ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’

‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ನಿರ್ದೇಶಕ ಕಬೀರ್ ಖಾನ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇಂದಿನಿಂದ (ಜೂನ್​ 9) ಸಿನಿಮಾದ ಅಡ್ವಾನ್ಸ್​ ಬುಕಿಂಗ್ ಓಪನ್​ ಆಗಿದೆ. ಅದು ಕೂಡ ಬುರ್ಜ್​ ಖಲೀಫಾ ಮೇಲೆ ಎಂಬುದು ವಿಶೇಷ.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’
ಬುರ್ಜ್​ ಖಲೀಫಾ, ಕಾರ್ತಿಕ್​ ಆರ್ಯನ್​
Follow us
|

Updated on: Jun 09, 2024 | 8:04 PM

ಸಾಜಿದ್​ ನಾಡಿಯದ್ವಾಲ ಮತ್ತು ಕಬೀರ್​ ಖಾನ್​ ಅವರು ‘ಚಂದು ಚಾಂಪಿಯನ್​’ (Chandu Champion) ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ನಡೆದಿದೆ. ಈಗಾಗಲೇ ಅಡ್ವಾನ್ಸ್​ ಬುಕಿಂಗ್​ (Chandu Champion Advance Booking) ಓಪನ್​ ಮಾಡಲಾಗಿದೆ. ವಿಶೇಷ ಏನೆಂದರೆ, ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ನೀಡಲು ಈ ಸಿನಿಮಾ ತಂಡ ಒಂದು ವಿಶೇಷ ದಾರಿಯನ್ನು ಅನುಸರಿಸಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಎಂಬ ಖ್ಯಾತಿ ಹೊಂದಿರುವ ಬುರ್ಜ್​ ಖಲೀಫಾ (Burj Khalifa) ಮೇಲೆ ‘ಚಂದು ಚಾಂಪಿಯನ್​’ ಸಿನಿಮಾದ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ಬಿತ್ತರಿಸಲಾಗಿದೆ.

ಬುರ್ಜ್​ ಖಲೀಫಾ ಮೇಲೆ ಸಿನಿಮಾಗಳ ಪ್ರಚಾರ ಮಾಡುವುದು ಹೊಸದೇನೂ ಅಲ್ಲ. ಈಗಾಗಲೇ ‘ವಿಕ್ರಾಂತ್​ ರೋಣ’ ಸೇರಿದಂತೆ ಅನೇಕ ಸಿನಿಮಾಗಳ ಪ್ರಮೋಷನ್​ ಕಂಟೆಂಟ್​ಗಳನ್ನು ಬಿತ್ತರಿಸಲಾಗಿತ್ತು. ಆದರೆ ಅವೆಲ್ಲವೂ ಟೀಸರ್​, ಟ್ರೇಲರ್​, ಫಸ್ಟ್​ ಲುಕ್​ ಇತ್ಯಾದಿ ಆಗಿದ್ದವು. ಇದೇ ಮೊದಲ ಬಾರಿಗೆ ‘ಚಂದು ಚಾಂಪಿಯನ್​’ ಸಿನಿಮಾ ತಂಡದವರು ಮುಂಗಡ ಟಿಕೆಟ್​ ಬುಕಿಂಗ್​ ಬಗ್ಗೆ ಮಾಹಿತಿ ಬಿತ್ತರಿಸುವ ಮೂಲಕ ಹೊಸತನ ತೋರಿದ್ದಾರೆ.

ಕಾರ್ತಿಕ್​ ಆರ್ಯನ್​ ಅವರು ‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ಈಗಾಗಲೇ ಪೋಸ್ಟರ್​ ಬಿಡುಗಡೆ ಆಗಿದ್ದು ಪ್ರೇಕ್ಷಕರ ಕೌತುಕ ಕೆರಳಿಸಿದೆ. ಇಂದಿನಿಂದ (ಜೂನ್​ 9) ಬುಕಿಂಗ್​​ ಶುರುವಾಗಿದೆ. ಬುರ್ಜ್​ ಖಲೀಫಾ ಮೇಲೆ ಬುಕಿಂಗ್​ ವಿವರ ಹಂಚಿಕೊಂಡ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ

ಜೂನ್​ 14ರಂದು ‘ಚಂದು ಚಾಂಪಿಯನ್​’ ಸಿನಿಮಾ ಬಿಡುಗಡೆ ಆಗಲಿದೆ. ಕಾರ್ತಿಕ್​ ಆರ್ಯನ್​ ಅವರ ವೃತ್ತಿ ಜೀವನದಲ್ಲಿ ಇದು ತುಂಬ ಮಹತ್ವದ ಸಿನಿಮಾ ಆಗಿರಲಿದೆ. ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಪ್ಯಾರಾಲೆಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಮುರಳಿಕಾಂತ್​ ಪೇಟ್ಕರ್​ ಅವರ ಜೀವನದ ಕುರಿತು ಈ ಸಿನಿಮಾ ಇದೆ. ಕಬೀರ್ ಖಾನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ