AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಕೋಟಿ ಸಾಲ, ಖ್ಯಾತ ಕಮಿಡಿಯನ್​ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ

ಬಾಲಿವುಡ್​ನ ಅತ್ಯಂತ ಜನಪ್ರಿಯ ಕಮಿಡಿಯನ್​ ಒಬ್ಬರು 11 ಕೋಟಿ ರೂಪಾಯಿ ಸಾಲ ತೀರಿಸದ ಕಾರಣ ಅವರಿಗೆ ಸೇರಿದ ಜಮೀನನ್ನು ಸಿಬಿಐ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.

11 ಕೋಟಿ ಸಾಲ, ಖ್ಯಾತ ಕಮಿಡಿಯನ್​ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ
ಮಂಜುನಾಥ ಸಿ.
|

Updated on: Aug 14, 2024 | 7:08 PM

Share

ಸ್ಟಾರ್ ನಟರಂತೆ ಹಾಸ್ಯ ನಟರು ದೊಡ್ಡ ಹೆಸರು ಮಾಡುವುದು, ಜನಪ್ರಿಯತೆ ಗಳಿಸುವುದು ವಿರಳ. ಆದರೆ ದೇಶದಲ್ಲಿ ಕೆಲವು ಹಾಸ್ಯ ನಟರು ಸ್ಟಾರ್ ನಟರಷ್ಟೆ ಜನಪ್ರಿಯತೆ, ಅಭಿಮಾನಿಗಳನ್ನು ಹೊಂದಿದ್ದಾರೆ ಅವರಲ್ಲಿ ಬಾಲಿವುಡ್ ಹಾಸ್ಯ ನಟ ರಾಜ್​ಪಾಲ್ ಯಾದವ್ ಸಹ ಒಬ್ಬರು. ದಶಕಗಳಿಂದಲೂ ಚಿತ್ರರಂಗದಲ್ಲಿ ತಮ್ಮ ಅದ್ಭುತ ನಟನೆ, ದೇಹಭಾಷೆ, ಡೈಲಾಗ್ ಡೆಲಿವರಿಯಿಂದ ಪ್ರೇಕ್ಷಕರನ್ನೂ ರಂಜಿಸುತ್ತಾ ಬಂದಿರುವ ರಾಜ್​ಪಾಲ್ ಯಾದವ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಕೋಟ್ಯಂತರ ರೂಪಾಯಿ ಸಾಲ ಮಾಡಿಕೊಂಡಿದ್ದಾರೆ. ಸಾಲದ ಬದಲಾಗಿ ಸಿಬಿಐ ನವರು ರಾಜ್​ಪಾಲ್ ಯಾದವ್​ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅಂದಹಾಗೆ ಸಿಬಿಐ ಎಂದರೆ ತನಿಖಾ ಸಂಸ್ಥೆ ಅಲ್ಲ ಬದಲಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ.

ರಾಜ್​ಪಾಲ್ ಯಾದವ್​ ಅವರಿಗೆ ಸೇರಿದ್ದು ಎನ್ನಲಾಗಿರುವ ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿರುವ ಆಸ್ತಿಯನ್ನು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ಹಲವು ವರ್ಷಗಳ ಹಿಂದೆ ರಾಜ್​ಪಾಲ್ ಯಾದವ್ ಈ ಜಮೀನನ್ನು ಖರೀದಿ ಮಾಡಿದ್ದರು. ಅಸಲಿಗೆ ರಾಜ್​ಪಾಲ್ ಯಾದವ್ ಬಹಳ ವರ್ಷಗಳ ಹಿಂದೆ ತಮ್ಮ ಪೋಷಕರಾದ ನೌರಂಗ್ ಮತ್ತು ಗೋಧಾವರಿ ಅವರುಗಳ ಹೆಸರಲ್ಲಿ ನಿರ್ಮಾಣ ಸಂಸ್ಥೆಯೊಂದನ್ನು ಆರಂಭ ಮಾಡಿದ್ದರು. ಅದಕ್ಕೆ ನೌರಂಗ್-ಗೋಧಾವರಿ ಎಂಟರ್ಟೈನ್​ಮೆಂಟ್ ಎಂದು ಹೆಸರಿಟ್ಟಿದ್ದರು.

ಇದನ್ನೂ ಓದಿ:‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್ ನಟ ಅಕ್ಷಯ್ ಒಬೆರಾಯ್: ಯಾರೀತ?

ನೌರಂಗ್-ಗೋಧಾವರಿ ಎಂಟರ್ಟೈನ್​ಮೆಂಟ್ ನಿರ್ಮಾಣ ಸಂಸ್ಥೆಗೆ ರಾಜ್​ಪಾಲ್ ಯಾದವ್​ರ ಪತ್ನಿ ರಾಧಾ ಮಾಲಕಿ ಆಗಿದ್ದರು. ತಮ್ಮ ನಿರ್ಮಾಣ ಸಂಸ್ಥೆ ಮೂಲಕ ಸಿನಿಮಾ ಒಂದನ್ನು ನಿರ್ಮಾಣ ಮಾಡಿದ್ದರು ರಾಜ್​ಪಾಲ್ ಯಾದವ್. ಆ ಸಿನಿಮಾಕ್ಕೆ ಶಹಜಾನ್​ಪುರದ ಸ್ಥಳೀಯ ಕಲಾವಿದರನ್ನೇ ಬಳಸಿಕೊಂಡಿದ್ದರು. ಸಿನಿಮಾದಲ್ಲಿ ದಿವಂಗತ ಓಂ ಪುರಿ ಸಹ ನಟಿಸಿದ್ದರು. ಆ ಸಿನಿಮಾ ನಿರ್ಮಾಣಕ್ಕೆ ಶಹಜಾನ್​ಪುರದಲ್ಲಿನ ಜಮೀನು ಅಡವಿಟ್ಟು ಮೂರು ಕೋಟಿ ಸಾಲ ಪಡೆದಿದ್ದರು. ಆ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಟ್ಟರ್ ಫ್ಲಾಪ್​ ಆಯ್ತು. ರಾಜ್​ಪಾಲ್ ಯಾದವ್​ಗೆ ಸಾಲ ಮರುಪಾವತಿ ಮಾಡಲು ಆಗಲಿಲ್ಲ.

ಮೂರು ಕೋಟಿ ರೂಪಾಯಿ ಸಾಲ ಬಡ್ಡಿ, ಇನ್ನಿತರೆ ಶುಲ್ಕ, ದಂಡಗಳು ಸೇರಿಕೊಂಡು ಈಗ 11 ಕೋಟಿ ರೂಪಾಯಿಗಳಾಗಿದ್ದು, ನೊಟೀಸ್​ಗಳನ್ನು ಕಳಿಸಿ-ಕಳಿಸಿ ಸುಸ್ತಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದವರು ಇದೇ ತಿಂಗಳ ಎರಡನೇ ವಾರದಲ್ಲಿ ಶಹಜಾನ್​ಪುರಕ್ಕೆ ತೆರಳಿ ರಾಜ್​ಪಾಲ್ ಯಾದವ್​ ಅವರಿಗೆ ಸೇರಿದ ಅಡವಿಟ್ಟಿದ್ದ ಜಮೀನನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್​ಪಾಲ್ ಯಾದವ್ 25 ವರ್ಷಗಳಿಂದಲೂ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಬಾಲಿವುಡ್​ನ ಅತ್ಯುತ್ತಮ ನಟರಲ್ಲಿ ರಾಜ್​ಪಾಲ್ ಯಾದವ್ ಸಹ ಒಬ್ಬರು. ಬಾಲಿವುಡ್​ನ ಎಲ್ಲ ಸ್ಟಾರ್ ನಟರು, ನಿರ್ದೇಶಕರೊಟ್ಟಿಗೆ ರಾಜ್​ಪಾಲ್ ಯಾದವ್ ಕೆಲಸ ಮಾಡಿದ್ದಾರೆ. ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿಯೂ ಸಹ ರಾಜ್​ಪಾಲ್ ಯಾದವ್ ಕೆಲಸ ಮಾಡಿದ್ದಾರೆ. ಬಾಲಿವುಡ್​ನಲ್ಲಿ ಜಾನಿ ಲಿವರ್​ ಬಳಿಕ ಅತ್ಯಂತ ಯಶಸ್ವಿ ಕಮಿಡಿಯನ್ ಎಂದರೆ ಅದು ರಾಜ್​ಪಾಲ್ ಯಾದವ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು