AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’

‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ನಿರ್ದೇಶಕ ಕಬೀರ್ ಖಾನ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇಂದಿನಿಂದ (ಜೂನ್​ 9) ಸಿನಿಮಾದ ಅಡ್ವಾನ್ಸ್​ ಬುಕಿಂಗ್ ಓಪನ್​ ಆಗಿದೆ. ಅದು ಕೂಡ ಬುರ್ಜ್​ ಖಲೀಫಾ ಮೇಲೆ ಎಂಬುದು ವಿಶೇಷ.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’
ಬುರ್ಜ್​ ಖಲೀಫಾ, ಕಾರ್ತಿಕ್​ ಆರ್ಯನ್​
ಮದನ್​ ಕುಮಾರ್​
|

Updated on: Jun 09, 2024 | 8:04 PM

Share

ಸಾಜಿದ್​ ನಾಡಿಯದ್ವಾಲ ಮತ್ತು ಕಬೀರ್​ ಖಾನ್​ ಅವರು ‘ಚಂದು ಚಾಂಪಿಯನ್​’ (Chandu Champion) ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ನಡೆದಿದೆ. ಈಗಾಗಲೇ ಅಡ್ವಾನ್ಸ್​ ಬುಕಿಂಗ್​ (Chandu Champion Advance Booking) ಓಪನ್​ ಮಾಡಲಾಗಿದೆ. ವಿಶೇಷ ಏನೆಂದರೆ, ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ನೀಡಲು ಈ ಸಿನಿಮಾ ತಂಡ ಒಂದು ವಿಶೇಷ ದಾರಿಯನ್ನು ಅನುಸರಿಸಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಎಂಬ ಖ್ಯಾತಿ ಹೊಂದಿರುವ ಬುರ್ಜ್​ ಖಲೀಫಾ (Burj Khalifa) ಮೇಲೆ ‘ಚಂದು ಚಾಂಪಿಯನ್​’ ಸಿನಿಮಾದ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ಬಿತ್ತರಿಸಲಾಗಿದೆ.

ಬುರ್ಜ್​ ಖಲೀಫಾ ಮೇಲೆ ಸಿನಿಮಾಗಳ ಪ್ರಚಾರ ಮಾಡುವುದು ಹೊಸದೇನೂ ಅಲ್ಲ. ಈಗಾಗಲೇ ‘ವಿಕ್ರಾಂತ್​ ರೋಣ’ ಸೇರಿದಂತೆ ಅನೇಕ ಸಿನಿಮಾಗಳ ಪ್ರಮೋಷನ್​ ಕಂಟೆಂಟ್​ಗಳನ್ನು ಬಿತ್ತರಿಸಲಾಗಿತ್ತು. ಆದರೆ ಅವೆಲ್ಲವೂ ಟೀಸರ್​, ಟ್ರೇಲರ್​, ಫಸ್ಟ್​ ಲುಕ್​ ಇತ್ಯಾದಿ ಆಗಿದ್ದವು. ಇದೇ ಮೊದಲ ಬಾರಿಗೆ ‘ಚಂದು ಚಾಂಪಿಯನ್​’ ಸಿನಿಮಾ ತಂಡದವರು ಮುಂಗಡ ಟಿಕೆಟ್​ ಬುಕಿಂಗ್​ ಬಗ್ಗೆ ಮಾಹಿತಿ ಬಿತ್ತರಿಸುವ ಮೂಲಕ ಹೊಸತನ ತೋರಿದ್ದಾರೆ.

ಕಾರ್ತಿಕ್​ ಆರ್ಯನ್​ ಅವರು ‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ಈಗಾಗಲೇ ಪೋಸ್ಟರ್​ ಬಿಡುಗಡೆ ಆಗಿದ್ದು ಪ್ರೇಕ್ಷಕರ ಕೌತುಕ ಕೆರಳಿಸಿದೆ. ಇಂದಿನಿಂದ (ಜೂನ್​ 9) ಬುಕಿಂಗ್​​ ಶುರುವಾಗಿದೆ. ಬುರ್ಜ್​ ಖಲೀಫಾ ಮೇಲೆ ಬುಕಿಂಗ್​ ವಿವರ ಹಂಚಿಕೊಂಡ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ

ಜೂನ್​ 14ರಂದು ‘ಚಂದು ಚಾಂಪಿಯನ್​’ ಸಿನಿಮಾ ಬಿಡುಗಡೆ ಆಗಲಿದೆ. ಕಾರ್ತಿಕ್​ ಆರ್ಯನ್​ ಅವರ ವೃತ್ತಿ ಜೀವನದಲ್ಲಿ ಇದು ತುಂಬ ಮಹತ್ವದ ಸಿನಿಮಾ ಆಗಿರಲಿದೆ. ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಪ್ಯಾರಾಲೆಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಮುರಳಿಕಾಂತ್​ ಪೇಟ್ಕರ್​ ಅವರ ಜೀವನದ ಕುರಿತು ಈ ಸಿನಿಮಾ ಇದೆ. ಕಬೀರ್ ಖಾನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್