AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಹೃತಿಕ್​ ರೋಷನ್​ಗೆ ನಟನೆ ಬರಲ್ಲ ಎಂದು ನೇರವಾಗಿ ಹೇಳಿದ ಕಂಗನಾ​; ತಿರುಗೇಟು ನೀಡಿದ ಫ್ಯಾನ್ಸ್​

Hrithik Roshan | Kangana Ranaut Twitter: ಟ್ವಿಟರ್​ನಲ್ಲಿ ಅಭಿಮಾನಿಗಳ ಜೊತೆ ಕಂಗನಾ ರಣಾವತ್​ ಅವರು ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬರು ಹೃತಿಕ್​ ರೋಷನ್​ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

Kangana Ranaut: ಹೃತಿಕ್​ ರೋಷನ್​ಗೆ ನಟನೆ ಬರಲ್ಲ ಎಂದು ನೇರವಾಗಿ ಹೇಳಿದ ಕಂಗನಾ​; ತಿರುಗೇಟು ನೀಡಿದ ಫ್ಯಾನ್ಸ್​
ಕಂಗನಾ ರಣಾವತ್, ಹೃತಿಕ್ ರೋಷನ್
ಮದನ್​ ಕುಮಾರ್​
|

Updated on: Feb 20, 2023 | 5:05 PM

Share

ನಟ ಹೃತಿಕ್​ ರೋಷನ್​ ಮತ್ತು ನಟಿ ಕಂಗನಾ ರಣಾವತ್​ (Kangana Ranaut) ನಡುವೆ ಬಹಳ ದಿನಗಳ ಕಾಲ ಕಿತ್ತಾಟ ನಡೆದಿತ್ತು. ಇಬ್ಬರೂ ಪರಸ್ಪರ ಡೇಟಿಂಗ್​ ಮಾಡುತ್ತಿದ್ದರು ಎಂಬ ಮಾತಿದೆ. ಆದರೆ ಬಳಿಕ ಕಿರಿಕ್​ ಶುರುವಾಯಿತು. ಅದೆಲ್ಲ ಶಾಂತವಾಗಿ ಬಹಳ ದಿನಗಳೇ ಕಳೆದಿವೆ. ಆದರೆ ಕಂಗನಾ ರಣಾವತ್​ ಮಾತ್ರ ಸುಮ್ಮನಾಗಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಹೃತಿಕ್​ ರೋಷನ್​ (Hrithik Roshan) ಅವರನ್ನು ಕೆಣಕುವ ರೀತಿಯಲ್ಲಿ ಕಂಗನಾ ರಣಾವತ್​ ಪೋಸ್ಟ್​ ಮಾಡಿದ್ದಾರೆ. ‘ಹೃತಿಕ್​ ರೋಷನ್​ಗೆ ನಟನೆಯ ಬರುವುದಿಲ್ಲ’ ಎಂಬರ್ಥದಲ್ಲಿ ಅವರು ಟ್ವೀಟ್​ (Kangana Ranaut Tweet) ಮಾಡಿದ್ದಾರೆ. ಇದು ಹೃತಿಕ್​ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ. ಹಾಗಾಗಿ ಕಂಗನಾಗೆ ನೆಟ್ಟಿಗರು ತಿರುಗೇಟು ನೀಡುತ್ತಿದ್ದಾರೆ.

ಟ್ವಿಟರ್​ನಲ್ಲಿ ಅಭಿಮಾನಿಗಳ ಜೊತೆ ಕಂಗನಾ ರಣಾವತ್​ ಅವರು ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬರು ಹೃತಿಕ್​ ರೋಷನ್​ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ‘ಹೃತಿಕ್​ ರೋಷನ್​ ಮತ್ತು ದಿಲ್ಜಿತ್​ ದೋಸಾಂಜ್​ ಇವರಿಬ್ಬರಲ್ಲಿ ನಿಮ್ಮ ನೆಚ್ಚಿನ ನಟ ಯಾರು’ ಎಂದು ಕೇಳಿದ ಪ್ರಶ್ನೆಗೆ ಕಂಗನಾ ಅವರು ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. ‘ಇವರಲ್ಲಿ ಒಬ್ಬರು ಆ್ಯಕ್ಷನ್​ ಮಾಡುತ್ತಾರೆ. ಮತ್ತೊಬ್ಬರು ವಿಡಿಯೋ ಸಾಂಗ್​ ಮಾಡುತ್ತಾರೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಅವರು ನಟಿಸುವುದನ್ನು ನಾನೆಂದೂ ನೋಡಿಲ್ಲ. ನೋಡಿದಾಗ ಹೇಳುತ್ತೇನೆ. ಅಂಥದ್ದೇನಾದರೂ ಆದರೆ ನನ್ನ ಗಮನಕ್ಕೆ ತನ್ನಿ’ ಎಂದು ಕಂಗನಾ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ಹೃತಿಕ್​ ರೋಷನ್​ ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ವಾಟ್ಸಪ್​ ಮೆಸೇಜ್​ ಲೀಕ್​; ಸ್ಟಾರ್​ ದಂಪತಿ ಮೇಲೆ ಅನುಮಾನ

ಬಾಲಿವುಡ್​ನಲ್ಲಿ ಅನೇಕರನ್ನು ಕಂಗನಾ ರಣಾವತ್​ ಅವರು ಎದುರು ಹಾಕಿಕೊಂಡಿದ್ದಾರೆ. ಅದರಲ್ಲಿ ಹೃತಿಕ್​ ರೋಷನ್​ ಕೂಡ ಒಬ್ಬರು. ಟೀಕಿಸುವ ಭರದಲ್ಲಿ ಅವರಿಗೆ ನಟನೆಯೇ ಬರುವುದಿಲ್ಲ ಎಂದು ಕಂಗನಾ ಹೇಳಿದ್ದು ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ. ‘ಹಾಗಾದರೆ ಸೂಪರ್​ 30, ಕೋಯಿ ಮಿಲ್​ ಗಯಾ, ಗುಜಾರಿಶ್​ ಚಿತ್ರಗಳಲ್ಲಿ ಇರುವುದು ಹೃತಿಕ್​ ನಟನೆ ಅಲ್ಲವೇ?’ ಎಂದು ಫ್ಯಾನ್ಸ್​ ಮರುಪ್ರಶ್ನೆ ಕೇಳಿದ್ದಾರೆ.

‘ಚಂದ್ರಮುಖಿ 2’ ಸಿನಿಮಾದ ಶೂಟಿಂಗ್​ನಲ್ಲಿ ಕಂಗನಾ ರಣಾವತ್​ ಬ್ಯುಸಿ ಆಗಿದ್ದಾರೆ. ಚಿತ್ರೀಕರಣದ ಗ್ಯಾಪ್​ನಲ್ಲಿ ಅವರು ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ನೆಟ್ಟಿಗರು ಕೇಳಿದ ಒಂದಷ್ಟು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಎಮರ್ಜೆನ್ಸಿ’ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಶೂಟಿಂಗ್​ ಮುಕ್ತಾಯ ಆಗಿದೆ. ಅದರಲ್ಲಿ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ