರ; ವಿವಾದಿತ ಚಿತ್ರದಲ್ಲಿ ಅಂಥದ್ದೇನಿದೆ?

72 Hoorain trailer: ಜುಲೈ 7ರಂದು ‘72 ಹೂರೇ’ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಈ ಸಿನಿಮಾದ ಟ್ರೇಲರ್​ಗೆ ಸೆನ್ಸಾರ್​ ಮಂಡಳಿಯಿಂದ ಪ್ರಮಾಣ ಪತ್ರ ಸಿಕ್ಕಿಲ್ಲ. ಇದು ಚರ್ಚೆಗೆ ಕಾರಣ ಆಗಿದೆ.

CBFC: ‘72 ಹೂರೇ’ಚಿತ್ರದ ಟ್ರೇಲರ್​ಗೆ ಪ್ರಮಾಣಪತ್ರ ನೀಡಲು ಸೆನ್ಸಾರ್​ ಮಂಡಳಿ ನಕಾರ; ವಿವಾದಿತ ಚಿತ್ರದಲ್ಲಿ ಅಂಥದ್ದೇನಿದೆ?
‘72 ಹೂರೇ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 28, 2023 | 11:17 AM

Share

ವಿವಾದಿತ ವಿಷಯಗಳ ಮೇಲೆ ಸಿನಿಮಾ ಮಾಡುವ ಟ್ರೆಂಡ್​ ಈಗ ಭಾರತದಲ್ಲಿ ಜೋರಾಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’, ‘ದಿ ಕೇರಳ ಸ್ಟೋರಿ’ ಮುಂತಾದ ಸಿನಿಮಾಗಳೇ ಅದಕ್ಕೆ ಉದಾಹರಣೆ. ಈಗ ಮತ್ತೊಂದು ಸಿನಿಮಾ ಕೂಡ ಇದೇ ಮಾದರಿಯಲ್ಲಿ ಸಿದ್ಧವಾಗಿದೆ. ಈ ಚಿತ್ರದ ಹೆಸರು ‘72 ಹೂರೇ’. ಭಯೋತ್ಪಾದನೆಗೆ ಮುಸ್ಲಿಂ ಯುವಕರನ್ನು ತಳ್ಳುವುದರ ಹಿಂದಿನ ಹುನ್ನಾರದ ಬಗ್ಗೆ ಈ ಚಿತ್ರ ವಿವರಿಸುತ್ತದೆ ಎನ್ನಲಾಗಿದೆ. ಈ ಸಿನಿಮಾದ ಟ್ರೇಲರ್​ಗೆ (72 Hoorain trailer) ಪ್ರಮಾಣಪತ್ರ ನೀಡಲು ಸೆನ್ಸಾರ್​ ಮಂಡಳಿ (Censor Board) ನಿರಾಕರಿಸಿದೆ. ಇದರಿಂದ ಚಿತ್ರರಂಗದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಅಷ್ಟಕ್ಕೂ ಈ ವಿವಾದಿತ ಸಿನಿಮಾದಲ್ಲಿ ಏನಿದೆ ಎಂಬ ಪ್ರಶ್ನೆ ಮೂಡಿದೆ. ಸೆನ್ಸಾರ್​ ಮಂಡಳಿಯ ನಿರ್ಧಾರವನ್ನು ‘72 ಹೂರೇ’ (72 Hoorain) ಚಿತ್ರತಂಡದವರ ಪ್ರಶ್ನಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.

ಅಚ್ಚರಿ ಏನೆಂದರೆ, ‘72 ಹೂರೇ’ ಚಿತ್ರಕ್ಕೆ ಈ ಮೊದಲೇ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಆದರೆ ಅದರ ಹೊಸ ಟ್ರೇಲರ್​ಗೆ ಪ್ರಮಾಣ ಪತ್ರ ನೀಡಲು ಸೆನ್ಸಾರ್​ ಮಂಡಳಿ ಸದಸ್ಯರು ನಿರಾಕರಿಸಿದ್ದಾರೆ. ಇದು ಚರ್ಚೆಗೆ ಕಾರಣವಾಗಿದೆ. ಈ ಸಿನಿಮಾ ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ರಾಷ್ಟ್ರ ಪ್ರಶಸ್ತಿ ಕೂಡ ಈ ಚಿತ್ರಕ್ಕೆ ಸಿಕ್ಕಿದೆ. ಸಿನಿಮಾದಲ್ಲಿ ಇರುವ ದೃಶ್ಯಗಳನ್ನೇ ಇಟ್ಟುಕೊಂಡು ಟ್ರೇಲರ್​ ಸಿದ್ಧಪಡಿಸಲಾಗಿದೆ. ಹಾಗಿದ್ದರೂ ಕೂಡ ಟ್ರೇಲರ್​ಗೆ ಯಾಕೆ ಪ್ರಮಾಣ ಪತ್ರ ನೀಡಲಾಗುತ್ತಿಲ್ಲ ಎಂಬ ಪ್ರಶ್ನೆ ಚಿತ್ರತಂಡದ್ದು.

ಇದನ್ನೂ ಓದಿ: OTT Censorship: ಒಟಿಟಿ ಸೆನ್ಸಾರ್​ಶಿಪ್​ ಬಗ್ಗೆ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್​

ಮೃತ ದೇಹದ ಕಾಲುಗಳನ್ನು ‘72 ಹೂರೇ’ ಚಿತ್ರದ ಟ್ರೇಲರ್​ನಲ್ಲಿ ತೋರಿಸಲಾಗಿದೆ. ಆ ದೃಶ್ಯವನ್ನು ತೆಗೆದುಹಾಕುವಂತೆ ಸೆನ್ಸಾರ್​ ಮಂಡಳಿ ಸದಸ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ‘ಸತ್ತ ನಂತರ ನಿಮಗೆ ಸ್ವರ್ಗದಲ್ಲಿ 72 ಯುವತಿಯರು ಸಿಗುತ್ತಾರೆ’ ಎನ್ನುವ ಮೂಲಕ ಭಯೋತ್ಪಾದಕ ಸಂಘಟನೆಗಳು ಯುವಕರನ್ನು ಮೈಂಡ್​ ವಾಶ್​ ಮಾಡುತ್ತವೆ ಎಂಬ ಮಾತಿದೆ. ಇದೇ ಕಾನ್ಸೆಪ್ಟ್​ನ ಕೇಂದ್ರವಾಗಿ ಇಟ್ಟುಕೊಂಡು ‘72 ಹೂರೇ’ ಎಂದು ಈ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ: ‘ಸೆನ್ಸಾರ್ ಬೋರ್ಡ್ ಒಪ್ಪಿಗೆ ಕೊಟ್ಟಮೇಲೆ ಮುಗಿಯಿತು’; ‘ಆದಿಪುರುಷ್’ ಮೇಲಿದ್ದ ಬ್ಯಾನ್ ತೆರವು ಮಾಡಿದ ಕೋರ್ಟ್

‘ಈ ಬಗ್ಗೆ ನಾವು ಸೆನ್ಸಾರ್​ ಮಂಡಳಿ ಅಧ್ಯಕ್ಷ ಪ್ರಸೂನ್​ ಜೋಶಿ ಅವರ ಬಳಿ ಪ್ರಸ್ತಾಪ ಮಾಡುತ್ತೇವೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್​ ಅವರಿಗೂ ಮನವಿ ಮಾಡಿಕೊಳ್ಳುತ್ತೇವೆ. ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸೃಜನಶೀಲತೆಯನ್ನು ಸೆನ್ಸಾರ್​ ಬೋರ್ಡ್​ನವರು ಕಿತ್ತುಕೊಳ್ಳುತ್ತಿದ್ದಾರೆ’ ಎಂದು ‘72 ಹೂರೇ’ ಸಿನಿಮಾದ ಸಹ-ನಿರ್ಮಾಪಕ ಅಶೋಕ್​ ಪಂಡಿತ್ ಹೇಳಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಸೆನ್ಸಾರ್ ಅಧಿಕಾರಿಯ ಕೊಲೆ ಮಾಡಲು ತಯಾರಾಗಿದ್ದ ವಿಶ್ವವಿಖ್ಯಾತ ನಿರ್ದೇಶಕ: ಆಮೇಲೇನಾಯ್ತು?

‘72 ಹೂರೇ’ ಸಿನಿಮಾಗೆ ಸಂಜಯ್​ ಪುರಾಣ್​​ ಸಿಂಗ್​ ಚೌಹಾಣ್​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಜುಲೈ 7ರಂದು ಬಿಡುಗಡೆ ಆಗಲಿದೆ. ಪವನ್​ ಮಲ್ಹೋತ್ರಾ, ಆಮಿರ್​ ಬಶೀರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಟ್ರೇಲರ್​ಗೆ ಸೆನ್ಸಾರ್​ ಪ್ರಮಾಣ ಪತ್ರ ಸಿಗದ ಕಾರಣ ಆನ್​ಲೈನ್​ ಮೂಲಕ ಟ್ರೇಲರ್​ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು