AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಚಿತ್ರಕ್ಕೆ ಸೆನ್ಸಾರ್​ ಸಂಕಷ್ಟ; ಹಲವು ಬದಲಾವಣೆ ಮಾಡುವಂತೆ ಅಧಿಕಾರಿಗಳಿಂದ ಸೂಚನೆ

Censor Board | Pathaan Movie: ‘ಪಠಾಣ್​’ ಸಿನಿಮಾದಲ್ಲಿನ ಬಹುತೇಕ ದೃಶ್ಯಗಳಿಗೆ ಸೆನ್ಸಾರ್​ ಮಂಡಳಿಯಲ್ಲಿ ತಕರಾರು ವ್ಯಕ್ತವಾಗಿದೆ. ಸಾಕಷ್ಟು ಬದಲಾವಣೆ ಮಾಡಿ, ಪುನಃ ಸೆನ್ಸಾರ್​ಗೆ ಕಳಿಸಲು ಸೂಚಿಸಲಾಗಿದೆ.

Shah Rukh Khan: ‘ಪಠಾಣ್​’ ಚಿತ್ರಕ್ಕೆ ಸೆನ್ಸಾರ್​ ಸಂಕಷ್ಟ; ಹಲವು ಬದಲಾವಣೆ ಮಾಡುವಂತೆ ಅಧಿಕಾರಿಗಳಿಂದ ಸೂಚನೆ
ಶಾರುಖ್ ಖಾನ್
TV9 Web
| Edited By: |

Updated on:Dec 29, 2022 | 6:08 PM

Share

ಶಾರುಖ್​ ಖಾನ್​ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಈ ಸಿನಿಮಾಗೆ ಒಂದು ವರ್ಗದ ನೆಟ್ಟಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅನೇಕ ಹಿಂದೂಪರ ಸಂಘಟನೆಗಳು ಈ ಚಿತ್ರದ ‘ಬೇಷರಂ ರಂಗ್​..’ ಹಾಡಿಗೆ ಆಕ್ಷೇಪ ಎತ್ತಿವೆ. ಅದರ ಬೆನ್ನಲ್ಲೇ ಸೆನ್ಸಾರ್​ ಪ್ರಮಾಣ ಪತ್ರ ಪಡೆಯುವುದು ಕಷ್ಟವಾಗಿದೆ. ಇತ್ತೀಚೆಗಷ್ಟೇ ಈ ಚಿತ್ರವನ್ನು ಸೆನ್ಸಾರ್​ ಮಂಡಳಿ (Censor Board) ಸದಸ್ಯರು ವೀಕ್ಷಿಸಿದ್ದಾರೆ. ವಿವಾದದ ಕೇಂದ್ರ ಬಿಂದು ಆಗಿರುವ ‘ಬೇಷರಂ ರಂಗ್​..’ ಹಾಡಿನ ಜೊತೆಗೆ ಅನೇಕ ದೃಶ್ಯಗಳಲ್ಲಿ ಬದಲಾವಣೆ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಇದರಿಂದ ‘ಪಠಾಣ್​’ (Pathaan Movie) ಚಿತ್ರತಂಡಕ್ಕೆ ತಲೆ ನೋವು ಶುರುವಾಗಿದೆ.

‘ಪಠಾಣ್​’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಕೇಸರಿ ಬಣ್ಣದ ಬಿಕಿನಿ ಧರಿಸಿ ‘ಬೇಷರಂ ರಂಗ್​..’ ಎಂದು ಹಾಡಿದ್ದನ್ನು ಅನೇಕರು ವಿರೋಧಿಸಿದ್ದಾರೆ. ಅಲ್ಲದೇ, ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕಾಣಿಸಿಕೊಂಡ ರೀತಿ ಸರಿಯಿಲ್ಲ ಎಂದು ಕೂಡ ಕೆಲವರಿಂದ ತಕರಾರು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸೆನ್ಸಾರ್​ ಮಂಡಳಿಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲವು ಸೂಚನೆಗಳನ್ನು ಚಿತ್ರತಂಡಕ್ಕೆ ನೀಡಿದ್ದಾರೆ.

ಇದನ್ನೂ ಓದಿ: Boycott Pathaan: ‘ಪಠಾಣ್​’ ಸಿನಿಮಾ ಬಹಿಷ್ಕಾರಕ್ಕೆ ಅಭಿಯಾನ ಶುರು; ಶಾರುಖ್​ ಚಿತ್ರಕ್ಕೆ ಸೋಲಿನ ಭಯ

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರು ಬಹಳ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಹಾಡುಗಳೇ ಸಾಕ್ಷಿ ಒದಗಿಸಿವೆ. ಇದೇ ಕಾರಣದಿಂದ ಸಿನಿಮಾದಲ್ಲಿನ ಬಹುತೇಕ ದೃಶ್ಯಗಳಿಗೆ ಸೆನ್ಸಾರ್​ ಮಂಡಳಿಯಲ್ಲಿ ತಕರಾರು ವ್ಯಕ್ತವಾಗಿರಬಹುದು. ಹಲವು ದೃಶ್ಯಗಳಲ್ಲಿ ಬದಲಾವಣೆ ಮಾಡಿಕೊಂಡು, ಪುನಃ ಸೆನ್ಸಾರ್​ಗೆ ಕಳಿಸಲು ಸೂಚಿಸಲಾಗಿದೆ. ಇದು ಶಾರುಖ್​ ಖಾನ್​ ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

ಇದನ್ನೂ ಓದಿ: ‘ಪಠಾಣ್​’ ಚಿತ್ರದ ಎರಡನೇ ಹಾಡಲ್ಲೂ ಹಾಟ್ ಆಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

‘ಪಠಾಣ್​’ ಸಿನಿಮಾ 2023ರ ಜನವರಿ 25ರಂದು ಬಿಡುಗಡೆ ಆಗಲಿದೆ. ಒಂದು ವೇಳೆ ಸೆನ್ಸಾರ್​ ಪ್ರಮಾಣಪತ್ರ ಸಿಗುವುದು ತಡವಾದರೆ ರಿಲೀಸ್​ ದಿನಾಂಕ ಮುಂದೂಡುವುದು ಅನಿವಾರ್ಯ ಆಗಲಿದೆ. ಹಾಗೇನಾದರೂ ಆದರೆ ಶಾರುಖ್​ ಖಾನ್​ ಸಿನಿಮಾಗೆ ತೀವ್ರ ಹಿನ್ನಡೆ ಆದಂತೆ ಆಗಲಿದೆ. ಆ ರೀತಿ ಆಗದಿರಲಿ ಎಂದು ಫ್ಯಾನ್ಸ್​ ಪ್ರಾರ್ಥಿಸುತ್ತಿದ್ದಾರೆ.

ಸಿದ್ದಾರ್ಥ್​ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಬಿಗ್​ ಬಜೆಟ್​ನಲ್ಲಿ ಸಿನಿಮಾ ಮೂಡಿಬಂದಿದೆ. ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೊತೆಯಲ್ಲಿ ಜಾನ್​ ಅಬ್ರಾಹಂ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಹಲವು ದೇಶಗಳಲ್ಲಿ ಈ ಸಿನಿಮಾದ ದೃಶ್ಯಗಳನ್ನು ಚಿತ್ರಿಸಲಾಗಿದೆ. ಇದು ಶಾರುಖ್​ ಖಾನ್​ ಅವರ ಕಮ್​ಬ್ಯಾಕ್​ ಸಿನಿಮಾ ಆಗಿರುವುದರಿಂದ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:08 pm, Thu, 29 December 22

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ