AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’

‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ನಿರ್ದೇಶಕ ಕಬೀರ್ ಖಾನ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇಂದಿನಿಂದ (ಜೂನ್​ 9) ಸಿನಿಮಾದ ಅಡ್ವಾನ್ಸ್​ ಬುಕಿಂಗ್ ಓಪನ್​ ಆಗಿದೆ. ಅದು ಕೂಡ ಬುರ್ಜ್​ ಖಲೀಫಾ ಮೇಲೆ ಎಂಬುದು ವಿಶೇಷ.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’
ಬುರ್ಜ್​ ಖಲೀಫಾ, ಕಾರ್ತಿಕ್​ ಆರ್ಯನ್​
ಮದನ್​ ಕುಮಾರ್​
|

Updated on: Jun 09, 2024 | 8:04 PM

Share

ಸಾಜಿದ್​ ನಾಡಿಯದ್ವಾಲ ಮತ್ತು ಕಬೀರ್​ ಖಾನ್​ ಅವರು ‘ಚಂದು ಚಾಂಪಿಯನ್​’ (Chandu Champion) ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ನಡೆದಿದೆ. ಈಗಾಗಲೇ ಅಡ್ವಾನ್ಸ್​ ಬುಕಿಂಗ್​ (Chandu Champion Advance Booking) ಓಪನ್​ ಮಾಡಲಾಗಿದೆ. ವಿಶೇಷ ಏನೆಂದರೆ, ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ನೀಡಲು ಈ ಸಿನಿಮಾ ತಂಡ ಒಂದು ವಿಶೇಷ ದಾರಿಯನ್ನು ಅನುಸರಿಸಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಎಂಬ ಖ್ಯಾತಿ ಹೊಂದಿರುವ ಬುರ್ಜ್​ ಖಲೀಫಾ (Burj Khalifa) ಮೇಲೆ ‘ಚಂದು ಚಾಂಪಿಯನ್​’ ಸಿನಿಮಾದ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ಬಿತ್ತರಿಸಲಾಗಿದೆ.

ಬುರ್ಜ್​ ಖಲೀಫಾ ಮೇಲೆ ಸಿನಿಮಾಗಳ ಪ್ರಚಾರ ಮಾಡುವುದು ಹೊಸದೇನೂ ಅಲ್ಲ. ಈಗಾಗಲೇ ‘ವಿಕ್ರಾಂತ್​ ರೋಣ’ ಸೇರಿದಂತೆ ಅನೇಕ ಸಿನಿಮಾಗಳ ಪ್ರಮೋಷನ್​ ಕಂಟೆಂಟ್​ಗಳನ್ನು ಬಿತ್ತರಿಸಲಾಗಿತ್ತು. ಆದರೆ ಅವೆಲ್ಲವೂ ಟೀಸರ್​, ಟ್ರೇಲರ್​, ಫಸ್ಟ್​ ಲುಕ್​ ಇತ್ಯಾದಿ ಆಗಿದ್ದವು. ಇದೇ ಮೊದಲ ಬಾರಿಗೆ ‘ಚಂದು ಚಾಂಪಿಯನ್​’ ಸಿನಿಮಾ ತಂಡದವರು ಮುಂಗಡ ಟಿಕೆಟ್​ ಬುಕಿಂಗ್​ ಬಗ್ಗೆ ಮಾಹಿತಿ ಬಿತ್ತರಿಸುವ ಮೂಲಕ ಹೊಸತನ ತೋರಿದ್ದಾರೆ.

ಕಾರ್ತಿಕ್​ ಆರ್ಯನ್​ ಅವರು ‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ಈಗಾಗಲೇ ಪೋಸ್ಟರ್​ ಬಿಡುಗಡೆ ಆಗಿದ್ದು ಪ್ರೇಕ್ಷಕರ ಕೌತುಕ ಕೆರಳಿಸಿದೆ. ಇಂದಿನಿಂದ (ಜೂನ್​ 9) ಬುಕಿಂಗ್​​ ಶುರುವಾಗಿದೆ. ಬುರ್ಜ್​ ಖಲೀಫಾ ಮೇಲೆ ಬುಕಿಂಗ್​ ವಿವರ ಹಂಚಿಕೊಂಡ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ

ಜೂನ್​ 14ರಂದು ‘ಚಂದು ಚಾಂಪಿಯನ್​’ ಸಿನಿಮಾ ಬಿಡುಗಡೆ ಆಗಲಿದೆ. ಕಾರ್ತಿಕ್​ ಆರ್ಯನ್​ ಅವರ ವೃತ್ತಿ ಜೀವನದಲ್ಲಿ ಇದು ತುಂಬ ಮಹತ್ವದ ಸಿನಿಮಾ ಆಗಿರಲಿದೆ. ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಪ್ಯಾರಾಲೆಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಮುರಳಿಕಾಂತ್​ ಪೇಟ್ಕರ್​ ಅವರ ಜೀವನದ ಕುರಿತು ಈ ಸಿನಿಮಾ ಇದೆ. ಕಬೀರ್ ಖಾನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ