Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಸಿನಿಮಾಕ್ಕೆ ಶಕ್ತಿ ಇದೆ: ದಕ್ಷಿಣ ಭಾರತದ ಸಿನಿಮಾಗಳ ಉದಾಹರಿಸಿದ ಸಚಿವ ಅನುರಾಗ್ ಠಾಕೂರ್

Tv9 Award: ಟಿವಿ9 ಬಾಂಗ್ಲಾ ಆಯೋಜಿಸಿದ್ದ ಸಿನಿಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅತಿಥಿಯಾಗಿ ಭಾಗವಹಿಸಿದ್ದರು.

ಬಾಂಗ್ಲಾ ಸಿನಿಮಾಕ್ಕೆ ಶಕ್ತಿ ಇದೆ: ದಕ್ಷಿಣ ಭಾರತದ ಸಿನಿಮಾಗಳ ಉದಾಹರಿಸಿದ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Follow us
ಮಂಜುನಾಥ ಸಿ.
| Updated By: ವಿವೇಕ ಬಿರಾದಾರ

Updated on:Jun 17, 2023 | 11:00 PM

‘ಟಿವಿ9 ಬಾಂಗ್ಲಾ ಗೋರೇರ್ ಬಯೋಸ್ಕೋಪ್ 2023’ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅನುರಾಗ್ ಠಾಕೂರ್ (Anurag Thakur), ”ಭಾರತದ ಮನೊರಂಜನಾ ಕ್ಷೇತ್ರ ಕಳೆದ ಕೆಲವು ವರ್ಷಗಳಲ್ಲಿ ಸಾಧಿಸಿರುವ ಪ್ರಗತಿ ಅಭೂತಪೂರ್ವವಾದುದು. ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಸಿನಿಮಾ, ಡಾಕ್ಯುಮೆಂಟರಿಗಳಿಗೆ ಪ್ರಶಸ್ತಿಗಳು ದೊರೆಯುತ್ತಿವೆ ಇದು ಹೆಮ್ಮೆಯ ವಿಷಯ” ಎಂದರು.

”ದಕ್ಷಿಣ ಭಾರತದ ಸಿನಿಮಾಗಳನ್ನು ಇಡೀ ಭಾರತ ಮೆಚ್ಚಿ ನೋಡುತ್ತಿದೆ. ಕೊರಿಯನ್ ಭಾಷೆಯ ಕಂಟೆಂಟ್​ಗೆ ವಿಶ್ವದೆಲ್ಲೆಡೆ ಬೇಡಿಕೆ ಇದೆ. ಹೀಗಿರುವಾಗ ಬಾಂಗ್ಲಾದ ಕಂಟೆಂಟ್ ಸಹ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಬಹುದಾಗಿದೆ. ಆ ಶಕ್ತಿ, ಗುಣಮಟ್ಟ ಬಾಂಗ್ಲಾದ ಮನೊರಂಜನಾ ಕಂಟೆಂಟ್​ಗೆ ಇದೆ. ಪಶ್ಚಿಮ ಬಂಗಾಳದ ಮಣ್ಣಿನಲ್ಲಿ ಅತ್ಯುತ್ತಮ ಸಾಹಿತಿಗಳು, ಸಿನಿಮಾ ನಿರ್ದೇಶಕರು ಚಿಂತಕರು ಜನಿಸಿದ್ದಾರೆ” ಎಂದು ಅನುರಾಗ್ ಠಾಕೂರ್ ಅಭಿಪ್ರಾಯ ವ್ಯಕ್ತಪಡಿಸಿದರು.

”ಈಗಿನ ನಿರ್ಮಾಪಕರು, ನಿರ್ದೇಶಕರು ಹೆಚ್ಚು ಜಾಗೃತೆಯಿಂದ ಇರಬೇಕಾಗಿದೆ. ಬೇರೆ ಕೆಲ ಮಾಧ್ಯಮಗಳಿಗೆ ಇರುವ ಸೆನ್ಸಾರ್​ಶಿಪ್​ ಒಟಿಟಿಗೆ ಇಲ್ಲ. ನಿರ್ದೇಶಕರು, ನಿರ್ಮಾಪಕರು ಸ್ವಯಂ ನಿಯಂತ್ರಣ ಹೇರಿಕೊಂಡು, ಸಮಾಜದ ಸ್ವಾಸ್ಥ್ಯವನ್ನು ಗಮನದಲ್ಲಿಟ್ಟುಕೊಂಡು ಕಂಟೆಂಟ್ ನೀಡಬೇಕಾಗಿದೆ. ಡಿಜಿಟಲ್ ಮಾಧ್ಯಮಗಳ ಮೂಲಕ ಯಾವುದೇ ಕಂಟೆಂಟ್ ಆಗಲಿ ನೇರವಾಗಿ ವ್ಯಕ್ತಿಗೆ ತಲುಪುತ್ತಿದೆ, ಬಳಕೆದಾರನ ಮೇಲೆ ಪ್ರಭಾವ ಬೀರುತ್ತಿದೆ. ಹಾಗಾಗಿ ಹೆಚ್ಚಿನ ಎಚ್ಚರಿಕೆಯ ಅವಶ್ಯಕತೆ ಇದೆ” ಎಂದರು.

ಟಿವಿ9 ಆಯೋಜಿಸಿದ್ದ ಕಾರ್ಯಕ್ರಮದ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತಪಡಿಸಿದ ಅನುರಾಗ್ ಠಾಕೂರ್, ಟಿವಿ9 ಬಾಂಗ್ಲಾ ಆಯೋಜಿಸಿರುವ ಈ ಕಾರ್ಯಕ್ರಮ ತನ್ನ ಮೊದಲ ಆವೃತ್ತಿಯಲ್ಲಿಯೇ ಯಶಸ್ವಿಯಾಗಿದೆ. ದೊಡ್ಡ ಸಂಖ್ಯೆಯ ಪ್ರೇಕ್ಷಕರು, ಕಲಾವಿದರು ಇಂದು ಸೇರಿದ್ದಾರೆ. ಮುಂದಿನ ವರ್ಷಗಳಲ್ಲಿ ಈ ಕಾರ್ಯಕ್ರಮವನ್ನು ಆಡಿಟೋರಿಯಂನಲ್ಲಿ ಆಯೋಜಿಸುವ ಬದಲಿಗೆ ದೊಡ್ಡ ಮೈದಾನದಲ್ಲಿ ಆಯೋಜಿಸಬೇಕಾಗಿ ಬರಬಹುದು ಎಂದು ಕಾರ್ಯಕ್ರಮದ ಯಶಸ್ಸಿಗೆ ಎಂಡಿ ಬರುನ್ ದಾಸ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಟಿವಿ9 ಬಾಂಗ್ಲಾ ಮೊದಲ ಬಾರಿಗೆ ಟಿವಿ9 ಬಾಂಗ್ಲಾ ಗೋರ್ ಬಯೋಸ್ಕೋಪ್ ಪ್ರಶಸ್ತಿ 2023ನ್ನು ಇಂದು (ಜೂನ್ 17) ಆಯೋಜಿಸಿತ್ತು. ಕಾರ್ಯಕ್ರಮವು ಕೊಲ್ಕತ್ತದ ಐಶಾರಾಮಿ ಹೋಟೆಲ್​ನ ಸಭಾಂಗಣದಲ್ಲಿ ಆಯೋಜಿತವಾಗಿತ್ತು. ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತ್ರವಲ್ಲದೆ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ್ ಬೋಸ್, ರಾಜ್ಯ ಸಚಿವ ಫಿರ್ಹಾದ್ ಹಕೀಮ್, ಕೊಲ್ಕತ್ತದ ಮೇಯರ್ ಇನ್ನು ಕೆಲವರು ಗಣ್ಯರು ಭಾಗವಹಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Sat, 17 June 23

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ