AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಫ್​ಸಿ ವಿರುದ್ಧ ಜಗಳಕ್ಕೆ ನಿಂತ ಆಮಿರ್ ಖಾನ್​, ಕಾರಣವೇನು?

Aamir Khan: ಬಾಲಿವುಡ್ ನಟ ಆಮಿರ್ ಖಾನ್ ನಟನೆಯ ‘ಸಿತಾರೆ ಜಮೀನ್ ಪರ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಇದೀಗ ಸಿಬಿಎಫ್​ಸಿ ತಕರಾರು ತೆಗೆದಿದ್ದು, ಬುದ್ಧಿಮಾಂದ್ಯರ ಬಗ್ಗೆ ಮಾಡಿರುವ ಈ ಸಿನಿಮಾದ ಎರಡು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದೆ. ಆದರೆ ಬಲು ಪ್ರೀತಿಯಿಂದ ಸಿನಿಮಾ ಮಾಡಿರುವ ಆಮಿರ್ ಖಾನ್, ಇದಕ್ಕೆ ಸುತಾರಾಂ ಒಪ್ಪಿಲ್ಲ.

ಸಿಬಿಎಫ್​ಸಿ ವಿರುದ್ಧ ಜಗಳಕ್ಕೆ ನಿಂತ ಆಮಿರ್ ಖಾನ್​, ಕಾರಣವೇನು?
Sitare Zameen Par
ಮಂಜುನಾಥ ಸಿ.
|

Updated on: Jun 14, 2025 | 10:11 PM

Share

ಆಮಿರ್ ಖಾನ್ (Aamir Khan) ಬಾಲಿವುಡ್​ನ ಸ್ಟಾರ್ ನಟ. ಇತರೆ ಖಾನ್​ಗಳ ರೀತಿ ಕೇವಲ ಕಮರ್ಶಿಯಲ್, ಮಾಸ್ ಸಿನಿಮಾಗಳ ಹಿಂದೆ ಹೋಗದೆ, ಪ್ರೇಕ್ಷಕರಿಗೆ ಒಳ್ಳೆ ಸಿನಿಮಾಗಳನ್ನು ನೀಡುತ್ತಾ ಬರುತ್ತಿದ್ದಾರೆ. ಈ ಒಳ್ಳೆಯ ಸಿನಿಮಾಗಳನ್ನು ನೀಡುವ ಪ್ರಯತ್ನದಲ್ಲಿ ಸಾಕಷ್ಟು ಬಾರಿ ನಷ್ಟವನ್ನೂ ಸಹ ಅನುಭವಿಸಿದ್ದಾರೆ. ಆಮಿರ್, ಬಹಳ ಪ್ರೀತಿಯಿಂದ ನಿರ್ಮಿಸಿದ್ದ ಅವರ ಈ ಹಿಂದಿನ ಸಿನಿಮಾ ‘ಲಾಲ್ ಸಿಂಗ್ ಛಡ್ಡ’ ಹೀನಾಯ ಸೋಲು ಕಂಡಿತು. ಇದೀಗ ಆಮಿರ್, ‘ಸಿತಾರೆ ಜಮೀನ್ ಪರ್’ ಸಿನಿಮಾ ಹೊತ್ತು ಬರುತ್ತಿದ್ದಾರೆ. ಆದರೆ ಸಿನಿಮಾ ಪ್ರಚಾರ ಚಾಲ್ತಿಯಲ್ಲಿರುವಾಗಲೇ ಸಂಕಷ್ಟವೊಂದು ಎದುರಾಗಿದೆ.

‘ಸಿತಾರೆ ಜಮೀನ್ ಪರ್’ ಸಿನಿಮಾ ವಿಶೇಷ ಚೇತನ ವ್ಯಕ್ತಿಗಳಿಗೆ ಬಾಸ್ಕೆಟ್​ಬಾಲ್ ಕಲಿಸಿ ಅವರನ್ನು ಪ್ರಶಸ್ತಿ ಗೆಲ್ಲುವಂತೆ ಮಾಡುವ ಕತೆಯನ್ನು ಒಳಗೊಂಡಿದೆ. ವಿಶೇಷ ಚೇತನ ಮಕ್ಕಳನ್ನು, ಜನರನ್ನು ಸಮಾಜ ಹೇಗೆ ಸ್ವೀಕಾರ ಮಾಡಬೇಕು, ಹೇಗೆ ಅವರೊಟ್ಟಿಗೆ ನಡೆದುಕೊಳ್ಳಬೇಕು, ಅವರ ಸಮಸ್ಯೆಗಳೇನು? ಅವರ ಶಕ್ತಿ ಏನು ಇತ್ಯಾದಿ ವಿಷಯಗಳ ಬಗ್ಗೆ ಈ ಸಿನಿಮಾ ಮಾತನಾಡುತ್ತದೆ. ಈ ಹಿಂದೆ ‘ತಾರೆ ಜಮೀನ್ ಪರ್’ ಸಿನಿಮಾ ಮೂಲಕ ವಿದ್ಯಾಭ್ಯಾಸದಲ್ಲಿ ಹಿಂದುಳಿದಿದ್ದ ವಿದ್ಯಾರ್ಥಿಗಳ ಬಗ್ಗೆ ಆಮಿರ್ ಮಾತನಾಡಿದ್ದರು. ಈಗ ವಿಶೇಷ ಚೇತನ ಅಥವಾ ಬುದ್ಧಿಮಾಂದ್ಯ ವ್ಯಕ್ತಿಗಳ ಸಮಸ್ಯೆಗಳ ಬಗ್ಗೆ ಸಿನಿಮಾ ಮೂಲಕ ಜಾಗೃತಿ ಮೂಡಿಸಲಿದ್ದಾರೆ.

ಇದನ್ನೂ ಓದಿ:ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ

ಒಂದೊಳ್ಳೆ ವಿಷಯ ಇಟ್ಟುಕೊಂಡು ಆಮಿರ್ ಸಿನಿಮಾ ಮಾಡಿದ್ದಾರಾದರೂ ಇದೀಗ ಸಿಬಿಎಫ್​ಸಿ ಕೆಲವು ತಕರಾರುಗಳನ್ನು ತೆಗೆದಿದೆ. ಸಿಬಿಎಫ್​ಸಿ, ‘ಸಿತಾರೆ ಜಮೀನ್ ಪರ್’ ಸಿನಿಮಾದ ಎರಡು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಿರ್ದೇಶಕರಿಗೆ ಸೂಚನೆ ನೀಡಿದೆ. ಆದರೆ ಇದು ಆಮಿರ್ ಖಾನ್​ ಅವರಿಗೆ ಸುತಾರಂ ಹಿಡಿಸಿಲ್ಲ. ಸಿಬಿಎಫ್​ಸಿ ಸೂಚಿಸಿರುವ ದೃಶ್ಯಗಳು ಕತ್ತರಿ ಹಾಕಬೇಕಾದ ದೃಶ್ಯಗಳಲ್ಲ, ಅವನ್ನು ಬೇರೆ ದೃಷ್ಟಿಕೋನದಿಂದ ನೋಡಬೇಕಾದ ಅವಶ್ಯಕತೆ ಇದೆ ಎಂದಿದ್ದಾರಂತೆ. ಹಾಗಾಗಿ ಸಿನಿಮಾದ ದೃಶ್ಯಗಳಿಗೆ ಕತ್ತರಿ ಹಾಕದಿರಲು ಆಮಿರ್ ಖಾನ್ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸಿಬಿಎಫ್​ಸಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಆಲೋಚನೆಯನ್ನೂ ಸಹ ಆಮಿರ್ ಮಾಡುತ್ತಿದ್ದಾರೆ. ‘ಸಿತಾರೆ ಜಮೀನ್ ಪರ್’ ಸಿನಿಮಾ ಜೂನ್ 20 ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಆಮಿರ್ ಖಾನ್ ಜೊತೆಗೆ ಜೆನಿಲಿಯಾ ಡಿಸೋಜಾ ನಾಯಕಿಯಾಗಿ ನಟಿಸಿದ್ದಾರೆ. ಆಮಿರ್ ಖಾನ್ ರ ಈ ಸಿನಿಮಾವನ್ನು ಪ್ರಸನ್ನ ನಿರ್ದೇಶನ ಮಾಡಿದ್ದಾರೆ. ಫ್ರೆಂಚ್ ಭಾಷೆಯ ಸಿನಿಮಾ ‘ಚಾಂಪಿಯನ್ಸ್’ನಿಂದ ಸ್ಪೂರ್ತಿ ಪಡೆದು ಮಾಡಿರುವ ಸಿನಿಮಾ ಇದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು