AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’

‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ನಿರ್ದೇಶಕ ಕಬೀರ್ ಖಾನ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇಂದಿನಿಂದ (ಜೂನ್​ 9) ಸಿನಿಮಾದ ಅಡ್ವಾನ್ಸ್​ ಬುಕಿಂಗ್ ಓಪನ್​ ಆಗಿದೆ. ಅದು ಕೂಡ ಬುರ್ಜ್​ ಖಲೀಫಾ ಮೇಲೆ ಎಂಬುದು ವಿಶೇಷ.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’
ಬುರ್ಜ್​ ಖಲೀಫಾ, ಕಾರ್ತಿಕ್​ ಆರ್ಯನ್​
ಮದನ್​ ಕುಮಾರ್​
|

Updated on: Jun 09, 2024 | 8:04 PM

Share

ಸಾಜಿದ್​ ನಾಡಿಯದ್ವಾಲ ಮತ್ತು ಕಬೀರ್​ ಖಾನ್​ ಅವರು ‘ಚಂದು ಚಾಂಪಿಯನ್​’ (Chandu Champion) ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ನಡೆದಿದೆ. ಈಗಾಗಲೇ ಅಡ್ವಾನ್ಸ್​ ಬುಕಿಂಗ್​ (Chandu Champion Advance Booking) ಓಪನ್​ ಮಾಡಲಾಗಿದೆ. ವಿಶೇಷ ಏನೆಂದರೆ, ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ನೀಡಲು ಈ ಸಿನಿಮಾ ತಂಡ ಒಂದು ವಿಶೇಷ ದಾರಿಯನ್ನು ಅನುಸರಿಸಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಎಂಬ ಖ್ಯಾತಿ ಹೊಂದಿರುವ ಬುರ್ಜ್​ ಖಲೀಫಾ (Burj Khalifa) ಮೇಲೆ ‘ಚಂದು ಚಾಂಪಿಯನ್​’ ಸಿನಿಮಾದ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ಬಿತ್ತರಿಸಲಾಗಿದೆ.

ಬುರ್ಜ್​ ಖಲೀಫಾ ಮೇಲೆ ಸಿನಿಮಾಗಳ ಪ್ರಚಾರ ಮಾಡುವುದು ಹೊಸದೇನೂ ಅಲ್ಲ. ಈಗಾಗಲೇ ‘ವಿಕ್ರಾಂತ್​ ರೋಣ’ ಸೇರಿದಂತೆ ಅನೇಕ ಸಿನಿಮಾಗಳ ಪ್ರಮೋಷನ್​ ಕಂಟೆಂಟ್​ಗಳನ್ನು ಬಿತ್ತರಿಸಲಾಗಿತ್ತು. ಆದರೆ ಅವೆಲ್ಲವೂ ಟೀಸರ್​, ಟ್ರೇಲರ್​, ಫಸ್ಟ್​ ಲುಕ್​ ಇತ್ಯಾದಿ ಆಗಿದ್ದವು. ಇದೇ ಮೊದಲ ಬಾರಿಗೆ ‘ಚಂದು ಚಾಂಪಿಯನ್​’ ಸಿನಿಮಾ ತಂಡದವರು ಮುಂಗಡ ಟಿಕೆಟ್​ ಬುಕಿಂಗ್​ ಬಗ್ಗೆ ಮಾಹಿತಿ ಬಿತ್ತರಿಸುವ ಮೂಲಕ ಹೊಸತನ ತೋರಿದ್ದಾರೆ.

ಕಾರ್ತಿಕ್​ ಆರ್ಯನ್​ ಅವರು ‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ಈಗಾಗಲೇ ಪೋಸ್ಟರ್​ ಬಿಡುಗಡೆ ಆಗಿದ್ದು ಪ್ರೇಕ್ಷಕರ ಕೌತುಕ ಕೆರಳಿಸಿದೆ. ಇಂದಿನಿಂದ (ಜೂನ್​ 9) ಬುಕಿಂಗ್​​ ಶುರುವಾಗಿದೆ. ಬುರ್ಜ್​ ಖಲೀಫಾ ಮೇಲೆ ಬುಕಿಂಗ್​ ವಿವರ ಹಂಚಿಕೊಂಡ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ

ಜೂನ್​ 14ರಂದು ‘ಚಂದು ಚಾಂಪಿಯನ್​’ ಸಿನಿಮಾ ಬಿಡುಗಡೆ ಆಗಲಿದೆ. ಕಾರ್ತಿಕ್​ ಆರ್ಯನ್​ ಅವರ ವೃತ್ತಿ ಜೀವನದಲ್ಲಿ ಇದು ತುಂಬ ಮಹತ್ವದ ಸಿನಿಮಾ ಆಗಿರಲಿದೆ. ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಪ್ಯಾರಾಲೆಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಮುರಳಿಕಾಂತ್​ ಪೇಟ್ಕರ್​ ಅವರ ಜೀವನದ ಕುರಿತು ಈ ಸಿನಿಮಾ ಇದೆ. ಕಬೀರ್ ಖಾನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ